Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:17 - ಕನ್ನಡ ಸತ್ಯವೇದವು J.V. (BSI)

17 ಆಯಿ ಎಂಬ ಊರಲ್ಲಿಯೂ ಬೇತೇಲಿನಲ್ಲಿಯೂ ಒಬ್ಬ ಗಂಡಸಾದರೂ ಉಳಿಯಲಿಲ್ಲ. ಊರು ಬಾಗಲುಗಳನ್ನು ತೆರೆದುಬಿಟ್ಟು ಎಲ್ಲರೂ ಇಸ್ರಾಯೇಲ್ಯರನ್ನು ಹಿಂದಟ್ಟುವದಕ್ಕೋಸ್ಕರ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಯಿ ಎಂಬ ಊರಿನಲ್ಲಿಯೂ ಬೇತೇಲಿನಲ್ಲಿಯೂ ಒಬ್ಬ ಗಂಡಸಾದರೂ ಉಳಿಯಲಿಲ್ಲ. ಊರಬಾಗಿಲುಗಳನ್ನು ತೆರೆದು ಬಿಟ್ಟು ಎಲ್ಲರೂ ಇಸ್ರಾಯೇಲ್ಯರನ್ನು ಹಿಂದಟ್ಟುವುದಕ್ಕೋಸ್ಕರ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇತ್ತ ಆಯಿಯಲ್ಲಿ ಹಾಗೂ ಬೇತೇಲಿನಲ್ಲಿ ಗಂಡಸರು ಇರಲಿಲ್ಲ. ಊರಬಾಗಿಲುಗಳನ್ನು ತೆರೆದಿಟ್ಟು ಎಲ್ಲರೂ ಇಸ್ರಯೇಲರನ್ನು ಹಿಂದಟ್ಟಿ ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಆಯಿ” ಮತ್ತು ಬೇತೇಲಿನ ಎಲ್ಲ ಜನರು ಇಸ್ರೇಲಿನ ಸೈನ್ಯವನ್ನು ಬೆನ್ನಟ್ಟಿದರು. ಪಟ್ಟಣದ ಬಾಗಿಲನ್ನು ತೆರೆದಿಟ್ಟಿದ್ದರು; ಒಬ್ಬನಾದರೂ ಪಟ್ಟಣದ ರಕ್ಷಣೆಗೆ ಉಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಯಿ ಎಂಬ ಪಟ್ಟಣದಲ್ಲಿಯೂ ಬೇತೇಲಿನಲ್ಲಿಯೂ ಇಸ್ರಾಯೇಲಿನ ಹಿಂದೆ ಹೊರಟು ಹೋಗದ ಮನುಷ್ಯನು ಒಬ್ಬನೂ ಇರಲಿಲ್ಲ. ಪಟ್ಟಣವನ್ನು ತೆರೆದಿಟ್ಟು ಹೋಗಿ ಇಸ್ರಾಯೇಲರನ್ನು ಹಿಂದಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:17
9 ತಿಳಿವುಗಳ ಹೋಲಿಕೆ  

ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೇ ಹಿಡುಕೊಂಡು ವಕ್ರಬುದ್ಧಿಯುಳ್ಳವರ ಆಲೋಚನೆಯನ್ನು ನಿರರ್ಥಕ ಮಾಡುತ್ತಾನೆ.


ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲ್ಯರು ಅವರೆಲ್ಲರನ್ನೂ ಕರುಣೆಯಿಲ್ಲದೆ ಸಂಹರಿಸಿಬಿಡುವ ಹಾಗೆ ಆತನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರಮಾಡಿದನು.


ಆದರೆ ಕೊಳ್ಳೆಯನ್ನೂ ಪಶುಗಳನ್ನೂ ನಿಮಗೋಸ್ಕರ ತೆಗೆದುಕೊಳ್ಳಬಹುದು. ನಿಮ್ಮಲ್ಲಿ ಕೆಲವರು ಆ ಊರಿನ ಹಿಂದುಗಡೆಯಲ್ಲಿ ಹೊಂಚುಹಾಕಿಕೊಂಡಿರಲಿ ಎಂದು ಆಜ್ಞಾಪಿಸಲು ಅವನು ಎದ್ದು ಭಟರೆಲ್ಲರ ಸಹಿತವಾಗಿ ಆಯಿಗೆ ಹೋಗುವದಕ್ಕೋಸ್ಕರ ಸಿದ್ಧನಾಗಿ


ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿವ್ಮಿುಂದ ಸೋತುಹೋಗಬೇಕೆಂಬದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪ; ಅದು ಈಗಾಗಲೇ ನೆರವೇರಿತಲ್ಲಾ.


ಆಯಿ ಎಂಬ ಊರಿನವರು ಊರಿನಲ್ಲಿದ್ದ ತಮ್ಮ ಎಲ್ಲಾ ಜನರನ್ನೂ ಕರೆದುಕೊಂಡು ಯೆಹೋಶುವನನ್ನು ಹಿಂದಟ್ಟುತ್ತಾ ಪಟ್ಟಣಕ್ಕೆ ದೂರವಾಗಿ ಸೆಳೆಯಲ್ಪಟ್ಟರು.


ಯೆಹೋವನು ಯೆಹೋಶುವನಿಗೆ - ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿ ಎಂಬ ಊರಿನ ಕಡೆಗೆ ಚಾಚು; ಆ ಪಟ್ಟಣವನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ ಎನ್ನಲು ಅವನು ಅದನ್ನು ಚಾಚಿದನು.


ಬೆನ್ಯಾಮೀನ್ಯರು ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕಾಗಿ ಪಟ್ಟಣವನ್ನು ಬಿಟ್ಟು ದೂರಕ್ಕೆ ಬಂದರು. ಅವರು ಮುಂಚಿನಂತೆ ಜನರನ್ನು ವಧಿಸುವದಕ್ಕೆ ಪ್ರಾರಂಭಿಸಿ ಬೇತೇಲಿಗೂ ಬೈಲಿನಲ್ಲಿರುವ ಗಿಬೆಯಕ್ಕೂ ಹೋಗುವ ರಾಜ ಮಾರ್ಗಗಳಲ್ಲಿ ಸುಮಾರು ಮೂವತ್ತು ಮಂದಿಯನ್ನು ಹತಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು