Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:25 - ಕನ್ನಡ ಸತ್ಯವೇದವು J.V. (BSI)

25 ಸೂಳೆಯಾದ ರಾಹಾಬಳು ಯೆರಿಕೋ ಪಟ್ಟಣವನ್ನು ಸಂಚರಿಸಿನೋಡುವದಕ್ಕೆ ಬಂದಿದ್ದ ಯೆಹೋಶುವನ ದೂತರನ್ನು ಅಡಗಿಸಿಟ್ಟದರಿಂದ ಅವನು ಅವಳನ್ನೂ ಅವಳ ತಂದೆಯ ಮನೆಯವರನ್ನೂ ಅವಳಿಗಿರುವದೆಲ್ಲವನ್ನೂ ಉಳಿಸಿದನು. ಅವಳು ಇಂದಿನವರೆಗೂ ಇಸ್ರಾಯೇಲ್ಯರಲ್ಲಿ ವಾಸವಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ವೇಶ್ಯೆಯಾದ ರಾಹಾಬಳು ಯೆರಿಕೋ ಪಟ್ಟಣವನ್ನು ಸಂಚರಿಸಿ ನೋಡುವುದಕ್ಕೆ ಬಂದಿದ್ದ ಯೆಹೋಶುವನ ಗೂಢಚಾರರನ್ನು ಅಡಗಿಸಿಟ್ಟದ್ದರಿಂದ ಅವನು ಅವಳನ್ನೂ, ಅವಳ ತಂದೆಯ ಮನೆಯವರನ್ನೂ, ಅವಳಿಗಿರುವುದೆಲ್ಲವನ್ನೂ ಉಳಿಸಿದನು. ಅವಳು ಇಂದಿನವರೆಗೂ ಇಸ್ರಾಯೇಲ್ಯರಲ್ಲಿ ವಾಸವಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ವೇಶ್ಯೆಯಾದ ರಾಹಾಬಳು, ಜೆರಿಕೋ ನಗರದಲ್ಲಿ ಸಂಚರಿಸಿ ನೋಡಲು ಬಂದಿದ್ದ ಯೆಹೋಶುವನ ಗೂಢಚಾರರನ್ನು ಬಚ್ಚಿಟ್ಟಿದ್ದರಿಂದ ಅವಳನ್ನೂ ಅವಳ ತಂದೆಯ ಮನೆಯವರನ್ನೂ ಅವಳಿಗಿದ್ದುದೆಲ್ಲವನ್ನೂ ಉಳಿಸಿದರು. ಅವಳು ಇಂದಿನವರೆಗೂ ಇಸ್ರಯೇಲರಲ್ಲೇ ವಾಸವಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೆಹೋಶುವನು ವೇಶ್ಯೆಯಾದ ರಾಹಾಬಳನ್ನೂ ಅವಳ ಕುಟುಂಬವನ್ನೂ ಅವಳ ಸಂಗಡ ಇದ್ದ ಬೇರೆ ಜನರನ್ನೂ ಉಳಿಸಿದನು. ಯೆಹೋಶುವನು ಜೆರಿಕೊವಿಗೆ ಕಳಿಸಿಕೊಟ್ಟ ಗೂಢಚಾರರಿಗೆ ರಾಹಾಬಳು ಸಹಾಯ ಮಾಡಿದ್ದಕ್ಕಾಗಿ ಯೆಹೋಶುವನು ಅವರೆಲ್ಲರನ್ನು ಉಳಿಸಿದನು. ರಾಹಾಬಳು ಇಂದಿಗೂ ಸಹ ಇಸ್ರೇಲಿನ ಜನರೊಂದಿಗೆ ವಾಸವಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ಯೆಹೋಶುವನು ವೇಶ್ಯೆಯಾದ ರಾಹಾಬಳನ್ನೂ, ಅವಳ ತಂದೆಯ ಮನೆಯವರನ್ನೂ ಅವಳಿಗಿದ್ದ ಸಮಸ್ತವನ್ನೂ ತಪ್ಪಿಸಿ ಉಳಿಸಿದನು. ಅವಳು ಈ ದಿವಸದವರೆಗೂ ಇಸ್ರಾಯೇಲರಲ್ಲಿ ವಾಸವಾಗಿದ್ದಾಳೆ. ಏಕೆಂದರೆ ಯೆರಿಕೋವನ್ನು ಸಂಚರಿಸಿ ನೋಡಲು, ಯೆಹೋಶುವನು ಕಳುಹಿಸಿದ ಗೂಢಚಾರರನ್ನು ಅವಳು ಬಚ್ಚಿಟ್ಟಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:25
11 ತಿಳಿವುಗಳ ಹೋಲಿಕೆ  

ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.


ಅದೇ ರೀತಿಯಾಗಿ ಸೂಳೆಯಾದ ರಹಾಬಳು ಗೂಢಚಾರರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿವಂತಳೆಂಬ ನಿರ್ಣಯವನ್ನು ಹೊಂದಿದಳಲ್ಲವೇ.


ಸಲ್ಮೋನನು ರಾಹಾಬಳಲ್ಲಿ ಬೋವಜನನ್ನು ಪಡೆದನು. ಬೋವಜನು ರೂತಳಲ್ಲಿ ಓಬೇದನನ್ನು ಪಡೆದನು. ಓಬೇದನು ಇಷಯನನ್ನು ಪಡೆದನು.


ಆದರೆ ಅವಳು ಆ ಮನುಷ್ಯರನ್ನು ಮಾಳಿಗೆಯ ಮೇಲೆ ಹತ್ತಿಸಿ ಅಲ್ಲಿ ಸಾಲಾಗಿ ಇಟ್ಟಿದ್ದ ಪುಂಡಿಯ ಹೊರೆಗಳಲ್ಲಿ ಅಡಗಿಸಿಟ್ಟಿದ್ದಳು.


ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ ಎಂಬದೇ.


ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ನಿಂತಿದ್ದ ಸ್ಥಳದಲ್ಲಿ ನಿಲ್ಲಿಸಿದನು. ಅವು ಇಂದಿನವರೆಗೂ ಅಲ್ಲೇ ಇರುತ್ತವೆ.


ನೂನನ ಮಗನಾದ ಯೆಹೋಶುವನು [ಕಾನಾನ್] ದೇಶವನ್ನೂ ಯೆರಿಕೋ ಪಟ್ಟಣವನ್ನೂ ನೋಡುವದಕ್ಕೋಸ್ಕರ ಶಿಟ್ಟೀವಿುನಿಂದ ಇಬ್ಬರು ಗೂಢಚಾರರನ್ನು ಕಳುಹಿಸಿದನು. ಅವರು ಹೊರಟು ಹೋಗಿ ರಾಹಾಬಳೆಂಬ ಸೂಳೆಯ ಮನೆಯಲ್ಲಿ ಇಳುಕೊಂಡರು.


ಆ ಸ್ತ್ರೀಯು ಆ ಇಬ್ಬರನ್ನು ಅಡಗಿಸಿಟ್ಟು ಕೇಳ ಬಂದವರಿಗೆ - ಆ ಮನುಷ್ಯರು ನನ್ನ ಬಳಿಗೆ ಬಂದದ್ದು ನಿಜ; ಅವರು ಎಲ್ಲಿಯವರೆಂಬದು ನನಗೆ ಗೊತ್ತಿದ್ದಿಲ್ಲ.


ಇಗೋ, ನಾವು ಈ ದೇಶದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಇಳಿಸಿದ ಕಿಟಕಿಗೆ ಈ ಕೆಂಪು ದಾರವನ್ನು ಕಟ್ಟಬೇಕು. ಮತ್ತು ನಿನ್ನ ತಂದೆತಾಯಿಗಳನ್ನೂ ಅಣ್ಣ ತಮ್ಮಂದಿರನ್ನೂ ಎಲ್ಲಾ ಬಳಗದವರನ್ನೂ ನಿನ್ನ ಮನೆಯಲ್ಲಿ ಸೇರಿಸಿಕೊಂಡಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು