Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:7 - ಕನ್ನಡ ಸತ್ಯವೇದವು J.V. (BSI)

7 ಆಗ ಅವರು ಯೆಹೋವನಾದ ನನಗೆ ಮೊರೆಯಿಡಲು ನಾನು ಅವರಿಗೂ ಐಗುಪ್ತ್ಯರಿಗೂ ಮಧ್ಯದಲ್ಲಿ ಕಾರ್ಗತ್ತಲೆಯನ್ನುಂಟುಮಾಡಿದೆನು. ಇದಲ್ಲದೆ ನಾನು ಐಗುಪ್ತ್ಯರ ಮೇಲೆ ಸಮುದ್ರವನ್ನು ಬರಮಾಡಿ ಅವರನ್ನು ಮುಚ್ಚಿಬಿಟ್ಟೆನು. ನಾನು ಐಗುಪ್ತದಲ್ಲಿ ಏನೇನು ಮಾಡಿದೆನೆಂಬದಕ್ಕೆ ನೀವು ಸಾಕ್ಷಿಗಳಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಯೆಹೋವನಾದ ನನಗೆ ಮೊರೆಯಿಡಲು ನಾನು ಅವರಿಗೂ, ಐಗುಪ್ತರಿಗೂ ಮಧ್ಯದಲ್ಲಿ ಕಾರ್ಗತ್ತಲೆಯನ್ನು ಉಂಟುಮಾಡಿದೆನು. ಇದಲ್ಲದೆ ನಾನು ಐಗುಪ್ತರ ಮೇಲೆ ಸಮುದ್ರವನ್ನು ಬರಮಾಡಿ ಅವರನ್ನು ಮುಳುಗಿಸಿಬಿಟ್ಟೆನು. ನಾನು ಐಗುಪ್ತದಲ್ಲಿ ಏನೇನು ಮಾಡಿದೆನೆಂಬುದಕ್ಕೆ ನೀವು ಸಾಕ್ಷಿಗಳಾಗಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ನಿಮ್ಮ ಪೂರ್ವಜರು ನನಗೆ ಮೊರೆಯಿಟ್ಟರು. ನಾನು ಅವರಿಗೂ ಈಜಿಪ್ಟಿನವರಿಗೂ ಮಧ್ಯೆ ಕಾರ್ಗತ್ತಲೆಯನ್ನು ಉಂಟುಮಾಡಿದೆ. ಇದಲ್ಲದೆ ಈಜಿಪ್ಟಿನವರ ಮೇಲೆ ಸಮುದ್ರವನ್ನು ಬರಮಾಡಿ ಅವರನ್ನು ಮುಳುಗಿಸಿಬಿಟ್ಟೆ. ನಾನು ಈಜಿಪ್ಟಿನಲ್ಲಿ ಏನೇನು ಮಾಡಿದೆನೆಂಬುದಕ್ಕೆ ನೀವೇ ಸಾಕ್ಷಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ನಿಮ್ಮ ಜನರು ಯೆಹೋವನಾದ ನನ್ನ ಸಹಾಯ ಕೋರಿದರು. ನಾನು ಈಜಿಪ್ಟಿನ ಜನರಿಗೂ ಅವರಿಗೂ ಮಧ್ಯದಲ್ಲಿ ಕತ್ತಲೆಯಾಗುವಂತೆ ಮಾಡಿದೆ; ಸಮುದ್ರವು ಅವರನ್ನು ಮುಚ್ಚಿಬಿಡುವಂತೆ ಮಾಡಿದೆ. ಈಜಿಪ್ಟಿನ ಸೈನ್ಯಕ್ಕೆ ನಾನು ಮಾಡಿದ್ದನ್ನು ನೀವೇ ನೋಡಿದ್ದೀರಿ. “‘ತರುವಾಯ ಬಹಳ ಕಾಲದವರೆಗೆ ನೀವು ಅರಣ್ಯದಲ್ಲಿ ಪ್ರವಾಸ ಮಾಡಿಕೊಂಡಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ, ಅವರು ಯೆಹೋವ ದೇವರಾಗಿರುವ ನನಗೆ ಕೂಗಿದಾಗ ನಾನು ನಿಮಗೂ ಈಜಿಪ್ಟಿನವರಿಗೂ ಮಧ್ಯದಲ್ಲಿ ಅಂಧಕಾರವನ್ನು ಇಟ್ಟು, ಸಮುದ್ರವನ್ನು ಅವರ ಮೇಲೆ ಬರಮಾಡಿ, ಅವರನ್ನು ಮುಚ್ಚಿಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:7
14 ತಿಳಿವುಗಳ ಹೋಲಿಕೆ  

ಬೇರೆ ಯಾವ ದೇವರಾದರೂ ಮನಶ್ಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವದಕ್ಕೆ ಪ್ರಯತ್ನಿಸಿದ್ದುಂಟೋ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣಿಗೆದುರಾಗಿ ನಡಿಸಿದನಲ್ಲಾ.


ಆ ಮೇಘಸ್ತಂಭವು ಐಗುಪ್ತ್ಯರ ಪಾಳೆಯಕ್ಕೂ ಇಸ್ರಾಯೇಲ್ಯರ ಪಾಳೆಯಕ್ಕೂ ನಡುವೆ ಬಂದು [ಐಗುಪ್ತ್ಯರಿಗೆ] ಕತ್ತಲನ್ನು ಉಂಟುಮಾಡಿದರೂ [ಇಸ್ರಾಯೇಲ್ಯರಿಗೋಸ್ಕರ] ರಾತ್ರಿಯನ್ನು ಬೆಳಕುಮಾಡಿತು; ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರಕ್ಕೆ ಒಬ್ಬರು ಬರಲಿಲ್ಲ.


ಫರೋಹನು ಸಮೀಪಿಸುತ್ತಿರುವಾಗ ಇಸ್ರಾಯೇಲ್ಯರು ಕಣ್ಣೆತ್ತಿ ತಮ್ಮ ಹಿಂದೆ ಹೊರಟುಬಂದಿದ್ದ ಐಗುಪ್ತ್ಯರನ್ನು ಕಂಡು ಬಹಳ ಭಯಪಟ್ಟವರಾಗಿ ಯೆಹೋವನಿಗೆ ಮೊರೆಯಿಟ್ಟರು.


ಯೆಹೋವನು ಐಗುಪ್ತ್ಯರಲ್ಲಿ ಮಾಡಿದ ಈ ಪರಾಕ್ರಮಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಯೆಹೋವನಿಗೆ ಭಯಪಟ್ಟು ಆತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.


ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋದದರಿಂದ ಅವರು ತಮ್ಮ ಭಟರೆಲ್ಲರೂ ಸಂಹಾರವಾಗುವ ತನಕ ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಅವರ ಪಿತೃಗಳಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಆಣೆಯಿಟ್ಟನು.


ಮೋಶೆ ಇಸ್ರಾಯೇಲ್ಯರೆಲ್ಲರನ್ನು ಕರೆದು ಹೀಗಂದನು - ಯೆಹೋವನು ಐಗುಪ್ತದೇಶದಲ್ಲಿ ನಿಮ್ಮ ಕಣ್ಣು ಮುಂದೆ ಫರೋಹನಿಗೂ ಅವನ ಪರಿವಾರದವರಿಗೂ


ಆಮೇಲೆ ನೀವು ಕಾದೇಶಿನಲ್ಲಿ ಬಹುಕಾಲ ವಾಸವಾಗಿದ್ದಿರಿ.


ಮತ್ತು ನಾಲ್ವತ್ತು ವರುಷ ಆತನು ಯಾರ ಮೇಲೆ ಬಹಳವಾಗಿ ಕೋಪಿಸಿಕೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು