Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:27 - ಕನ್ನಡ ಸತ್ಯವೇದವು J.V. (BSI)

27 ಆದರೆ ಯೆಹೋವನ ಸಾನ್ನಿಧ್ಯದಲ್ಲಿ ಸರ್ವಾಂಗಹೋಮಯಜ್ಞ, ಸಮಾಧಾನಯಜ್ಞ ಮೊದಲಾದವುಗಳನ್ನು ಸಮರ್ಪಿಸಿ ಆರಾಧಿಸುವದಕ್ಕೆ ನಮಗೂ ಹಕ್ಕುಂಟೆಂಬದಕ್ಕೆ ಇದು ನಮಗೂ ನಿಮಗೂ ನಮ್ಮ ಸಂತಾನಕ್ಕೂ ನಿಮ್ಮ ಸಂತಾನಕ್ಕೂ ಸಾಕ್ಷಿಯಾಗಿರುವದು. ಇದರಿಂದ ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ - ಯೆಹೋವನಲ್ಲಿ ನಿಮಗೆ ಪಾಲಿಲ್ಲವೆಂದು ಹೇಳುವದಕ್ಕೆ ಆಸ್ಪದವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದರೆ ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮಯಜ್ಞ, ಸಮಾಧಾನಯಜ್ಞ, ಮೊದಲಾದವುಗಳನ್ನು ಸಮರ್ಪಿಸಿ ಆರಾಧಿಸುವುದಕ್ಕೋಸ್ಕರ ನಮಗೂ ಹಕ್ಕಿದೆ ಎಂಬುದಕ್ಕೆ ಇದು ನಮಗೂ, ನಿಮಗೂ, ನಮ್ಮ ಸಂತಾನಕ್ಕೂ ನಿಮ್ಮ ಸಂತಾನಕ್ಕೂ ಸಾಕ್ಷಿಯಾಗಿರುವುದು. ಇದರಿಂದ ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ ಯೆಹೋವನಲ್ಲಿ ನಿಮಗೆ ಪಾಲಿಲ್ಲವೆಂದು ಹೇಳುವುದಕ್ಕೆ ಆಸ್ಪದವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆದರೆ ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿ, ಸಮರ್ಪಣಬಲಿ, ಶಾಂತಿಸಮಾಧಾನದ ಬಲಿ ಮುಂತಾದುವುಗಳನ್ನು ಅರ್ಪಿಸಿ ಆರಾಧಿಸುವುದಕ್ಕೆ ನಿಮಗೆ ಹಕ್ಕು ಉಂಟೆಂಬುದಕ್ಕೆ ಇದು ಗುರುತಾಗಿರಲಿ. ನಮಗೂ ನಿಮಗೂ ನಮ್ಮ ಸಂತಾನಕ್ಕೂ ನಿಮ್ಮ ಸಂತಾನಕ್ಕೂ ಇದು ಸಾಕ್ಷಿಯಾಗಿರಲಿ.’ ಇದರಿಂದ ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಸರ್ವೇಶ್ವರನಲ್ಲಿ ನಿಮಗೆ ಪಾಲಿಲ್ಲ’ ಎಂದು ಹೇಳುವುದಕ್ಕೆ ಆಸ್ಪದವಿರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನೀವು ಆರಾಧಿಸುವ ದೇವರನ್ನೇ ನಾವೂ ಆರಾಧಿಸುತ್ತೇವೆಂಬುದನ್ನು ನಮ್ಮ ಜನರಿಗೆ ತೋರಿಸಿಕೊಡುವುದೇ ಈ ಯಜ್ಞವೇದಿಕೆಯ ನಿಜವಾದ ಉದ್ದೇಶವಾಗಿದೆ. ನಾವು ಯೆಹೋವನನ್ನು ಆರಾಧಿಸುತ್ತೇವೆ. ನಾವು ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನು ಯೆಹೋವನ ಸಾನ್ನಿಧ್ಯದಲ್ಲಿ ಸಮರ್ಪಿಸುತ್ತೇವೆ ಎಂಬುದಕ್ಕೆ ಈ ಯಜ್ಞವೇದಿಕೆಯು ನಿಮಗೂ ನಮಗೂ ಮತ್ತು ನಮ್ಮ ಮುಂದಿನ ಪೀಳಿಗೆಗಳಿಗೂ ಸಾಕ್ಷಿಯಾಗಿರುತ್ತದೆ. ನಾವು ಸಹ ನಿಮ್ಮಂತೆಯೇ ಇಸ್ರೇಲಿನ ಜನರೆಂಬುದನ್ನು ದೊಡ್ಡವರಾದ ಮೇಲೆ ನಿಮ್ಮ ಮಕ್ಕಳಿಗೆ ತಿಳಿದಿರಲಿ ಎಂಬುದು ನಮ್ಮ ಇಚ್ಛೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಮಗೂ ನಿಮಗೂ ನಮ್ಮ ತರುವಾಯ ನಮ್ಮ ಸಂತತಿಯವರಿಗೂ ಮಧ್ಯದಲ್ಲಿ ಒಂದು ಸಾಕ್ಷಿ ಉಂಟಾಗಿರುವಂತೆಯೂ ನಾವು ಯೆಹೋವ ದೇವರ ಸನ್ನಿಧಿಯಲ್ಲಿ ದಹನಬಲಿ, ಸಮಾಧಾನದ ಬಲಿ ಮುಂತಾದವುಗಳನ್ನು ಅರ್ಪಿಸಿ ಆರಾಧಿಸುವುದಕ್ಕೆ ನಿಮಗೆ ಗುರುತಾಗಿರುವಂತೆಯೂ, ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಯೆಹೋವ ದೇವರಲ್ಲಿ ನಿಮಗೆ ಭಾಗವಿಲ್ಲ,’ ಎಂದು ಹೇಳದೆ ಇರುವಂತೆಯೂ ಸಾಕ್ಷಿಗಾಗಿ ಕಟ್ಟಿದ್ದೇವೆ ಅಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:27
14 ತಿಳಿವುಗಳ ಹೋಲಿಕೆ  

ಎಲ್ಲಾ ಜನರಿಗೆ - ಇಗೋ, ಈ ಕಲ್ಲು ನಮ್ಮ ವಿಷಯದಲ್ಲಿ ಸಾಕ್ಷಿ ಹೇಳುವದು. ಯೆಹೋವನು ನಮಗೆ ಹೇಳಿದ ಎಲ್ಲಾ ಮಾತುಗಳನ್ನು ಇದು ಕೇಳಿರುವದರಿಂದ ನೀವು ನಿಮ್ಮ ದೇವರಾದ ಆತನನ್ನು ಅಲ್ಲಗಳೆದರೆ ಇದೇ ನಿಮಗೆ ವಿರೋಧಸಾಕ್ಷಿಯಾಗಿರುವದು ಎಂದು ಹೇಳಿ


ಈ ಹೊತ್ತು ನಿನಗೂ ನನಗೂ ಆದ ಒಡಂಬಡಿಕೆಗೆ ಈ ಕುಪ್ಪೆಯೇ ಸಾಕ್ಷಿ ಎಂದು ಹೇಳಿದ್ದರಿಂದ ಅದಕ್ಕೆ ಗಲೇದೆಂದು ಹೆಸರಾಯಿತು.


ರೂಬೇನ್ಯರೂ ಗಾದ್ಯರೂ ಯೆಹೋವನೇ ದೇವರು ಎಂಬದಕ್ಕೆ ಈ ವೇದಿಯೇ ಸಾಕ್ಷಿ ಎಂದು ಹೇಳಿ ಅದಕ್ಕೆ ಏದ್ ಎಂಬ ಹೆಸರಿಟ್ಟರು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ ಬೆಳೆಯ ದಶಮಾಂಶಗಳನ್ನೂ ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ


ಅನಂತರ ಸಮುವೇಲನು ವಿುಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ - ಯೆಹೋವನು ಇಲ್ಲಿಯವರೆಗೆ ನಮಗೆ ಸಹಾಯಮಾಡಿದನೆಂದು ಹೇಳಿ ಅದಕ್ಕೆ ಎಬೆನೆಜೆರೆಂದು ಹೆಸರಿಟ್ಟನು.


ರೂಬೇನ್ಯರೂ ಗಾದ್ಯರೂ ಮನಸ್ಸೆಕುಲದ ಅರ್ಧಜನರೂ ಕಾನಾನ್ ದೇಶದಲ್ಲಿರುವ ಯೊರ್ದನ್ ತೀರ ಪ್ರದೇಶಕ್ಕೆ ಬಂದಾಗ ಅಲ್ಲಿ ಒಂದು ಮಹಾವೇದಿಯನ್ನು ಕಟ್ಟಿದರು.


ಕೇಡುಮಾಡುವದಕ್ಕೋಸ್ಕರ ನಾನಂತೂ ಈ ಕುಪ್ಪೆಯನ್ನು ದಾಟಿ ನಿನ್ನ ಬಳಿಗೆ ಬರಕೂಡದು; ಹಾಗೆಯೇ ನೀನು ಈ ಕುಪ್ಪೆಯನ್ನೂ ಈ ಕಂಬವನ್ನೂ ದಾಟಿ ನನ್ನ ಬಳಿಗೆ ಬರಕೂಡದು; ಇದಕ್ಕೆ ಕುಪ್ಪೆಯೂ ಕಂಬವೂ ಈ ಎರಡೇ ಸಾಕ್ಷಿ.


ಬನ್ನಿರಿ, ಒಂದು ವೇದಿಯನ್ನು ಕಟ್ಟೋಣ ಎಂದುಕೊಂಡು ಹಾಗೆಯೇ ಮಾಡಿದೆವು. ಅದು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವದಕ್ಕೋಸ್ಕರವಲ್ಲ;


ಅವರು ಮುಂದೆ ನಮಗಾಗಲಿ ನಮ್ಮ ಸಂತಾನದವರಿಗಾಗಲಿ ಈ ಪ್ರಕಾರ ಹೇಳಿದರೆ ನಾವು ಅವರಿಗೆ - ಈ ಯೆಹೋವವೇದಿಯ ಮಾದರಿಯನ್ನು ನೋಡಿರಿ; ನಮ್ಮ ಪಿತೃಗಳು ಇದನ್ನು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವದಕ್ಕೋಸ್ಕರ ಕಟ್ಟಲಿಲ್ಲ; ಇದು ನಮಗೂ ನಿಮಗೂ ಮಧ್ಯದಲ್ಲಿ ಸಾಕ್ಷಿಯಾಗಿರುತ್ತದೆಯಷ್ಟೆ ಎಂದು ಹೇಳುವೆವು.


ನನ್ನ ಪಾಲೂ ಪಾನವೂ ಯೆಹೋವನೇ; ನೀನೇ ನನ್ನ ಸ್ವಾಸ್ತ್ಯವನ್ನು ಭದ್ರಗೊಳಿಸುತ್ತೀ.


ಆ ದಿನದಲ್ಲಿ ಐಗುಪ್ತದೇಶದ ಮಧ್ಯೆ ಯೆಹೋವನಿಗೆ ಒಂದು ಯಜ್ಞಪೀಠವೂ ದೇಶದ ಎಲ್ಲೆಯಲ್ಲಿ ಯೆಹೋವನಿಗೆ ಒಂದು ಸ್ತಂಭವೂ ಇರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು