Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 3:17 - ಕನ್ನಡ ಸತ್ಯವೇದವು J.V. (BSI)

17 ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲಿ ಒಣನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲ್ಯರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಈ ಪ್ರಕಾರ ಜನರೆಲ್ಲಾ ಯೊರ್ದನಿನ ಆಚೆಗೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲಿ ಒಣನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲ್ಯರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಈ ಪ್ರಕಾರ ಜನರೆಲ್ಲರೂ ಯೊರ್ದನಿನ ಆಚೆಗೆ ತಲುಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿನ ನಡುವೆ ನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಯೇಲರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಹೀಗೆ ಜನರೆಲ್ಲರೂ ಜೋರ್ಡನಿನ ಆಚೆಗೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆ ಸ್ಥಳದಲ್ಲಿ ನೆಲವು ಒಣಗಿತ್ತು; ಯಾಜಕರು ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ನದಿಯ ಮಧ್ಯದವರೆಗೆ ತೆಗೆದುಕೊಂಡು ಹೋಗಿ ಅಲ್ಲಿ ನಿಂತುಕೊಂಡರು. ಯಾಜಕರು ಅಲ್ಲಿಯೇ ನಿಂತುಕೊಂಡಿರಲಾಗಿ ಎಲ್ಲಾ ಇಸ್ರೇಲರು ಒಣನೆಲದ ಮೇಲೆ ನಡೆದುಕೊಂಡು ಹೋಗಿ ಜೋರ್ಡನ್ ನದಿಯನ್ನು ದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನ್ ನದಿಯ ಮಧ್ಯದಲ್ಲಿ ಒಣನೆಲದಲ್ಲಿ ದೃಢವಾಗಿ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲರೆಲ್ಲರೂ ಒಣನೆಲದ ಮೇಲೆ ನಡೆದರು. ಹೀಗೆ ಇಡೀ ರಾಷ್ಟ್ರವು ಯೊರ್ದನ್ ನದಿ ಆಚೆ ಸೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 3:17
14 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರೋ ಸಮುದ್ರದೊಳಗೆ ಒಣನೆಲದಲ್ಲೇ ನಡೆದುಹೋದರು; ನೀರು ಅವರ ಎಡಗಡೆ ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತ್ತು.


ಇಸ್ರಾಯೇಲ್ಯರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತು.


ಸಮುದ್ರವನ್ನು ಒಣನೆಲವಾಗುವಂತೆ ಮಾಡಿದನು; ಜನರು ನದಿಯನ್ನು ಕಾಲಿನಿಂದ ದಾಟಿದರು; ಅದಕ್ಕಾಗಿ ನಾವು ಆತನಲ್ಲಿ ಆನಂದಪಡೋಣ.


ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.


ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಚಿ ಅದರಿಂದ ನೀರನ್ನು ಹೊಡೆಯಲು ನೀರು ಎರಡು ಭಾಗವಾಯಿತು; ಇಬ್ಬರೂ ಒಣನೆಲದ ಮೇಲೆ ದಾಟಿ ಹೋದರು.


ಯೊರ್ದನಿನ ಮಧ್ಯದಲ್ಲಿ ಯಾಜಕರು ನಿಂತಿರುವ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ಅವುಗಳನ್ನು ನಿಮ್ಮ ಸಂಗಡ ಈಚೇ ದಡಕ್ಕೆ ತಂದು ನೀವು ಈ ರಾತ್ರಿ ಇಳುಕೊಳ್ಳುವ ಸ್ಥಳದಲ್ಲಿ ನಿಲ್ಲಿಸಿರಿ ಎಂದು ಆಜ್ಞಾಪಿಸಬೇಕೆಂದು ಹೇಳಿದನು.


ನಂಬಿಕೆಯಿಂದಲೇ ಇಸ್ರಾಯೇಲ್ಯರು ಕೆಂಪುಸಮುದ್ರವನ್ನು ಒಣಭೂವಿುಯನ್ನು ದಾಟುವಂತೆ ದಾಟಿದರು; ಐಗುಪ್ತದೇಶದವರು ಅದನ್ನು ದಾಟುವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.


ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ವಿಭಾಗವಾಯಿತು.


ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ನೀವು ಯೊರ್ದನ್ ಹೊಳೆಯನ್ನು ದಾಟಿ ಕಾನಾನ್ ದೇಶವನ್ನು ಸೇರಿದಾಗ


ಜನರೆಲ್ಲಾ ಯೊರ್ದನಿನ ಆಚೆಗೆ ಸೇರಿದ ಮೇಲೆ ಯೆಹೋವನು ಯೆಹೋಶುವನಿಗೆ -


ಇಸ್ರಾಯೇಲ್ಯರು ಒಣನೆಲವಾಗಿದ್ದ ಈ ಯೊರ್ದನನ್ನು ದಾಟಿ ಬಂದದ್ದಕ್ಕಾಗಿ ಎಂದು ಹೇಳಿರಿ.


ಮೋಶೆಯು ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ ಯೆಹೋವನ ಅಪ್ಪಣೆಗಳನ್ನೆಲ್ಲಾ ಅವರು ನೆರವೇರಿಸುವವರೆಗೂ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲೇ ನಿಂತರು. ಜನರು ಬೇಗನೆ ಹೊಳೆದಾಟಿದರು.


ಜನರೆಲ್ಲಾ ಆಚೆಗೆ ಸೇರಿದ ಮೇಲೆ ಯಾಜಕರು ಯೆಹೋವನ ಮಂಜೂಷಸಹಿತವಾಗಿ ದಾಟಿ ಜನರ ಮುಂಗಡೆಯಲ್ಲಿ ಹೋದರು.


ಯೊರ್ದನಿನ ಪಶ್ಚಿಮದಲ್ಲಿದ್ದ ಎಲ್ಲಾ ಅಮೋರಿಯರ ಅರಸರೂ ಸಮುದ್ರದ ಬಳಿಯಲ್ಲಿದ್ದ ಸರ್ವ ಕಾನಾನ್ ರಾಜರೂ ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನನ್ನು ಬತ್ತಿಸಿ ಅವರನ್ನು ದಾಟಿಸಿದನೆಂದು ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿವಿುತ್ತವಾಗಿ ಅವರಿಗೆ ಧೈರ್ಯವಿಲ್ಲವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು