Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 4:24 - ಕನ್ನಡ ಸತ್ಯವೇದವು J.V. (BSI)

24 ಇದರಿಂದ ಭೂನಿವಾಸಿಗಳೆಲ್ಲರೂ ಯೆಹೋವನ ಹಸ್ತವು ಪರಾಕ್ರಮವುಳ್ಳದ್ದೆಂದು ತಿಳಿದುಕೊಳ್ಳುವರು. ನಿಮ್ಮ ದೇವರಾದ ಯೆಹೋವನಿಗೆ ಯಾವಾಗಲೂ ಭಯಪಡುವರು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇದರಿಂದ ಭೂನಿವಾಸಿಗಳೆಲ್ಲರೂ ಯೆಹೋವನ ಹಸ್ತವು ಪರಾಕ್ರಮವುಳ್ಳದ್ದೆಂದು ತಿಳಿದುಕೊಳ್ಳುವ ಹಾಗೆಯೂ ನಿಮ್ಮ ದೇವರಾದ ಯೆಹೋವನಿಗೆ ಯಾವಾಗಲೂ ಭಯಪಡುವವರಾಗಿರುವರು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಇದರಿಂದ ಭೂನಿವಾಸಿಗಳೆಲ್ಲರು ಸರ್ವೇಶ್ವರನ ಹಸ್ತವು ಪರಾಕ್ರಮವುಳ್ಳದ್ದೆಂದು ತಿಳಿದುಕೊಳ್ಳುವರು. ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಯಾವಾಗಲೂ ಭಯಭಕ್ತಿಯುಳ್ಳವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಈ ಭೂಲೋಕದ ಜನರೆಲ್ಲರೂ ಯೆಹೋವನೇ ಸರ್ವಶಕ್ತನೆಂದು ತಿಳಿದುಕೊಳ್ಳಬೇಕೆಂದು ಆತನು ಹೀಗೆ ಮಾಡಿದನು. ಹೀಗೆ ಅವರು ನಿಮ್ಮ ದೇವರಾದ ಯೆಹೋವನಿಗೆ ಯಾವಾಗಲೂ ಭಯಪಡುವರು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಭೂಮಿಯ ಜನರೆಲ್ಲಾ ಯೆಹೋವ ದೇವರ ಹಸ್ತವು ಬಲವುಳ್ಳದ್ದೆಂದು ತಿಳಿಯುವಂತೆಯೂ ನೀವು ನಿರಂತರವೂ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡುವಂತೆಯೂ ದೇವರಾದ ಯೆಹೋವ ದೇವರು ಹೀಗೆ ಮಾಡಿದರು,’ ಎಂದು ನೀವು ಹೇಳಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 4:24
24 ತಿಳಿವುಗಳ ಹೋಲಿಕೆ  

ಆದರೂ ಆತನು ತನ್ನ ಹೆಸರಿನ ನಿವಿುತ್ತವಾಗಿಯೂ ತನ್ನ ಶೌರ್ಯವನ್ನು ಪ್ರಕಟಿಸುವದಕ್ಕಾಗಿಯೂ ಅವರನ್ನು ರಕ್ಷಿಸಿದನು.


ನಿನ್ನ ಭುಜವು ಮಹಾಬಲವುಳ್ಳದ್ದು. ನಿನ್ನ ಹಸ್ತವು ಶಕ್ತಿಯುಳ್ಳದ್ದು; ನಿನ್ನ ಬಲಗೈ ಮಹತ್ತುಗಳನ್ನು ನಡಿಸುತ್ತದೆ.


ಪ್ರಭಾವೈಶ್ವರ್ಯಗಳು ನಿನ್ನ ಸನ್ನಿಧಿಯಿಂದ ಬರುತ್ತವೆ; ನೀನು ಸರ್ವಾಧಿಕಾರಿಯು; ಬಲಪರಾಕ್ರಮಗಳು ನಿನ್ನ ಹಸ್ತದಲ್ಲಿರುತ್ತವೆ; ಎಲ್ಲಾ ದೊಡ್ಡಸ್ತಿಕೆಗೂ ಶಕ್ತಿಗೂ ನೀನೇ ಮೂಲನು.


ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.


ಗಾಬರಿಯೂ ಹೆದರಿಕೆಯೂ ಅವರನ್ನು ಹಿಡಿದವೆ. ನಿನ್ನ ಭುಜಬಲದ ದೆಸೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗಿದ್ದಾರೆ. ಅಷ್ಟರಲ್ಲಿ ಯೆಹೋವನೇ, ನೀನು ಸಂಪಾದಿಸಿಕೊಂಡ ನಿನ್ನ ಪ್ರಜೆಗಳು ಸಾಗಿಹೋಗಿ ದೇಶವನ್ನು ಸೇರುವರು.


ಯೆಹೋವನು ಐಗುಪ್ತ್ಯರಲ್ಲಿ ಮಾಡಿದ ಈ ಪರಾಕ್ರಮಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಯೆಹೋವನಿಗೆ ಭಯಪಟ್ಟು ಆತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.


ನೀವೂ ನಿಮ್ಮ ಪುತ್ರಪೌತ್ರಾದಿಸಂತತಿಯವರೂ ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು ನಾನು ಈಗ ಬೋಧಿಸುವ ಆತನ ವಿಧಿನಿರ್ಣಯಗಳನ್ನೆಲ್ಲಾ ಅನುಸರಿಸಬೇಕೆಂದೂ ನೀವು ಬಹುಕಾಲ ಬಾಳಬೇಕೆಂದೂ ಇವುಗಳನ್ನು ಆಜ್ಞಾಪಿಸಿದ್ದಾನೆ.


ನಾನು ನಿಮಗೆ ಹಿತಮಾಡುವದನ್ನು ಬಿಟ್ಟು ವಿಮುಖನಾಗೆನು ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.


ಆತನು ಪರಿಶುದ್ಧರ ಸಭೆಯಲ್ಲಿ ಭಯಂಕರನಾದ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭೀಕರನು.


ಅನಂತರ ಅವನು ತನ್ನ ಪರಿವಾರದವರೊಡನೆ ಹಿಂದಿರುಗಿ ದೇವರ ಮನುಷ್ಯನ ಹತ್ತಿರ ಹೋಗಿ ಅವನ ಮುಂದೆ ನಿಂತು - ಇಸ್ರಾಯೇಲ್ ದೇಶದಲ್ಲಿರುವ ದೇವರ ಹೊರತಾಗಿ ಲೋಕದಲ್ಲಿ ಬೇರೆ ದೇವರು ಇರುವದೇ ಇಲ್ಲವೆಂಬದು ಈಗ ನನಗೆ ಗೊತ್ತಾಯಿತು; ನೀನು ದಯವಿಟ್ಟು ಕಾಣಿಕೆಯನ್ನು ಅಂಗೀಕರಿಸಬೇಕು ಎಂದು ಹೇಳಿದನು.


ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವನು; ನಾನು ನಿನ್ನನ್ನು ಕೊಂದು ನಿನ್ನ ತಲೆಯನ್ನು ಕಡಿದುಹಾಕಿ ಫಿಲಿಷ್ಟಿಯಸೈನ್ಯದ ಶವಗಳನ್ನು ಮೃಗಪಕ್ಷಿಗಳಿಗೆ ಹಂಚಿಕೊಡುವೆನು. ಇದರಿಂದ ಇಸ್ರಾಯೇಲ್ಯರೊಳಗೆ ದೇವರಿರುತ್ತಾನೆಂಬದು ಭೂಲೋಕದವರಿಗೆಲ್ಲಾ ತಿಳಿದು ಬರುವದು;


ಅದಕ್ಕೆ ಮೋಶೆ - ಭಯಪಡಬೇಡಿರಿ. ದೇವರು ನಿಮ್ಮನ್ನು ಪರೀಕ್ಷಿಸಬೇಕೆಂತಲೂ ತನಗೆ ಭಯಪಟ್ಟು ನೀವು ಪಾಪವನ್ನು ಮಾಡದೆ ಇರಬೇಕೆಂತಲೂ ಬಂದಿದ್ದಾನೆ ಅಂದನು.


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೆ ಉಳಿಸಿದೆನು.


ಭೂವಿುಯಲ್ಲಿರುವ ಎಲ್ಲಾ ಜನಗಳೂ ನಿಮ್ಮನ್ನು ಯೆಹೋವನ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು.


ಭೂಲೋಕದ ಜನರೆಲ್ಲರೂ ಯೆಹೋವನ ಹೊರತು ಬೇರೆ ದೇವರಿಲ್ಲವೆಂಬದನ್ನು ತಿಳಿದುಕೊಳ್ಳುವಂತೆ ಆತನು ಅವಶ್ಯವಿರುವಾಗೆಲ್ಲಾ ತನ್ನ ಸೇವಕನ ಮತ್ತು ಪ್ರಜೆಗಳಾದ ಇಸ್ರಾಯೇಲ್ಯರ ನ್ಯಾಯವನ್ನು ಸ್ಥಾಪಿಸುತ್ತಾ ಬರಲಿ.


ಆಗ ನಮ್ಮ ಪಿತೃಗಳಿಗೆ ನೀನು ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲದಲ್ಲೆಲ್ಲಾ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿರುವರು.


ನಿನ್ನ ಕೈಯೂ ದೇವರ ಕೈಯೂ ಸಮವೋ? ದೇವರ ಧ್ವನಿಯಂತೆ ಗುಡುಗಬಲ್ಲಿಯಾ?


ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ; ಭೂವಿುಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಕಾರ್ಯವನ್ನು ನೋಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು