Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:22 - ಕನ್ನಡ ಸತ್ಯವೇದವು J.V. (BSI)

22 ಯೆಹೋಶುವನು ದೇಶವನ್ನು ಸಂಚರಿಸಿ ನೋಡಿದ್ದ ಇಬ್ಬರು ಮನುಷ್ಯರಿಗೆ - ನೀವು ಆ ಸೂಳೆಯ ಮನೆಗೆ ಹೋಗಿ ಅವಳಿಗೆ ಪ್ರಮಾಣ ಮಾಡಿದಂತೆ ಅವಳನ್ನೂ ಅವಳಿಗಿರುವದೆಲ್ಲವನ್ನೂ ಹೊರಗೆ ತೆಗೆದುಕೊಂಡು ಬನ್ನಿರಿ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೋಶುವನು ದೇಶವನ್ನು ಸಂಚರಿಸಿ ನೋಡಿದ್ದ ಇಬ್ಬರು ಗೂಢಚಾರರಿಗೆ “ನೀವು ಆ ವೇಶ್ಯೆಯ ಮನೆಗೆ ಹೋಗಿ ಅವಳಿಗೆ ಪ್ರಮಾಣಮಾಡಿದಂತೆ ಅವಳನ್ನೂ ಅವಳಿಗಿರುವುದೆಲ್ಲವನ್ನೂ ಹೊರಗೆ ತೆಗೆದುಕೊಂಡು ಬನ್ನಿರಿ” ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಯೆಹೋಶುವನು ಆ ನಾಡಿನಲ್ಲಿ ಬೇಹುಗಾರಿಕೆ ನಡೆಸಿದ್ದ ಇಬ್ಬರು ವ್ಯಕ್ತಿಗಳನ್ನು ಕರೆದು, “ನೀವು ಆ ವೇಶ್ಯೆಯ ಮನೆಗೆ ಹೋಗಿ, ಅವಳಿಗೆ ಪ್ರಮಾಣ ಮಾಡಿದಂತೆ ಅವಳನ್ನೂ ಅವಳಿಗಿರುವುದೆಲ್ಲವನ್ನು ಹೊರಗೆ ತೆಗೆದುಕೊಂಡು ಬನ್ನಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೆಹೋಶುವನು ಆ ಇಬ್ಬರು ಗೂಢಚಾರರಿಗೆ, “ನೀವು ಪ್ರಮಾಣ ಮಾಡಿರುವುದರಿಂದ ಆ ವೇಶ್ಯೆಯ ಮನೆಗೆ ಹೋಗಿ ಅವಳನ್ನು ಹೊರಗೆ ಕರೆದುಕೊಂಡು ಬನ್ನಿ. ಅವಳ ಸಂಗಡ ಇರುವ ಎಲ್ಲಾ ಜನರನ್ನೂ ಕರೆದುಕೊಂಡು ಬನ್ನಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆ ನಾಡನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಇಬ್ಬರು ಮನುಷ್ಯರಿಗೆ ಯೆಹೋಶುವನು, “ನೀವು ಆ ವೇಶ್ಯೆಯ ಮನೆಗೆ ಹೋಗಿ, ಅವಳನ್ನೂ ಅವಳಿಗೆ ಇರುವ ಸಮಸ್ತವನ್ನೂ ನೀವು ಅವಳಿಗೆ ಆಣೆ ಇಟ್ಟ ಹಾಗೆ ಅಲ್ಲಿಂದ ಹೊರಗೆ ತೆಗೆದುಕೊಂಡು ಬನ್ನಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:22
13 ತಿಳಿವುಗಳ ಹೋಲಿಕೆ  

ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.


ಇದೂ ಇದರಲ್ಲಿರುವದೆಲ್ಲವೂ ಕೇವಲ ಯೆಹೋವನ ಸೊತ್ತೇ ಎಂದು ತಿಳಿಯಿರಿ. ಸೂಳೆಯಾದ ರಾಹಾಬಳೂ ಅವಳ ಸಂಗಡ ಮನೆಯಲ್ಲಿರುವವರೆಲ್ಲರೂ ಉಳಿಯಲಿ; ನಾವು ಕಳುಹಿಸಿದ ದೂತರನ್ನು ಅವಳು ಅಡಗಿಸಿಟ್ಟಳಲ್ಲಾ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ಇವನು ಯಾವನಿಂದ ಅರಸನಾಗಿ ನೇವಿುಸಲ್ಪಟ್ಟನೋ, ಯಾವನಿಗೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿದನೋ, ಯಾವನ ಒಡಂಬಡಿಕೆಯನ್ನು ಮೀರಿದನೋ, ಆ ಅರಸನ ಬಳಿಯಲ್ಲಿ, ಅಂದರೆ ಬಾಬೆಲೆಂಬ ಅವನ ವಾಸಸ್ಥಾನದಲ್ಲಿ ಇವನು ಸಾಯುವದು ಖಂಡಿತ.


ಮತ್ತು ರಾಜವಂಶದವನೊಬ್ಬನನ್ನು ಆರಿಸಿ ಅವನೊಂದಿಗೆ ಒಡಂಬಡಿಕೆ ಮಾಡಿಕೊಂಡು ಅವನಿಂದ ಆಣೆಯಿಡಿಸಿ


ಅವನು ಭ್ರಷ್ಟರನ್ನು ಜರಿದುಬಿಟ್ಟವನೂ ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.


ದಾವೀದನು ತಾನು ಸೌಲನ ಮಗನಾದ ಯೋನಾತಾನನಿಗೆ ಯೆಹೋವನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನಸಿ ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.


(ಗಿಬ್ಯೋನ್ಯರು ಇಸ್ರಾಯೇಲ್‍ಕುಲಗಳಿಗೆ ಸೇರಿದವರಲ್ಲ; ಸಂಹೃತರಾಗದೆ ಉಳಿದ ಅಮೋರಿಯರಷ್ಟೆ. ಇಸ್ರಾಯೇಲ್ಯರು ತಾವು ಇವರನ್ನು ಕೊಲ್ಲುವದಿಲ್ಲವೆಂದು ಪ್ರಮಾಣ ಮಾಡಿದ್ದರು. ಆದರೂ ಸೌಲನು ಇಸ್ರಾಯೇಲ್ ಮತ್ತು ಯೆಹೂದಕುಲಗಳ ಮೇಲೆ ತನಗಿದ್ದ ಅಭಿಮಾನದ ದೆಸೆಯಿಂದ ಇವರನ್ನೂ ನಿರ್ನಾಮಗೊಳಿಸಬೇಕೆಂದಿದ್ದನು.)


ಯೆಹೋಶುವನು ಅವರೊಡನೆ - ನಿಮ್ಮನ್ನು ಜೀವದಿಂದುಳಿಸುವೆವೆಂದು ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಂಡನು. ಸಮೂಹಪ್ರಧಾನರೂ ಪ್ರಮಾಣಮಾಡಿದರು.


ಆ ಯೌವನಸ್ಥರು ಹೋಗಿ ರಾಹಾಬಳನ್ನೂ ಅವಳ ತಂದೆತಾಯಿಗಳನ್ನೂ ಸಹೋದರರನ್ನೂ ಅವಳಿಗಿರುವದೆಲ್ಲವನ್ನೂ ಅವಳ ಗೋತ್ರದ ಎಲ್ಲಾ ಜನರನ್ನೂ ತಂದು ಇಸ್ರಾಯೇಲ್ಯರ ಪಾಳೆಯದ ಹೊರಗೆ ಇಟ್ಟರು.


ಆಗ ಅವರು ಆ ಪಟ್ಟಣವನ್ನು ಕತ್ತಿಯಿಂದ ಸಂಹರಿಸಿದರು. ಆದರೆ ಆ ಮನುಷ್ಯನನ್ನೂ ಅವನ ಕುಟುಂಬವನ್ನೂ ಕಳುಹಿಸಿಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು