Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 4:7 - ಕನ್ನಡ ಸತ್ಯವೇದವು J.V. (BSI)

7 ನೀವು ಅವರಿಗೆ - ಯೆಹೋವನ ಒಡಂಬಡಿಕೆಯ ಮಂಜೂಷವು ಯೊರ್ದನನ್ನು ದಾಟುವಾಗ ಅದರ ಮುಂದೆ ಯೊರ್ದನಿನ ನೀರು ನಿಂತುಹೋಯಿತೆಂದು ಹೇಳಿರಿ. ಯೊರ್ದನಿನ ನೀರು ನಿಂತುಹೋಯಿತೆಂಬದಕ್ಕೆ ಈ ಕಲ್ಲುಗಳು ಇಸ್ರಾಯೇಲ್ಯರಿಗೆ ಸದಾಕಾಲವೂ ಸಾಕ್ಷಿಗಳಾಗಿರುವವು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀವು ಅವರಿಗೆ ಯೆಹೋವನ ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿ ದಾಟುವಾಗ ಅದರ ಮುಂದೆ ಯೊರ್ದನಿನ ನೀರು ನಿಂತುಹೋಯಿತೆಂದು ಹೇಳಿರಿ. ಯೊರ್ದನಿನ ನೀರು ನಿಂತು ಹೋಯಿತೆಂಬುದಕ್ಕೆ ಈ ಕಲ್ಲುಗಳು ಇಸ್ರಾಯೇಲ್ಯರಿಗೆ ಸದಾಕಾಲಕ್ಕೂ ಸಾಕ್ಷಿಗಳಾಗಿರುವವು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ‘ಸರ್ವೇಶ್ವರನ ಒಡಂಬಡಿಕೆಯ ಮಂಜೂಷವು ಜೋರ್ಡನನ್ನು ದಾಟುವಾಗ ಅದರ ಮುಂದೆ ಜೋರ್ಡನಿನ ನೀರು ನಿಂತುಹೋಯಿತು,’ ಎಂದು ಹೇಳಿರಿ. ಅದರ ನೀರು ನಿಂತುಹೋಯಿತೆಂಬುದಕ್ಕೆ ಈ ಕಲ್ಲುಗಳು ಇಸ್ರಯೇಲರಿಗೆ ಚಿರಸ್ಮಾರಕಗಳಾಗಿರುವುವು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅದಕ್ಕೆ ನೀವು, ‘ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಜೋರ್ಡನ್ ನದಿಯನ್ನು ದಾಟುತ್ತಿರುವಾಗ ಹರಿಯುವ ನೀರು ನಿಂತುಹೋಯಿತು’ ಎಂದು ಹೇಳಿರಿ. ಆ ಕಲ್ಲುಗಳು ಇಸ್ರೇಲರಿಗೆ ಸದಾಕಾಲ ಸಾಕ್ಷಿಗಳಾಗಿರುತ್ತವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀವು ಅವರಿಗೆ, ‘ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ಯೊರ್ದನ್ ನದಿಯ ನೀರು ವಿಭಾಗವಾಯಿತು. ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿಯನ್ನು ದಾಟುವಾಗ, ಯೊರ್ದನ್ ನದಿಯ ನೀರು ನಿಂತುಹೋಯಿತು. ಈ ಕಲ್ಲುಗಳು ಇಸ್ರಾಯೇಲರಿಗೆ ಎಂದೆಂದಿಗೂ ಜ್ಞಾಪಕಾರ್ಥವಾದ ಗುರುತು,’ ಎಂದು ಉತ್ತರಕೊಡಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 4:7
11 ತಿಳಿವುಗಳ ಹೋಲಿಕೆ  

ಆ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು. ಅದರಲ್ಲಿ ಯೆಹೋವನ ಘನಕ್ಕಾಗಿ ಹಬ್ಬವನ್ನು ಮಾಡಬೇಕು. ಅದನ್ನು ಶಾಶ್ವತನಿಯಮವೆಂದು ತಲತಲಾಂತರಕ್ಕೂ ಆಚರಿಸಬೇಕು.


ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. ಯೆಹೋವನು ದಯೆಯೂ ಕನಿಕರವೂ ಉಳ್ಳವನು.


ಆರೋನನ ಸಂತತಿಯವರಲ್ಲದ ಇತರರಲ್ಲಿ ಯಾರೂ ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು; ಸಮರ್ಪಿಸಿದರೆ ಕೋರಹನಿಗೂ ಅವನ ಜೊತೆಗಾರರಿಗೂ ಉಂಟಾದ ಗತಿಗೆ ಗುರಿಯಾದಾರೆಂದು ಇಸ್ರಾಯೇಲ್ಯರಿಗೆ ನೆನಪು ಹುಟ್ಟಿಸುವದಕ್ಕಾಗಿ ಅದು ಗುರುತಾಯಿತು.


ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಕವಚದ ಪಟ್ಟಿಗಳಲ್ಲಿ ಬಿಗಿಸಬೇಕು. ಅವು ಇಸ್ರಾಯೇಲ್ಯರ ಜ್ಞಾಪಕಾರ್ಥವಾದ ರತ್ನಗಳಾಗಿರುವವು. ಆರೋನನು ಯೆಹೋವನ ಸನ್ನಿಧಿಗೆ ಹೋಗುವಾಗೆಲ್ಲಾ ಇಸ್ರಾಯೇಲ್ಯರ ಕುಲಗಳ ಹೆಸರುಗಳನ್ನು ಆತನ ನೆನಪಿಗೆ ತರುವದಕ್ಕಾಗಿ ತನ್ನ ಎರಡು ಭುಜಗಳ ಮೇಲೆ ಧರಿಸಿಕೊಂಡು ಹೋಗುವನು.


ಇದು ನಿಮಗೋಸ್ಕರವಾಗಿರುವ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಹೀಗೆ ಮಾಡಿರಿ ಅಂದನು.


ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;


ಅವು ನಿಮ್ಮ ಮಧ್ಯದಲ್ಲಿ ಗುರುತಾಗಿರುವವು. ಮುಂದಣ ಕಾಲದಲ್ಲಿ ನಿಮ್ಮ ಮಕ್ಕಳು - ಈ ಕಲ್ಲುಗಳು ಏನು ಸೂಚಿಸುತ್ತವೆಂದು ನಿಮ್ಮನ್ನು ಕೇಳುವಾಗ


ನೀನು ಪ್ರಾಣರಕ್ಷಣೆಯ ಹಣವನ್ನು ಇಸ್ರಾಯೇಲ್ಯರಿಂದ ತೆಗೆದುಕೊಂಡು ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸಬೇಕು. ಇಸ್ರಾಯೇಲ್ಯರ ಪ್ರಾಣಗಳನ್ನು ಉಳಿಸಬೇಕೆಂಬದಾಗಿ ಆ ಕಪ್ಪವು ಯೆಹೋವನ ಸನ್ನಿಧಿಯಲ್ಲಿ ಜ್ಞಾಪಕ ಕೊಡುವದು.


ನಾನು ಯಾರನ್ನು ಮೆಚ್ಚಿದ್ದೇನೋ ಅವನ ಕೋಲು ಚಿಗುರುವುದು. ಇಸ್ರಾಯೇಲ್ಯರು ನಿವ್ಮಿುಬ್ಬರಿಗೆ ವಿರೋಧವಾಗಿ ಮಾಡುವ ಗುಣುಗುಟ್ಟುವಿಕೆಯು ನನಗೆ ಇನ್ನು ಕೇಳಿಸದಂತೆ ಹೀಗೆ ನಿಲ್ಲಿಸಿಬಿಡುತ್ತೇನೆ ಅಂದನು.


ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಯಾಕಂದರೆ ನೀವು [ರೊಟ್ಟಿಗೆ ಹುಳಿಹಾಕುವದಕ್ಕೆ ಅವಕಾಶವಿಲ್ಲದೆ] ಅವಸರದಿಂದ ಐಗುಪ್ತದೇಶವನ್ನು ಬಿಟ್ಟುಬಂದಿರಿ. ಐಗುಪ್ತದೇಶದಿಂದ ನಿಮಗೆ ಬಿಡುಗಡೆಯಾದ ದಿನವು ನಿಮ್ಮ ಜೀವಮಾನವೆಲ್ಲಾ ನೆನಪಿನಲ್ಲಿರುವಂತೆ ನೀವು ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ಏಳು ದಿವಸಗಳವರೆಗೂ ತಿನ್ನಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು