Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 23:15 - ಕನ್ನಡ ಸತ್ಯವೇದವು J.V. (BSI)

15 ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ಈಗ ನಿಮಗೆ ಎಲ್ಲಾ ತರದ ಮೇಲನ್ನು ಅನುಗ್ರಹಿಸಿದಂತೆಯೇ ನಿಮ್ಮ ಮೇಲೆ ಸಕಲವಿಧವಾದ ಕೇಡುಗಳನ್ನೂ ಬರಮಾಡಿ ತಾನು ಕೊಟ್ಟಿರುವ ಈ ಉತ್ತಮದೇಶದಿಂದ ನಿಮ್ಮನ್ನು ತೆಗೆದು ನಾಶಮಾಡಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ಈಗ ನಿಮಗೆ ಎಲ್ಲಾ ತರದ ಮೇಲನ್ನು ಅನುಗ್ರಹಿಸಿದಂತೆಯೇ ನಿಮ್ಮ ಮೇಲೆ ಸಕಲ ವಿಧವಾದ ಕೇಡುಗಳನ್ನು ಬರಮಾಡಿ, ತಾನು ಕೊಟ್ಟಿರುವ ಈ ಉತ್ತಮ ದೇಶದಿಂದ ನಿಮ್ಮನ್ನು ತೆಗೆದು ನಾಶಮಾಡಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಿಮ್ಮ ದೇವರಾದ ಸರ್ವೇಶ್ವರ ತಮ್ಮ ವಾಗ್ದಾನಕ್ಕನುಸಾರ ಈಗ ನಿಮಗೆ ಎಲ್ಲಾ ವಿಧದ ಒಳಿತನ್ನೂ ಅನುಗ್ರಹಿಸಿದಂತೆಯೇ ನಿಮ್ಮ ಮೇಲೆ ಎಲ್ಲಾ ತರದ ಕೇಡುಗಳನ್ನು ಬರಮಾಡಿ ತಾವು ಕೊಟ್ಟ ಈ ಚೆಲುವಾದ ನಾಡಿನಿಂದ ನಿಮ್ಮನ್ನು ನಿರ್ಮೂಲ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿಮ್ಮ ದೇವರಾದ ಯೆಹೋವನು ಮಾಡಿದ ಪ್ರತಿಯೊಂದು ಒಳ್ಳೆಯ ವಾಗ್ದಾನವು ನೆರವೇರಿದೆ. ಅದೇ ರೀತಿಯಲ್ಲಿ ಯೆಹೋವನು ತನ್ನ ಉಳಿದ ವಾಗ್ದಾನವನ್ನು ನೆರವೇರಿಸುವನು. ನೀವು ತಪ್ಪುಗಳನ್ನು ಮಾಡಿದರೆ ನಿಮಗೆ ಕೆಟ್ಟದ್ದಾಗುವುದೆಂದೂ ಆತನು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ಬಲವಂತವಾಗಿ ಹೊರಗಟ್ಟುವದಾಗಿಯೂ ಆತನು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಈಗ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಒಳ್ಳೆಯ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 23:15
18 ತಿಳಿವುಗಳ ಹೋಲಿಕೆ  

ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅಡ್ಡಿಮಾಡುತ್ತಾರೆ; ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಪರಿಪೂರ್ಣಮಾಡುವದಕ್ಕೆ ಹೋಗುತ್ತಾರೆ. ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.


ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದದರಿಂದ ಆತನು ಅವರನ್ನು ನಾಲ್ವತ್ತು ವರುಷಗಳ ತನಕ ಫಿಲಿಷ್ಟಿಯರ ಕೈಗೆ ಒಪ್ಪಿಸಿದನು.


ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದದರಿಂದ ಆತನು ಅವರನ್ನು ಏಳು ವರುಷಗಳ ಪರ್ಯಂತರ ವಿುದ್ಯಾನ್ಯರ ಕೈಗೆ ಒಪ್ಪಿಸಿದನು.


ಆದದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬವನಿಗೆ ಮಾರಿಬಿಟ್ಟನು. ಅವರು ಎಂಟು ವರುಷಗಳವರೆಗೆ ಅವನಿಗೆ ದಾಸರಾಗಿದ್ದರು.


ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಆತನು ಅವರ ದ್ರೋಹದ ನಿವಿುತ್ತ ಮೋವಾಬ್ಯರ ಅರಸನಾದ ಎಗ್ಲೋನನನ್ನು ಅವರಿಗೆ ವಿರೋಧವಾಗಿ ಬಲಪಡಿಸಿದನು.


ತಾನು ವಾಗ್ದಾನಮಾಡಿದಂತೆ ತನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಮಾಡಿದ ಅತಿಶ್ರೇಷ್ಠವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ.


ಇನ್ನು ಏನೇನು ಸಂಭವಿಸುವದೋ! ಯೆಹೋವನು ಇಸ್ರಾಯೇಲ್ಯರನ್ನು ಹೊಡಿಯುವನು. ಆಗ ಅವರು ನೀರಿನಲ್ಲಿರುವ ಆಪುಹುಲ್ಲೋ ಎಂಬಂತೆ ಹೊಯ್ದಾಡುವರು. ಅವರು ಅಶೇರವಿಗ್ರಹಸ್ತಂಭಗಳನ್ನು ಮಾಡಿಕೊಂಡು ಆತನಿಗೆ ಕೋಪವನ್ನೆಬ್ಬಿಸಿದದರಿಂದ ಆತನು ಅವರನ್ನು ಅವರ ಪಿತೃಗಳಿಗೆ ಕೊಟ್ಟ ದೇಶದಿಂದ ಕಿತ್ತುಹಾಕಿ ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ದೇಶದೊಳಗೆ ಚದರಿಸಿಬಿಡುವನು.


ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ; ಭೂನಿವಾಸಿಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.


ಇಗೋ, ಮುತ್ತಿಗೆಯ ದಿಬ್ಬಗಳು, ಪಟ್ಟಣವನ್ನು ಆಕ್ರವಿುಸುವದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗಕ್ಷಾಮವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದೀ.


ಇಗೋ, ನಾನು ಯೆಹೂದ್ಯರಿಗೂ ಯೆರೂಸಲೇವಿುನವರೆಲ್ಲರಿಗೂ ಕೊಟ್ಟ ಶಾಪದ ಕೇಡನ್ನೆಲ್ಲಾ ಅವರ ಮೇಲೆ ಬರಮಾಡುವೆನು; ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ ಎಂದು ಸೇನಾಧೀಶ್ವರ ಸ್ವಾವಿುಯೂ ಇಸ್ರಾಯೇಲ್ಯರ ದೇವರೂ ಆದ ಯೆಹೋವನು ಅನ್ನುತ್ತಾನೆ.


ನೀವು ನನ್ನ ನಿಯಮಗಳನ್ನು ಕೈಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ


ಯೆಹೋವನು ಇಂತೆನ್ನುತ್ತಾನೆ - ನಾನು ಈ ಜನರಿಗೆ ಇಷ್ಟು ದೊಡ್ಡ ಕೇಡನ್ನು ಬರಮಾಡಿದಂತೆ ವಾಗ್ದಾನಮಾಡಿದ ಎಲ್ಲಾ ಮೇಲನ್ನೂ ಬರಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು