Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:28 - ಕನ್ನಡ ಸತ್ಯವೇದವು J.V. (BSI)

28 ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟು ಅದು ಯಾವ ಕಾಲಕ್ಕೂ ತಿರಿಗಿ ಕಟ್ಟಲ್ಪಡದಂತೆ ಹಾಳುದಿಬ್ಬವಾಗ ಮಾಡಿದನು. ಅದು ಇಂದಿನವರೆಗೂ ಹಾಗೆಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟು ಅದು ಎಂದಿಗೂ ತಿರುಗಿ ಕಟ್ಟಲು ಸಾಧ್ಯವಾಗದಂತೆ ಹಾಳುದಿಬ್ಬವನ್ನಾಗಿ ಮಾಡಿದನು. ಅದು ಇಂದಿನ ವರೆಗೂ ಹಾಗೆಯೇ ಉಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಯೆಹೋಶುವನು ಆಯಿ ನಗರವನ್ನು ಸುಟ್ಟು ಅದು ಎಂದಿಗೂ ಮರಳಿ ಕಟ್ಟಲಾಗದಂತೆ ಹಾಳುದಿಬ್ಬವಾಗಿಸಿಬಿಟ್ಟನು. ಅದು ಇಂದಿನವರೆಗೂ ಹಾಗೆಯೆ ಉಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅನಂತರ ಯೆಹೋಶುವನು “ಆಯಿ” ನಗರವನ್ನು ಸುಟ್ಟುಹಾಕಿದನು. ಆ ನಗರವು ಕೇವಲ ಕಲ್ಲುಬಂಡೆಗಳ ದಿಬ್ಬವಾಯಿತು. ಅದು ಇಂದಿಗೂ ಹಾಗೆಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟುಬಿಟ್ಟು, ಅದನ್ನು ಮರಳಿ ಕಟ್ಟಲಾಗದಂತೆ ಹಾಳು ದಿಬ್ಬವಾಗಿ ಮಾಡಿದನು. ಅದು ಇಂದಿನವರೆಗೂ ಹಾಗೆಯೇ ಉಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:28
11 ತಿಳಿವುಗಳ ಹೋಲಿಕೆ  

ಅದರಲ್ಲಿರುವ ಎಲ್ಲಾ ಸಾಮಾನುಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ ಊರನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಿಮ್ಮ ದೇವರಾದ ಯೆಹೋವನಿಗೋಸ್ಕರ ನಿಶ್ಶೇಷವಾಗಿ ಸುಟ್ಟುಬಿಡಬೇಕು. ಅದು ತಿರಿಗಿ ಕಟ್ಟಲ್ಪಡದೆ ಯಾವಾಗಲೂ ಹಾಳುದಿಬ್ಬವಾಗಿರಬೇಕು.


ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಗೇಯಲ್ಪಡುವದು, ಯೆರೂಸಲೇಮು ಹಾಳುದಿಬ್ಬಗಳಾಗುವದು, ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವದು.


ಲೋಕದ ಕಟ್ಟಕಡೆಯಿಂದ ಬಾಬೆಲಿಗೆ ಬನ್ನಿರಿ, ಅದರ ಕಣಜಗಳನ್ನು ತೆರೆಯಿರಿ; ಪಟ್ಟಣವನ್ನು ಹಾಳುದಿಬ್ಬಗಳಾಗಿ ಮಾಡಿ ಪೂರ್ಣವಾಗಿ ನಾಶಪಡಿಸಿರಿ; ಏನೂ ಉಳಿಯದಿರಲಿ.


ಆದದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು ಯುದ್ಧಘೋಷಮಾಡುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವದು. ಇದು ಯೆಹೋವನ ನುಡಿ.


ನಾನು ಯೆರೂಸಲೇಮನ್ನು ಹಾಳುದಿಬ್ಬಗಳನ್ನಾಗಿಯೂ ನರಿಗಳ ಹಕ್ಕೆಯನ್ನಾಗಿಯೂ ಗೈದು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂವಿುಯನ್ನಾಗಿ ಮಾಡುವೆನು [ಎಂದು ಯೆಹೋವನು ಹೇಳಿದ್ದಾನಲ್ಲಾ].


ನೀನು ದುರ್ಗವನ್ನು ನಾಶಪಡಿಸಿ ಪಟ್ಟಣವನ್ನು ಹಾಳು ದಿಬ್ಬವನ್ನಾಗಿಯೂ ಅನ್ಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಬಾರದ ಹಾಳೂರನ್ನಾಗಿಯೂ ಮಾಡಿದ್ದೀ.


ದಮಸ್ಕದ ವಿಷಯವಾದ ದೈವೋಕ್ತಿ. ಆಹಾ ದಮಸ್ಕವು ಇನ್ನು ಊರಾಗಿರದೆ ಹಾಳು ದಿಬ್ಬವಾಗುವದು.


ಕೇಳು, ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು; ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದದರಿಂದ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು.


ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ನಿಂತಿದ್ದ ಸ್ಥಳದಲ್ಲಿ ನಿಲ್ಲಿಸಿದನು. ಅವು ಇಂದಿನವರೆಗೂ ಅಲ್ಲೇ ಇರುತ್ತವೆ.


ಆಯಿ ಎಂಬ ಊರಿನ ಅರಸನನ್ನು ಸಾಯಂಕಾಲದವರೆಗೂ ಮರದಲ್ಲಿ ನೇತುಹಾಕಿಸಿ ಸೂರ್ಯನು ಅಸ್ತವಿುಸುತ್ತಲೇ ಅವನ ಶವವನ್ನು ಕೆಳಗಿಳಿಸಿ ಅದನ್ನು ಊರು ಬಾಗಲಲ್ಲಿ ಹಾಕಿಸಿಬಿಟ್ಟು ಅದರ ಮೇಲೆ ಕಲ್ಲಿನ ದೊಡ್ಡ ಕುಪ್ಪೆಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.


ಕೇವಲ ಯೆಹೋವನಿಗೇ ಆಗಲಿ ಎಂದು ನೀವು ಗೊತ್ತುಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನೀವು ಹೀಗೆ ನಡೆದು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಿದರೆ ಆತನು ರೋಷಾಗ್ನಿಯನ್ನು ಬಿಟ್ಟು ನಿಮಗೆ ದಯೆಯನ್ನು ತೋರಿಸಿ ನಿಮ್ಮನ್ನು ಕರುಣಿಸಿ ತಾನು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ಸಂತತಿಯನ್ನು ಹೆಚ್ಚಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು