Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 4:14 - ಕನ್ನಡ ಸತ್ಯವೇದವು J.V. (BSI)

14 ಆ ದಿವಸ ಯೆಹೋವನು ಯೆಹೋಶುವನನ್ನು ಇಸ್ರಾಯೇಲ್ಯರೆಲ್ಲರ ದೃಷ್ಟಿಯಲ್ಲಿ ಘನಪಡಿಸಿದ್ದರಿಂದ ಅವರು ಮೋಶೆಯಲ್ಲಿ ಹೇಗೋ ಹಾಗೆಯೇ ಇವನಲ್ಲಿಯೂ ಇವನು ಜೀವದಿಂದಿದ್ದ ಕಾಲವೆಲ್ಲಾ ಭಯಭಕ್ತಿಯುಳ್ಳವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ದಿನದಲ್ಲಿ ಯೆಹೋವನು ಯೆಹೋಶುವನನ್ನು ಎಲ್ಲಾ ಇಸ್ರಾಯೇಲ್ಯರ ಮುಂದೆ ಘನಪಡಿಸಿದನು. ಅವರು ಮೋಶೆಗೆ ಹೇಗೆ ನಡೆದುಕೊಂಡರೋ ಹಾಗೆಯೇ ಯೆಹೋಶುವನು ಭಯ ಮತ್ತು ಗೌರವದಿಂದ ನಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆ ದಿನ ಸರ್ವೇಶ್ವರ ಯೆಹೋಶುವನನ್ನು ಇಸ್ರಯೇಲರೆಲ್ಲರ ದೃಷ್ಟಿಯಲ್ಲಿ ಇಷ್ಟು ಘನಪಡಿಸಿದ್ದರಿಂದ ಅವರು ಮೋಶೆಯಲ್ಲಿ ಹೇಗೋ ಹಾಗೆಯೇ ಇವನಲ್ಲಿಯೂ, ಇವನು ಜೀವದಿಂದಿದ್ದ ಕಾಲವೆಲ್ಲ ಗೌರವವುಳ್ಳವರು ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ಆ ದಿನ ಇಸ್ರೇಲಿನ ಎಲ್ಲಾ ಜನರ ದೃಷ್ಟಿಯಲ್ಲಿ ಯೆಹೋಶುವನನ್ನು ಘನವಂತನನ್ನಾಗಿ ಮಾಡಿದನು. ಆ ಹೊತ್ತಿನಿಂದ ಜನರು ಯೆಹೋಶುವನನ್ನು ಗೌರವಿಸತೊಡಗಿದರು. ಅವರು ಮೋಶೆಯನ್ನು ಗೌರವಿಸಿದಂತೆ ಯೆಹೋಶುವನನ್ನು ಅವನ ಜೀವಮಾನವೆಲ್ಲಾ ಗೌರವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆ ದಿನದಲ್ಲಿ ಯೆಹೋವ ದೇವರು ಯೆಹೋಶುವನನ್ನು ಇಸ್ರಾಯೇಲರೆಲ್ಲರ ಮುಂದೆ ಘನಪಡಿಸಿದರು. ಅವರು ಮೋಶೆಯನ್ನು ಗೌರವಿಸಿದ ಹಾಗೆಯೇ, ಅವನಿಗೂ ಅವನು ಬದುಕಿದ ದಿನಗಳಲ್ಲೆಲ್ಲಾ ಗೌರವ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 4:14
14 ತಿಳಿವುಗಳ ಹೋಲಿಕೆ  

ಆಗ ಯೆಹೋವನು ಯೆಹೋಶುವನಿಗೆ - ನಾನು ಇಂದಿನಿಂದ ನಿನ್ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸುವೆನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನೆಂಬದು ಅವರಿಗೆ ಗೊತ್ತಾಗುವದು.


ಯೆಹೂದ್ಯರಾದರೋ ದೇವರ ಕೃಪಾಹಸ್ತ ಪ್ರೇರಣೆಯಿಂದ ಏಕಮನಸ್ಸುಳ್ಳವರಾಗಿ ಯೆಹೋವನ ಧರ್ಮಶಾಸ್ತ್ರನುಸಾರ ಅರಸನಿಂದಲೂ ಪ್ರಭುಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.


ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ.


ಇಸ್ರಾಯೇಲ್ಯರೆಲ್ಲರೂ ಅರಸನ ಈ ತೀರ್ಪನ್ನು ಕೇಳಿ ನ್ಯಾಯನಿರ್ಣಯಿಸುವದಕ್ಕೆ ಈತನಲ್ಲಿ ದೇವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.


ಮಗನೇ, ಯೆಹೋವನಿಗೂ ರಾಜನಿಗೂ ಭಯಪಡು; ತಿರುಗಿಬೀಳುವವರ ಗೊಡವೆಗೆ ಹೋಗಬೇಡ.


ಆತನು ಗುಡುಗು ಮಳೆಗಳನ್ನು ಕಳುಹಿಸಿದನು. ಎಲ್ಲಾ ಜನರೂ ಯೆಹೋವನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು ಸಮುವೇಲನನ್ನು -


ಯೆಹೋವನು ಐಗುಪ್ತ್ಯರಲ್ಲಿ ಮಾಡಿದ ಈ ಪರಾಕ್ರಮಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಯೆಹೋವನಿಗೆ ಭಯಪಟ್ಟು ಆತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.


ಅವರೆಲ್ಲರೂ ಸಮುದ್ರವನ್ನು ದಾಟಿಹೋದರು; ಅವರೆಲ್ಲರೂ ಮೋಶೆಯ ಶಿಷ್ಯರಾಗುವದಕ್ಕಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ದೀಕ್ಷಾಸ್ನಾನವನ್ನು ಹೊಂದಿದರು.


ಅವರು ಸುಮಾರು ನಾಲ್ವತ್ತು ಸಾವಿರ ಭಟರಾಗಿದ್ದು ಯುದ್ಧಮಾಡುವದಕ್ಕಾಗಿ ಯೆಹೋವನ ಮುಂದೆ ಯೆರಿಕೋವಿನ ಬೈಲಿಗೆ ಬಂದರು.


ಯೆಹೋವನು ಯೆಹೋಶುವನಿಗೆ - ಆಜ್ಞಾಶಾಸನಗಳ ಮಂಜೂಷವನ್ನು ಹೊತ್ತ ಯಾಜಕರಿಗೆ ಯೊರ್ದನಿನಿಂದ ಮೇಲೆ ಬರಲಾಜ್ಞಾಪಿಸೆಂದು ಹೇಳಲು


ಯೆಹೋವನು ಇಸ್ರಾಯೇಲ್ಯರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದನು. ಇದಲ್ಲದೆ ಐಗುಪ್ತದೇಶದಲ್ಲಿ ಫರೋಹನ ಪ್ರಜಾಪರಿವಾರದವರು ಆ ಮೋಶೆಯನ್ನು ಮಹಾಪುರುಷನೆಂದು ತಿಳಿದುಕೊಂಡರು.


ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಲಿಯವರು ಇದನ್ನು ಕಂಡು ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿತೆಂದು ತಿಳಿದುಕೊಂಡು ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿದರು.


ಯೆಹೋವನು ಇಸ್ರಾಯೇಲ್ಯರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿ ಅವನಿಗಿಂತ ಮೊದಲು ಇಸ್ರಾಯೇಲ್ಯರನ್ನಾಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು