Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:9 - ಕನ್ನಡ ಸತ್ಯವೇದವು J.V. (BSI)

9 ಆಗ ರೂಬೇನ್ಯರೂ ಗಾದ್ಯರೂ ಮನಸ್ಸೆಕುಲದ ಅರ್ಧಜನರೂ ಕಾನಾನ್ ದೇಶದ ಶೀಲೋವಿನಲ್ಲಿದ್ದ ಇಸ್ರಾಯೇಲ್ಯರನ್ನು ಬಿಟ್ಟು ಯೆಹೋವನ ಆಜ್ಞೆಗನುಸಾರವಾಗಿ ಮೋಶೆಯಿಂದ ತಮಗೆ ಸಿಕ್ಕಿದ ಸ್ವಾಸ್ತ್ಯವಾದ ಗಿಲ್ಯಾದ್ ದೇಶಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ರೂಬೇನ್ಯರೂ ಗಾದ್ಯರೂ ಮನಸ್ಸೆ ಕುಲದ ಅರ್ಧ ಜನರೂ ಕಾನಾನ್ ದೇಶದ ಶೀಲೋವಿನಲ್ಲಿದ್ದ ಇಸ್ರಾಯೇಲರನ್ನು ಬಿಟ್ಟು ಯೆಹೋವನ ಆಜ್ಞೆಗನುಸಾರವಾಗಿ ಮೋಶೆಯಿಂದ ತಮಗೆ ಸಿಕ್ಕಿದ ಸ್ವತ್ತಾದ ಗಿಲ್ಯಾದ್ ದೇಶಕ್ಕೆ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಕುಲದ ಅರ್ಧಜನರು ಕಾನಾನ್ ನಾಡಿನ ಶಿಲೋವಿನಲ್ಲಿದ್ದ ಇಸ್ರಯೇಲರನ್ನು ಬಿಟ್ಟು ಸರ್ವೇಶ್ವರನ ಆಜ್ಞೆಗನುಸಾರ ಮೋಶೆಯಿಂದ ತಮಗೆ ದೊರಕಿದ ಸೊತ್ತಾದ ಗಿಲ್ಯಾದ್ ನಾಡಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದ್ದರಿಂದ ರೂಬೇನ್ ಕುಲದವರು, ಗಾದ್ಯರು, ಮನಸ್ಸೆಕುಲದ ಅರ್ಧಜನರು ಇಸ್ರೇಲಿನ ಬೇರೆ ಕುಲದ ಜನರನ್ನು ಬಿಟ್ಟು ಹೊರಟರು. ಅವರು ಕಾನಾನಿನ ಶೀಲೋವಿನಲ್ಲಿದ್ದರು. ಅವರು ಆ ಸ್ಥಳವನ್ನು ಬಿಟ್ಟು ಗಿಲ್ಯಾದ್‌ಗೆ ಹಿಂದಿರುಗಿ ಹೋದರು. ಮೋಶೆಯು ಅವರಿಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದ ತಮ್ಮ ಪ್ರದೇಶಕ್ಕೆ ಅವರು ಹೋದರು. ಅವರಿಗೆ ಈ ಪ್ರದೇಶವನ್ನು ಕೊಡಬೇಕೆಂದು ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ರೂಬೇನನ ಗೋತ್ರದವರು, ಗಾದ್ಯ ಗೋತ್ರದವರು, ಮನಸ್ಸೆಯ ಅರ್ಧ ಗೋತ್ರದವರು ಕಾನಾನ್ ದೇಶದ ಶೀಲೋವಿನಲ್ಲಿದ್ದ ಇಸ್ರಾಯೇಲರನ್ನು ಬಿಟ್ಟು, ಯೆಹೋವ ದೇವರು ಮೋಶೆಗೆ ಕೊಟ್ಟ ಮಾತಿನ ಪ್ರಕಾರ ತಾವು ವಶಮಾಡಿಕೊಂಡ ತಮ್ಮ ಗಿಲ್ಯಾದ್ ನಾಡಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:9
19 ತಿಳಿವುಗಳ ಹೋಲಿಕೆ  

ಗಾದ್ಯರಲ್ಲಿಯೂ ರೂಬೇನ್ಯರಲ್ಲಿಯೂ ಯುದ್ಧಸನ್ನದ್ಧರಾದವರೆಲ್ಲರೂ ನಿಮ್ಮೊಡನೆ ಯೊರ್ದನ್ ಹೊಳೆಯನ್ನು ದಾಟಿ ಯೆಹೋವನ ಮುಂದೆ ಯುದ್ಧಮಾಡಿದರೆ ಕಾನಾನ್ ದೇಶವು ನಿಮ್ಮ ಸ್ವಾಧೀನಕ್ಕೆ ಬಂದಾಗ ನೀವು ಗಿಲ್ಯಾದ್ ಪ್ರದೇಶವನ್ನು ಅವರಿಗೆ ಸ್ವಾಸ್ತ್ಯವಾಗುವದಕ್ಕೆ ಕೊಡಬೇಕು.


ನಮ್ಮ ಮನೆಗಳವರೂ ಹೆಂಡತಿಯರೂ ದನಕುರಿಗಳೂ ಇಲ್ಲೇ ಗಿಲ್ಯಾದ್ ದೇಶದ ಊರುಗಳಲ್ಲಿ ಇರಲಿ.


ರೂಬೇನ್ ಕುಲದವರಿಗೂ ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಅವರು ಯಗ್ಜೇರ್, ಗಿಲ್ಯಾದ್ ಎಂಬ ಪ್ರದೇಶಗಳನ್ನು ನೋಡಿದಾಗ ಅವು ದನಕುರಿಗಳ ಮೇವಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡು


ಗಿಲ್ಯಾದ್ ಸೀಮೆಯೂ ಮನಸ್ಸೆಯ ದೇಶವೂ ನನ್ನವು; ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣವು. ನನ್ನ ರಾಜದಂಡವು ಯೆಹೂದಕುಲವೇ.


ಗಿಲ್ಯಾದಿನ ಅರ್ಧಭಾಗವೂ ಓಗನ ರಾಜಧಾನಿಗಳಾಗಿದ್ದ ಬಾಷಾನಿನ ಅಷ್ಟರೋತ್, ಎದ್ರೈ ಎಂಬ ಪಟ್ಟಣಗಳೂ ಮನಸ್ಸೆಯ ಮಗನಾದ ಮಾಕೀರನ ಗೋತ್ರದ ಅರ್ಧಜನರಿಗೆ ಸಿಕ್ಕಿದವು.


ಹೆಷ್ಬೋನಿನ ಅರಸನಾದ ಸೀಹೋನನ ರಾಜ್ಯದ ಉಳಿದ ಭಾಗವಾಗಿರುವ ಯಗ್ಜೇರ್ ಮೊದಲಾದ ಗಿಲ್ಯಾದಿನ ಎಲ್ಲಾ ಪಟ್ಟಣಗಳು, ರಬ್ಬಾ ಊರಿನ ಪೂರ್ವದಲ್ಲಿರುವ ಅರೋಯೇರ್ ಪಟ್ಟಣದವರೆಗೆ ವಿಸ್ತರಿಸಿಕೊಂಡಿರುವ ಅಮ್ಮೋನಿಯರ ಅರ್ಧರಾಜ್ಯ,


ಗಿಲ್ಯಾದ್ ಸೀಮೆಯು, ಗೆಷೂರ್ಯರ ಮತ್ತು ಮಾಕತೀಯರ ಪ್ರಾಂತ್ಯಗಳು, ಹೆರ್ಮೋನ್ ಬೆಟ್ಟದ ಮೇಲಿನ ಎಲ್ಲಾ ಪ್ರದೇಶವು,


ರೂಬೇನ್ಯರೂ ಗಾದ್ಯರೂ ಮನಸ್ಸೆಕುಲದ ಅರ್ಧಜನರೂ ಕಾನಾನ್ ದೇಶದಲ್ಲಿರುವ ಯೊರ್ದನ್ ತೀರ ಪ್ರದೇಶಕ್ಕೆ ಬಂದಾಗ ಅಲ್ಲಿ ಒಂದು ಮಹಾವೇದಿಯನ್ನು ಕಟ್ಟಿದರು.


ಗಿಲ್ಯಾದ್ಯರು ಯೊರ್ದನಿನ ಆಚೆಯಲ್ಲೇ ಉಳಿದರು; ದಾನ್ ಕುಲದವರು ಹಡಗುಗಳಲ್ಲಿಯೇ ಉಳಿದದ್ದೇಕೆ? ಆಶೇರ್ ಕುಲದವರು ತಮ್ಮ ರೇವುಗಳನ್ನು ಬಿಡದೆ ಸಮುದ್ರತೀರದಲ್ಲಿ ಸುಮ್ಮನೆ ಕೂತುಬಿಟ್ಟರು.


ಅವನನ್ನು ಗಿಲ್ಯಾದ್, ಆಶೇರ್, ಇಜ್ರೇಲ್, ಎಫ್ರಾಯೀಮ್, ಬೆನ್ಯಾಮೀನ್ ಇವುಗಳ ಜನರ ಮೇಲೆಯೂ ಬೇರೆ ಎಲ್ಲಾ ಇಸ್ರಾಯೇಲ್ಯರ ಮೇಲೆಯೂ ಅರಸನನ್ನಾಗಿ ಮಾಡಿದನು.


ಮೂಡಣದಿಕ್ಕಿನಲ್ಲಿ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅರಣ್ಯವು ಇವರ ಮೇರೆ.


ಅದಕ್ಕೆ ಮೋಶೆ - ನೀವು ಆ ಮಾತಿನಂತೆ ನಡೆದರೆ ನಿಮ್ಮಲ್ಲಿರುವ ಭಟರೆಲ್ಲರೂ ಯುದ್ಧಸನ್ನದ್ಧರಾಗಿ


ತರುವಾಯ ನೀವು ತಿರಿಗಿ ಬಂದು ಆತನ ದೃಷ್ಟಿಯಲ್ಲೂ ಇಸ್ರಾಯೇಲ್ಯರ ದೃಷ್ಟಿಯಲ್ಲೂ ನಿರ್ದೋಷಿಗಳಾಗಿರುವಿರಿ, ಮತ್ತು ಈ ಪ್ರದೇಶವು ಯೆಹೋವನ ಸನ್ನಿಧಿಯಲ್ಲೇ ನಿಮಗೆ ಸ್ವಾಸ್ತ್ಯವಾಗಿರುವದು.


ಆ ಕಾಲದಲ್ಲಿ ನಾನು ನಿಮಗೆ - ನಿಮ್ಮ ದೇವರಾದ ಯೆಹೋವನು ಈ ಪ್ರದೇಶವನ್ನೇ ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದಾನೆ. ಆದರೆ ನಿಮ್ಮ ಭಟರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಾಯೇಲ್ಯರ ಮುಂದೆ ಹೊರಟು ಹೊಳೇ ದಾಟಿ ಹೋಗಬೇಕು.


ಅನಂತರ ನಿಮ್ಮಂತೆ ನಿಮ್ಮ ಸಹೋದರರಿಗೂ ಯೆಹೋವನಿಂದ ವಿಶ್ರಾಂತಿ ದೊರಕಿದಾಗ ನಿಮ್ಮಲ್ಲಿ ಪ್ರತಿಯೊಬ್ಬನೂ ನಾನು ಕೊಟ್ಟ ಸ್ವಾಸ್ತ್ಯಕ್ಕೆ ತಿರಿಗಿ ಬರಬಹುದು ಎಂದು ಆಜ್ಞಾಪಿಸಿದೆನು.


ಮೋಶೆಯು ಮೋವಾಬ್ಯರ ಮೈದಾನದಿಂದ ಯೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಪರ್ವತಕ್ಕೆ ಹೋಗಿ ಪಿಸ್ಗಾ ಎಂಬ ಬೆಟ್ಟದ ಶಿಖರವನ್ನು ಹತ್ತಿದನು. ಆಗ ಯೆಹೋವನು [ಕಾನಾನ್] ದೇಶವನ್ನೆಲ್ಲಾ ಅಂದರೆ ದಾನ್ ಪಟ್ಟಣದವರೆಗೂ


ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ ಗಿಲ್ಯಾದಿನಲ್ಲಿಯೂ ಇರುವ ಇಸ್ರಾಯೇಲ್ಯರೆಲ್ಲರೂ ಏಕಮನಸ್ಸಿನಿಂದ ಹೊರಟು ವಿುಚ್ಪೆಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ನೆರೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು