Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:15 - ಕನ್ನಡ ಸತ್ಯವೇದವು J.V. (BSI)

15 ಅವರು ಗಿಲ್ಯಾದಿನಲ್ಲಿದ್ದ ರೂಬೇನ್ಯರು, ಗಾದ್ಯರು ಮನಸ್ಸೆ ಕುಲದ ಅರ್ಧಜನರು ಇವರ ಬಳಿಗೆ ಬಂದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇವರು ಗಿಲ್ಯಾದನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇವರು ಗಿಲ್ಯಾದಿನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಕುಲದ ಅರ್ಧಜನರ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಈ ಹತ್ತು ಮಂದಿ ಗಿಲ್ಯಾದಿಗೆ ಹೋಗಿ ರೂಬೇನ್ಯರ, ಗಾದ್ಯರ ಮತ್ತು ಮನಸ್ಸೆಕುಲದ ಅರ್ಧಜನರ ಜೊತೆಗೆ ಮಾತನಾಡಿ ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇವರು ಗಿಲ್ಯಾದ್ ನಾಡಿನಲ್ಲಿ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಯ ಅರ್ಧ ಗೋತ್ರದವರ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:15
31 ತಿಳಿವುಗಳ ಹೋಲಿಕೆ  

ನೀವು ಮಾತಾಡುತ್ತಿರುವಾತನ ಮಾತನ್ನು ಕೇಳಲೊಲ್ಲೆವೆಂದು ಹೇಳಬಾರದು. ಭೂವಿುಯ ಮೇಲೆ ದೈವೋಕ್ತಿಗಳನ್ನಾಡಿದವನಿಗೆ ಕಿವಿಗೊಡ ಮನಸ್ಸಿಲ್ಲದೆ ಇದ್ದ ಇಸ್ರಾಯೇಲ್ಯರು ದಂಡನೆಗೆ ತಪ್ಪಿಸಿಕೊಳ್ಳದಿದ್ದರೆ ಪರಲೋಕದಿಂದ ಮಾತಾಡುವವನಿಗೆ ನಾವು ಕಿವಿಗೊಡ ಮನಸ್ಸಿಲ್ಲದೆ ತೊಲಗಿದರೆ ಹೇಗೆ ತಪ್ಪಿಸಿಕೊಂಡೇವು?


ನೀವೂ ನನ್ನಾತ್ಮನೂ ಕರ್ತನಾದ ಯೇಸುವಿನ ಸಾಮರ್ಥ್ಯ ಸಹಿತ ಒಟ್ಟುಗೂಡಿ ಬಂದಿರಲಾಗಿ


ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಅವನು ಅವರ ಮಾತನ್ನು ಕೇಳದೆ ಹೋದರೆ ಸಭೆಗೆ ಹೇಳು; ಆದರೆ ಸಭೆಯ ಮಾತನ್ನೂ ಕೇಳದೆಹೋದರೆ ಅವನು ನಿನಗೆ ಅಜ್ಞಾನಿಯಂತೆಯೂ ಭ್ರಷ್ಟನಂತೆಯೂ ಇರಲಿ.


ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮನನ್ನು ದುಃಖಪಡಿಸಿದರು; ಆದದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.


ನನ್ನ ಮಹತ್ಕೃತ್ಯಗಳನ್ನು ಮರೆಯದೆ ನನ್ನಲ್ಲಿಯೇ ಭರವಸವಿಟ್ಟು ನನ್ನ ಆಜ್ಞೆಗಳನ್ನು ಕೈಕೊಂಡಾರು ಎಂಬದೇ.


ಯೆಹೋವನೇ, ಇಸ್ರಾಯೇಲ್‍ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀನು ಧರ್ಮಸ್ವರೂಪನೆಂದು ಪ್ರಕಟವಾಯಿತು. ನಾವಾದರೋ ನಿನ್ನ ದೃಷ್ಟಿಯಲ್ಲಿ ಅಪರಾಧಿಗಳು. ಈ ನಮ್ಮ ದುಷ್ಕೃತ್ಯದ ನಿವಿುತ್ತವಾಗಿ ನಿನ್ನೆದುರಿನಲ್ಲಿ ನಿಲ್ಲಲಾರೆವು ಎಂಬದೇ.


ತಮಗೂ ತಮ್ಮ ಗಂಡುಮಕ್ಕಳಿಗೂ ಅವರಿಂದ ಹೆಣ್ಣುಗಳನ್ನು ತೆಗೆದುಕೊಂಡದರಿಂದ ದೇವಕುಲವು ಅನ್ಯದೇಶಗಳವರೊಡನೆ ವಿುಶ್ರವಾಯಿತು. ಪ್ರಭುಗಳೂ ಪ್ರಧಾನರೂ ಈ ದ್ರೋಹಕ್ಕೆ ಮುಂದಾಳುಗಳಾದರು ಎಂದು ತಿಳಿಸಿದರು.


ನೀವು ಸೆರೆಹಿಡಿದವರನ್ನು ಇಲ್ಲಿಗೆ ತರಬೇಡಿರಿ; ನೀವು ನಮ್ಮ ಪಾಪಾಪರಾಧಗಳ ಜೊತೆಯಲ್ಲಿ ಯೆಹೋವನಿಗೆ ವಿರುದ್ಧವಾದ ಮತ್ತೊಂದು ಅಪರಾಧವನ್ನು ಸೇರಿಸಬೇಕೆಂದಿರುತ್ತೀರಾ? ನಮ್ಮ ಅಪರಾಧವು ದೊಡ್ಡದು; ಇಸ್ರಾಯೇಲ್ಯರ ಮೇಲಿರುವ ದೇವಕೋಪವು ಉಗ್ರವಾಗಿದೆ ಎಂದು ಹೇಳಿದರು.


ಅವನಿಗೆ - ಉಜ್ಜೀಯನೇ, ಯೆಹೋವನಿಗೋಸ್ಕರ ಧೂಪ ಹಾಕುವದು ನಿನ್ನ ಕೆಲಸವಲ್ಲ; ಅದಕ್ಕೋಸ್ಕರ ಆರೋನನ ಸಂತಾನದವರಾದ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟುಹೋಗು; ನೀನು ದ್ರೋಹಿ. ಇದಕ್ಕಾಗಿ ದೇವರಾದ ಯೆಹೋವನಿಂದ ನಿನಗೆ ಮಾನವುಂಟಾಗಲಾರದು ಅನ್ನಲು


ಅಮಚ್ಯನು ಯೆಹೋವ ಭಕ್ತಿಯನ್ನು ಬಿಟ್ಟಂದಿನಿಂದ ಯೆರೂಸಲೇವಿುನವರು ಅವನಿಗೆ ವಿರೋಧವಾಗಿ ಒಳಸಂಚು ಮಾಡುತ್ತಿದ್ದರು. ಆದದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಆಳುಗಳನ್ನು ಕಳುಹಿಸಿ ಅವನನ್ನು ಅಲ್ಲಿಯೇ ಕೊಲ್ಲಿಸಿದರು.


ಇಸ್ರಾಯೇಲ್ಯರು ಅಂದಿನಿಂದ ಇಂದಿನವರೆಗೂ ದಾವೀದನ ಕುಟುಂಬದವರೊಡನೆ ಸಮಾಧಾನವಾಗಲೇ ಇಲ್ಲ.


ಆಗ ಯೋವಾಬನು - ನನ್ನ ಒಡೆಯನಾದ ಅರಸನೇ, ಯೆಹೋವನು ತನ್ನ ಪ್ರಜೆಗಳನ್ನು ನೂರರಷ್ಟು ಹೆಚ್ಚಿಸಲಿ. ಅವರೆಲ್ಲರೂ ನನ್ನ ಒಡೆಯನ ದಾಸರಷ್ಟೆ. ಒಡೆಯನು ಇಂಥದನ್ನು ಅಪೇಕ್ಷಿಸುವದೇನು? ಇಸ್ರಾಯೇಲ್ಯರನ್ನು ಅಪರಾಧಕ್ಕೆ ಗುರಿಮಾಡುವದೇಕೆ ಅಂದನು.


ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವದು; ಹಟವು ವಿುಥ್ಯಾಭಕ್ತಿಗೂ ವಿಗ್ರಹಾರಾಧನೆಗೂ ಸಮಾನವಾಗಿರುವದು. ನೀನು ಯೆಹೋವನ ಮಾತನ್ನು ತಳ್ಳಿಬಿಟ್ಟದ್ದರಿಂದ ಆತನು ನಿನ್ನನ್ನು ಅರಸುತನದಿಂದ ತಳ್ಳಿಬಿಟ್ಟಿದ್ದಾನೆ ಎಂದು ನುಡಿದನು.


ಈಗ ನೀವು ತಿರಿಗಿ ಯೆಹೋವನನ್ನು ಬಿಡುತ್ತೀರೋ? ನೀವು ಈ ಹೊತ್ತು ಯೆಹೋವನಿಗೆ ವಿರುದ್ಧವಾಗಿ ತಿರುಗಿಬಿದ್ದರೆ ನಾಳೆಯೇ ಆತನ ಕೋಪಾಗ್ನಿಯು ಇಸ್ರಾಯೇಲ್ ಸರ್ವಸಭೆಯ ಮೇಲೆ ಉರಿಯಹತ್ತುವದು.


ಅವರೆಲ್ಲರೂ ಶೀಲೋವಿನಲ್ಲಿ ಕೂಡಿ ಬಂದು ಅವರೊಡನೆ ಯುದ್ಧಕ್ಕೆ ಹೊರಡಲು ಸಿದ್ಧರಾದರು.


ಆದರೆ ನೀವು ಆತನನ್ನು ಬಿಟ್ಟು ಆತನ ಮಾತನ್ನು ಕೇಳಲೊಲ್ಲದೆ ಮರುಳುಗೊಂಡವರಾಗಿ ಇತರ ದೇವರುಗಳನ್ನು ಪೂಜಿಸಿ ಸೇವಿಸಿದರೆ


ಹಾಗೆ ಮಾಡಿದರೆ ಅವರು ನಿಮ್ಮ ಮಕ್ಕಳನ್ನು ಯೆಹೋವನ ಸೇವೆಯಿಂದ ತಪ್ಪಿಸಿ ಇತರ ದೇವರುಗಳನ್ನು ಪೂಜಿಸುವದಕ್ಕೆ ತಿರುಗಿಸಾರು; ಆಗ ಯೆಹೋವನು ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶ ಮಾಡುವನು.


ನೀವು ಆತನನ್ನು ಹಿಂಬಾಲಿಸದೆ ನಡೆಯುವ ಕಾರಣ ಆತನು ಈ ಜನರನ್ನು ಅರಣ್ಯದಲ್ಲಿ ಇನ್ನೂ ಇರಿಸಿದರೆ ಈ ಸಮಸ್ತಜನಾಂಗದ ನಾಶಕ್ಕೆ ನೀವೇ ಕಾರಣರಾಗುವಿರಿ ಎಂದು ಹೇಳಿದನು.


ಅಲ್ಲಿ ಅಮಾಲೇಕ್ಯರೂ ಕಾನಾನ್ಯರೂ ನಿಮ್ಮ ಎದುರಿನಲ್ಲಿರುವದರಿಂದ ನೀವು ಅವರ ಕತ್ತಿಯಿಂದ ಸತ್ತೀರಿ; ನೀವು ಯೆಹೋವನ ಮಾತನ್ನು ಅನುಸರಿಸದೆ ತಿರುಗಿಬಿದ್ದ ಕಾರಣ ಆತನು ನಿಮ್ಮೊಂದಿಗೆ ಇರುವದಿಲ್ಲ ಎಂದು ಹೇಳಿದನು.


ಯಾವ ಪುರುಷನಾಗಲಿ ಸ್ತ್ರೀಯಾಗಲಿ ಮತ್ತೊಬ್ಬನನ್ನು ಮೋಸಗೊಳಿಸುವದರಿಂದ ಯೆಹೋವನಿಗೆ ದ್ರೋಹಮಾಡಿ ಅಪರಾಧಿಗಳಾದರೆ ಅಂಥವರು ತಮ್ಮ ಅಪರಾಧವನ್ನು ಅರಿಕೆಮಾಡಬೇಕು.


ಆದರೆ ಅವರು ತಾವೂ ತಮ್ಮ ಪಿತೃಗಳೂ ನನಗೆ ದ್ರೋಹಿಗಳಾಗಿ ಪಾಪಮಾಡಿದವರೆಂದೂ ತಾವು ನನಗೆ ವಿರೋಧವಾಗಿ ನಡೆದದ್ದರಿಂದಲೇ


ಅವನು ಅಪರಾಧಿಯಾದದರಿಂದ ಯೆಹೋವನ ಸನ್ನಿಧಿಯಲ್ಲಿ ಈ ಪ್ರಾಯಶ್ಚಿತ್ತಯಜ್ಞವನ್ನು ಮಾಡಬೇಕು.


ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಲೋಹದ ಬಸವನನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ - ಇಸ್ರಾಯೇಲ್ಯರೇ, ನೋಡಿರಿ; ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಹೇಳಿದನು.


ಕುಲಕ್ಕೆ ಒಬ್ಬನಂತೆ ಹತ್ತುಮಂದಿ ಪ್ರಭುಗಳನ್ನೂ ಕಳುಹಿಸಿದರು. ಅವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಕುಲಗೋತ್ರ ಕುಟುಂಬಗಳಲ್ಲಿ ಮುಖ್ಯನಾಗಿದ್ದನು.


ಯೆಹೋವನ ಸರ್ವಸಭೆಯ ಮಾತನ್ನು ಕೇಳಿರಿ - ನೀವು ಇಸ್ರಾಯೇಲ್ ದೇವರಿಗೆ ವಿರುದ್ಧವಾಗಿ ಇಂಥ ದ್ರೋಹ ಮಾಡಿದ್ದೇಕೆ? ನಿಮಗೋಸ್ಕರ ವೇದಿಯನ್ನು ಕಟ್ಟಿಕೊಂಡದರಿಂದ ನೀವು ಯೆಹೋವನಿಗೆ ವಿಮುಖರಾದ ಹಾಗಾಯಿತಲ್ಲವೇ. ನೀವು ಈ ಹೊತ್ತು ಯೆಹೋವನಿಗೆ ವಿರುದ್ಧವಾಗಿ ತಿರುಗಿಬಿದ್ದಂತಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು