Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 4:5 - ಕನ್ನಡ ಸತ್ಯವೇದವು J.V. (BSI)

5 ನೀವು ನಿಮ್ಮ ದೇವರಾದ ಯೆಹೋವನ ಮಂಜೂಷದ ಮುಂದಾಗಿ ಯೊರ್ದನಿನ ಮಧ್ಯಕ್ಕೆ ಹೋಗಿ ಇಸ್ರಾಯೇಲ್ ಕುಲಗಳ ಸಂಖ್ಯೆಗೆ ಸರಿಯಾಗುವಂತೆ ಪ್ರತಿಯೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ನೀವು ನಿಮ್ಮ ದೇವರಾದ ಯೆಹೋವನ ಮಂಜೂಷದ ಮುಂದಾಗಿ ಯೊರ್ದನಿನ ಮಧ್ಯಕ್ಕೆ ಹೋಗಿ ಇಸ್ರಾಯೇಲರ ಕುಲಗಳ ಸಂಖ್ಯೆಗೆ ಸರಿಯಾಗುವಂತೆ ಪ್ರತಿಯೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ನೀವು ನಮ್ಮ ದೇವರಾದ ಸರ್ವೇಶ್ವರನ ಮಂಜೂಷದ ಮುಂದಾಗಿ ಜೋರ್ಡನಿನ ಮಧ್ಯಕ್ಕೆ ಹೋಗಿ ಇಸ್ರಯೇಲ್ ಕುಲಗಳ ಸಂಖ್ಯೆಗೆ ಸರಿಯಾಗಿ ಪ್ರತಿಯೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಬನ್ನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ನದಿಯಲ್ಲಿ ನಿಮ್ಮ ದೇವರಾದ ಯೆಹೋವನ ಪವಿತ್ರ ಪೆಟ್ಟಿಗೆ ಇರುವ ಸ್ಥಳಕ್ಕೆ ಹೋಗಿ. ನಿಮ್ಮಲ್ಲಿ ಪ್ರತಿಯೊಬ್ಬರೂ ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋಶುವನು ಅವರಿಗೆ, “ನೀವು ಯೊರ್ದನ್ ನದಿ ಮಧ್ಯದಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಮಂಜೂಷದ ಮುಂದೆ ಇಸ್ರಾಯೇಲರ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬನೂ ಒಂದೊಂದು ಕಲ್ಲನ್ನು ಭುಜದ ಮೇಲೆ ಹೊತ್ತುಕೊಂಡು ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 4:5
7 ತಿಳಿವುಗಳ ಹೋಲಿಕೆ  

ಆಗ ಯೆಹೋಶುವನು ತಾನು ಇಸ್ರಾಯೇಲ್ಯರೊಳಗಿಂದ ಕುಲಕ್ಕೆ ಒಬ್ಬನಂತೆ ಆರಿಸಿಕೊಂಡ ಹನ್ನೆರಡು ಮಂದಿಯನ್ನು ಕರೆದು ಅವರಿಗೆ -


ಅವು ನಿಮ್ಮ ಮಧ್ಯದಲ್ಲಿ ಗುರುತಾಗಿರುವವು. ಮುಂದಣ ಕಾಲದಲ್ಲಿ ನಿಮ್ಮ ಮಕ್ಕಳು - ಈ ಕಲ್ಲುಗಳು ಏನು ಸೂಚಿಸುತ್ತವೆಂದು ನಿಮ್ಮನ್ನು ಕೇಳುವಾಗ


ಯಾಕೋಬನು ತನ್ನ ಕಡೆಯವರಿಗೆ - ಕಲ್ಲುಗಳನ್ನು ಕೂಡಿಸಿರಿ ಎಂದು ಹೇಳಲು ಅವರು ಕಲ್ಲುಗಳನ್ನು ಕೂಡಿಸಿ ಕುಪ್ಪೆಯನ್ನು ಮಾಡಿದಾಗ ಅವರೆಲ್ಲರೂ ಆ ಕುಪ್ಪೆಯ ಬಳಿಯಲ್ಲಿ ಸಹ ಭೋಜನವನ್ನು ಮಾಡಿದರು.


ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಆ ಬೆಟ್ಟದ ಬುಡದಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲ್ಯರ ಹನ್ನೆರಡು ಕುಲಗಳಿಗೆ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆ ಮಾಡಿಸಿ ಇಸ್ರಾಯೇಲ್ಯರ ಯೌವನಸ್ಥರಿಗೆ -


ಇಸ್ರಾಯೇಲ್ಯರೇ ಕೇಳಿರಿ. ನಿಮಗಿಂತ ಮಹಾಬಲಿಷ್ಠ ಜನಾಂಗಗಳನ್ನೂ ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಳ್ಳುವದಕ್ಕೆ ನೀವು ಈ ಯೊರ್ದನ್ ಹೊಳೆಯನ್ನು ಇಂದು ದಾಟುವವರಾಗಿದ್ದೀರಿ.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಪ್ರವೇಶಿಸುವದಕ್ಕೆ ನೀವು ಯೊರ್ದನ್ ಹೊಳೆಯನ್ನು ದಾಟುವಾಗ ಅಂದರೆ ನಿಮ್ಮ ಪಿತೃಗಳ ದೇವರಾದ ಯೆಹೋವನು ತಾನು ವಾಗ್ದಾನ ಮಾಡಿದಂತೆ ನಿಮಗೆ ಕೊಡುವ ಹಾಲೂ ಜೇನೂ ಹರಿಯುವ ದೇಶವನ್ನು ಪ್ರವೇಶಿಸುವದಕ್ಕೆ ನೀವು ಯೊರ್ದನ್ ಹೊಳೆಯನ್ನು ದಾಟುವಾಗ ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಿ ಅವುಗಳಿಗೆ ಗಿಲಾವುಮಾಡಿಸಿ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಅವುಗಳ ಮೇಲೆ ಬರಿಸಬೇಕು.


ರೂಬೇನ್ಯರೂ ಗಾದ್ಯರೂ ಮನಸ್ಸೆಕುಲದ ಅರ್ಧಜನರೂ ಕಾನಾನ್ ದೇಶದಲ್ಲಿರುವ ಯೊರ್ದನ್ ತೀರ ಪ್ರದೇಶಕ್ಕೆ ಬಂದಾಗ ಅಲ್ಲಿ ಒಂದು ಮಹಾವೇದಿಯನ್ನು ಕಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು