ಯೆಹೋಶುವ 6:24 - ಕನ್ನಡ ಸತ್ಯವೇದವು J.V. (BSI)24 ಇಸ್ರಾಯೇಲ್ಯರು ಪಟ್ಟಣವನ್ನೂ ಅದರಲ್ಲಿರುವದೆಲ್ಲವನ್ನೂ ಬೆಂಕಿಯಿಂದ ಸುಟ್ಟರು. ಆದರೆ ಬೆಳ್ಳಿಬಂಗಾರವನ್ನೂ ತಾಮ್ರ ಕಬ್ಬಿಣಗಳ ಪಾತ್ರೆಗಳನ್ನೂ ಯೆಹೋವನ ಆಲಯದ ಭಂಡಾರಕ್ಕೆ ಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇಸ್ರಾಯೇಲ್ಯರು ಪಟ್ಟಣವನ್ನೂ ಅದರಲ್ಲಿರುವುದೆಲ್ಲವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಆದರೆ ಬೆಳ್ಳಿಬಂಗಾರವನ್ನೂ, ತಾಮ್ರ ಕಬ್ಬಿಣಗಳ ಪಾತ್ರೆಗಳನ್ನೂ, ಯೆಹೋವನ ಆಲಯದ ಭಂಡಾರಕ್ಕೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಬಳಿಕ ನಗರವನ್ನೂ - ಅದರಲ್ಲಿದ್ದುದೆಲ್ಲವನ್ನೂ ಬೆಂಕಿಯಿಂದ ಸುಟ್ಟುಹಾಕಿದರು. ಆದರೆ ಬೆಳ್ಳಿ ಬಂಗಾರವನ್ನು, ಕಂಚುಕಬ್ಬಿಣಗಳ ಪಾತ್ರೆ ಸರ್ವೇಶ್ವರನ ಆಲಯದ ಭಂಡಾರಕ್ಕೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಬಳಿಕ ಇಸ್ರೇಲರು ಇಡೀ ನಗರವನ್ನು ಸುಟ್ಟು ಹಾಕಿದರು. ಅವರು ಬೆಳ್ಳಿ, ಬಂಗಾರ, ಕಂಚು ಮತ್ತು ಕಬ್ಬಿಣಗಳಿಂದ ಮಾಡಿದ ವಸ್ತುಗಳನ್ನು ಬಿಟ್ಟು ನಗರದಲ್ಲಿನ ಉಳಿದೆಲ್ಲವನ್ನು ಸುಟ್ಟು ಹಾಕಿದರು. ಅವರು ಆ ವಸ್ತುಗಳನ್ನು ಯೆಹೋವನಿಗಾಗಿ ಉಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆದರೆ ಪಟ್ಟಣವನ್ನೂ ಅದರಲ್ಲಿರುವ ಸಮಸ್ತವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಬೆಳ್ಳಿಬಂಗಾರವನ್ನೂ ಕಂಚು ಕಬ್ಬಿಣ ಪಾತ್ರೆಗಳನ್ನು ಮಾತ್ರ ಯೆಹೋವ ದೇವರ ಮನೆಯ ಭಂಡಾರದಲ್ಲಿ ಇಟ್ಟರು. ಅಧ್ಯಾಯವನ್ನು ನೋಡಿ |
ಕೇವಲ ಯೆಹೋವನಿಗೇ ಆಗಲಿ ಎಂದು ನೀವು ಗೊತ್ತುಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನೀವು ಹೀಗೆ ನಡೆದು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಿದರೆ ಆತನು ರೋಷಾಗ್ನಿಯನ್ನು ಬಿಟ್ಟು ನಿಮಗೆ ದಯೆಯನ್ನು ತೋರಿಸಿ ನಿಮ್ಮನ್ನು ಕರುಣಿಸಿ ತಾನು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ಸಂತತಿಯನ್ನು ಹೆಚ್ಚಿಸುವನು.