Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:6 - ಕನ್ನಡ ಸತ್ಯವೇದವು J.V. (BSI)

6 ಆಗ ಯೆಹೋಶುವನೂ ಇಸ್ರಾಯೇಲ್ಯರ ಹಿರಿಯರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಬೂದಿಯನ್ನು ಹಾಕಿಕೊಂಡು ಸಾಯಂಕಾಲದವರೆಗೂ ಯೆಹೋವನ ಮಂಜೂಷದ ಮುಂದೆ ಬೋರಲಬಿದ್ದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಯೆಹೋಶುವನೂ ಮತ್ತು ಇಸ್ರಾಯೇಲ್ಯರ ಹಿರಿಯರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಭೂದಿಯನ್ನು ಹಾಕಿಕೊಂಡು ಸಾಯಂಕಾಲದವರೆಗೂ ಯೆಹೋವನ ಮಂಜೂಷದ ಮುಂದೆ ಬೋರಲು ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಯೆಹೋಶುವನು ಮತ್ತು ಇಸ್ರಯೇಲರ ಹಿರಿಯರು ದುಃಖ ತಾಳಲಾರದೆ ತಮ್ಮ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡು ಸಾಯಂಕಾಲದವರೆಗೆ ಸರ್ವೇಶ್ವರನ ಮಂಜೂಷದ ಮುಂದೆ ಅಧೋಮುಖರಾಗಿ ಬಿದ್ದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇದನ್ನು ಕೇಳಿ ಯೆಹೋಶುವನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಪವಿತ್ರ ಪೆಟ್ಟಿಗೆಯ ಮುಂದೆ ನೆಲದ ಮೇಲೆ ಬೋರಲಾಗಿ ಬಿದ್ದುಕೊಂಡನು. ಸಾಯಂಕಾಲದವರೆಗೂ ಯೆಹೋಶುವನು ಹಾಗೆಯೇ ಇದ್ದನು. ಇಸ್ರೇಲಿನ ಹಿರಿಯರೂ ಹಾಗೆಯೇ ಮಾಡಿದರು. ಅವರು ದುಃಖದಿಂದ ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡನು. ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಂಜೆಯವರೆಗೆ ಯೆಹೋವ ದೇವರ ಮಂಜೂಷದ ಮುಂದೆ ನೆಲದ ಮೇಲೆ ಬೋರಲು ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:6
30 ತಿಳಿವುಗಳ ಹೋಲಿಕೆ  

ರೂಬೇನನು ತಿರಿಗಿ ಆ ಗುಂಡಿಯ ಹತ್ತಿರಕ್ಕೆ ಬಂದು ಅದರಲ್ಲಿ ಯೋಸೇಫನಿಲ್ಲದ್ದನ್ನು ಕಂಡು


ತನ್ನ ಬಟ್ಟೆಗಳನ್ನು ಹರಿದುಕೊಂಡು ನಡುವಿನ ಮೇಲೆ ಗೋಣೀತಟ್ಟು ಸುತ್ತಿಕೊಂಡು ತನ್ನ ಮಗನಿಗಾಗಿ ಬಹುದಿನಗಳವರೆಗೂ ಹಂಬಲಿಸುತ್ತಿದ್ದನು.


ಚೀಯೋನ್ ನಗರಿಯ ಹಿರಿಯರು ನೆಲದಲ್ಲಿ ಮೌನವಾಗಿ ಕುಕ್ಕರಿಸಿದ್ದಾರೆ; ತಲೆಯ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇವಿುನ ಯುವತಿಯರು ತಲೆಗಳನ್ನು ನೆಲಕ್ಕೆ ಬೊಗ್ಗಿಸಿದ್ದಾರೆ.


ಆಗ ಅರಸನು ಎದ್ದು ತನ್ನ ಬಟ್ಟೆಗಳನ್ನು ಹರಿದುಕೊಂಡು ನೆಲಕ್ಕೆ ಬಿದ್ದನು. ಅವನ ಸೇವಕರೆಲ್ಲರೂ ತಮ್ಮತಮ್ಮ ಬಟ್ಟೆಗಳನ್ನು ಹರಕೊಂಡು ಅವನ ಹತ್ತಿರ ನಿಂತರು.


ಮತ್ತು ದೇಶವನ್ನು ಸಂಚರಿಸಿ ನೋಡಿದವರಲ್ಲಿದ್ದ ನೂನನ ಮಗನಾದ ಯೆಹೋಶುವನೂ ಯೆಪುನ್ನೆಯ ಮಗನಾದ ಕಾಲೇಬನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು


ಆಗ ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಹೊಯಿದುಕೊಂಡು ಅಳುತ್ತಾ ಗೋಳಾಡುತ್ತಾ - ಅಯ್ಯೋ, ಅಯ್ಯೋ, ಸಮುದ್ರದ ಮೇಲೆ ಹಡಗುಳ್ಳವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಈ ಮಹಾ ಪಟ್ಟಣಕ್ಕೆ ಎಂಥಾ ಗತಿ ಬಂತು; ಇವಳು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು ಕೂಗಿ ಹೇಳಿದರು.


ಇದನ್ನು ಕೇಳಿ ಅಪೊಸ್ತಲರಾದ ಬಾರ್ನಬ ಪೌಲರು ತಮ್ಮ ವಸ್ತ್ರಗಳನ್ನು ಹರಕೊಂಡು ಜನರ ಗುಂಪಿನೊಳಗೆ ಕೂಗುತ್ತಾ ನುಗ್ಗಿ -


ಅವರು ದೂರದಿಂದ ಕಣ್ಣೆತ್ತಿ ನೋಡಿ ಯೋಬನ ಗುರುತನ್ನು ಹಿಡಿಯಲಾರದೆ ಹೋದ ಕಾರಣ ಗಟ್ಟಿಯಾಗಿ ಅತ್ತು ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು ಮಣ್ಣನ್ನು ಮೇಲಕ್ಕೆ ತೂರಿ ತಮ್ಮ ತಲೆಯ ಮೇಲೆ ಸುರಿಸಿಕೊಂಡರು.


ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು ತಲೆಬೋಳಿಸಿಕೊಂಡು ನೆಲದಲ್ಲಿ ಅಡ್ಡಬಿದ್ದು ನಮಸ್ಕರಿಸಿ


ಮೊರ್ದೆಕೈಯು ನಡೆದದ್ದನ್ನೆಲ್ಲಾ ಕೇಳಿದಾಗ ಬಟ್ಟೆಗಳನ್ನು ಹರಕೊಂಡು ಗೋಣಿತಟ್ಟನ್ನು ಕಟ್ಟಿಕೊಂಡು ಬೂದಿಯನ್ನು ಹಾಕಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗುತ್ತಾ ದುಃಖಾತಿಶಯದಿಂದ ಗೋಳಾಡಿ


ಆದದರಿಂದ ದಾವೀದನು ಮಗುವಿಗೋಸ್ಕರ ದೇವರನ್ನು ಪ್ರಾರ್ಥಿಸುತ್ತಾ ಉಪವಾಸಮಾಡುತ್ತಾ ಒಳಕೋಣೆಯಲ್ಲಿ ನೆಲದ ಮೇಲೆಯೇ ಬಿದ್ದುಕೊಂಡು ರಾತ್ರಿಕಳೆಯುತ್ತಿದ್ದನು.


ದಾವೀದನೂ ಅವನ ಜನರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಗೋಳಾಡಿ ಅತ್ತು ಸಾಯಂಕಾಲದವರೆಗೆ ಉಪವಾಸ ಮಾಡಿದರು.


ಅದೇ ದಿವಸ ಒಬ್ಬ ಬೆನ್ಯಾಮೀನ್ಯನು ರಣರಂಗದಿಂದ ತಪ್ಪಿಸಿಕೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣುಹಾಕಿಕೊಂಡು


ಅವರು ಬೇತೇಲಿಗೆ ಬಂದು ಸಾಯಂಕಾಲದವರೆಗೆ ದೇವರ ಮುಂದೆ ಬಿದ್ದುಕೊಂಡು ಗಟ್ಟಿಯಾಗಿ ಅಳುತ್ತಾ -


ಆಗ ಎಲ್ಲಾ ಜನರೂ ಬೇತೇಲಿಗೆ ಹೋಗಿ ಅಲ್ಲಿ ಯೆಹೋವನ ಮುಂದೆ ಅಳುತ್ತಾ ಬಿದ್ದು ಸಾಯಂಕಾಲದವರೆಗೂ ಉಪವಾಸ ಮಾಡಿದರು. ಇದಲ್ಲದೆ ಅವರು ಆತನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.


(ಇಸ್ರಾಯೇಲ್ಯರು ಹೋಗಿ ಯೆಹೋವನ ಮುಂದೆ ಅಳುತ್ತಾ - ನಾವು ತಿರಿಗಿ ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೋ ಎಂದು ಕೇಳಲು ಆತನು - ಹೋಗಿ ಯುದ್ಧಮಾಡಿರಿ ಅಂದನು.


ಅವರು ಅಡ್ಡಬಿದ್ದು - ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ,


ಮತ್ತು ಯೆಹೋಶುವನು - ಅಯ್ಯೋ ಕರ್ತನೇ, ಯೆಹೋವನೇ, ನೀನು ಈ ಜನರನ್ನು ಯೊರ್ದನ್ ಹೊಳೆ ದಾಟಿಸಿದ್ದೇಕೆ? ನಮ್ಮನ್ನು ಅಮೋರಿಯರ ಕೈಗೆ ಒಪ್ಪಿಸಿ ನಾಶಮಾಡಬೇಕೆಂದಿದ್ದೀಯಾ? ನಾವು ಇಷ್ಟೇ ಸಾಕೆಂದು ಯೊರ್ದನ್ ಹೊಳೆಯ ಆಚೆಯಲ್ಲಿಯೇ ಇದ್ದರೆ ಎಷ್ಟೋ ಒಳ್ಳೇದಾಗಿತ್ತು.


ಸೌಲನೂ ಅವನ ಮಗನಾದ ಯೋನಾತಾನನೂ ಯೆಹೋವನ ಪ್ರಜೆಗಳಾದ ಇಸ್ರಾಯೇಲ್ಯರೂ ಕತ್ತಿಯಿಂದ ಸಂಹೃತರಾದದ್ದಕ್ಕಾಗಿ


ಅರಸನು ಧರ್ಮೋಪದೇಶಗ್ರಂಥವಾಕ್ಯಗಳನ್ನು ಕೇಳಿದಾಗ


ಅರಸನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ ಬಟ್ಟೆಗಳನ್ನು ಹರಿದುಕೊಂಡು


ಆದಕಾರಣ [ನಾನು ಆಡಿದ್ದನ್ನು] ತಿರಸ್ಕರಿಸಿ ಧೂಳಿಯಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ.


ಆಕೆಯನ್ನು ಕಾಣುತ್ತಲೆ ಅವನು ತನ್ನ ಬಟ್ಟೆಯನ್ನು ಹರಿದುಕೊಂಡು - ಅಯ್ಯೋ ನನ್ನ ಮಗಳೇ, ಮಗಳೇ, ನೀನು ನನ್ನನ್ನು ಕುಗ್ಗಿಸೇ ಬಿಟ್ಟಿಯಲ್ಲಾ; ನನಗೆ ಮಹಾಸಂಕಟವನ್ನುಂಟುಮಾಡಿದಿ. ನಾನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಹಿಂದೆಗೆಯಲಾರೆನು ಎಂದು ಕೂಗಿಕೊಳ್ಳಲು


ಮೂರನೆಯ ದಿನ ಸೌಲನ ಪಾಳೆಯದಿಂದ ಒಬ್ಬ ಮನುಷ್ಯನು ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೆ ಬಾಗಿ ನಮಸ್ಕರಿಸಿದನು. ಅವನು ವಸ್ತ್ರಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು.


ತಾಮಾರಳು ತಲೆಯ ಮೇಲೆ ಬೂದಿ ಹಾಕಿಕೊಂಡು ನಿಲುವಂಗಿಯನ್ನು ಹರಿದುಕೊಂಡು ಕೈಗಳನ್ನು ತಲೆಯ ಮೇಲಿಟ್ಟು ಗೋಳಾಡುತ್ತಾ ಹೋದಳು.


ಎಜ್ರನು ದೇವಾಲಯದ ಮುಂದೆ ಅಡ್ಡಬಿದ್ದು ಅಳುತ್ತಾ ವಿಜ್ಞಾಪನೆಯನ್ನೂ ಪಾಪನಿವೇದನವನ್ನೂ ಮಾಡುತ್ತಿರುವಷ್ಟರಲ್ಲಿ ಇಸ್ರಾಯೇಲ್ಯರ ಗಂಡಸರೂ ಹೆಂಗಸರೂ ಮಕ್ಕಳೂ ಮಹಾಸಮೂಹವಾಗಿ ಅವನ ಬಳಿಗೆ ಬಂದು ಕೂಡಿದರು. ಅಲ್ಲಿನ ಜನರು ಬಹಳವಾಗಿ ಅಳುತ್ತಿದ್ದರು.


ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಇಸ್ರಾಯೇಲ್ಯರು ಉಪವಾಸವಾಗಿದ್ದು ಗೋಣೀತಟ್ಟನ್ನು ಕಟ್ಟಿಕೊಂಡು ತಲೆಯ ಮೇಲೆ ಮಣ್ಣುಹಾಕಿಕೊಂಡು ನೆರೆದು ಬಂದರು.


ಯಾವ ಯಾವ ಸಂಸ್ಥಾನಗಳಲ್ಲಿ ಅರಸನ ಆಜ್ಞೆಯೂ ನಿರ್ಣಯವೂ ಪ್ರಕಟವಾದವೋ ಅಲ್ಲೆಲ್ಲಾ ಯೆಹೂದ್ಯರೊಳಗೆ ಮಹಾದುಃಖವೂ ಉಪವಾಸರೋದನ ಪ್ರಲಾಪಗಳೂ ಉಂಟಾದವು. ಅನೇಕರು ಗೋಣಿತಟ್ಟನ್ನು ಹಾಸಿ ಬೂದಿಹಾಕಿಕೊಂಡು ಅದರ ಮೇಲೆ ಕೂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು