Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:29 - ಕನ್ನಡ ಸತ್ಯವೇದವು J.V. (BSI)

29 ಆಯಿ ಎಂಬ ಊರಿನ ಅರಸನನ್ನು ಸಾಯಂಕಾಲದವರೆಗೂ ಮರದಲ್ಲಿ ನೇತುಹಾಕಿಸಿ ಸೂರ್ಯನು ಅಸ್ತವಿುಸುತ್ತಲೇ ಅವನ ಶವವನ್ನು ಕೆಳಗಿಳಿಸಿ ಅದನ್ನು ಊರು ಬಾಗಲಲ್ಲಿ ಹಾಕಿಸಿಬಿಟ್ಟು ಅದರ ಮೇಲೆ ಕಲ್ಲಿನ ದೊಡ್ಡ ಕುಪ್ಪೆಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಯಿ ಊರಿನ ಅರಸನನ್ನು ಸಾಯಂಕಾಲದವರೆಗೂ ಮರಕ್ಕೆ ನೇತು ಹಾಕಿಸಿ ಸೂರ್ಯನು ಅಸ್ತಮಿಸುವಾಗ ಯೆಹೋಶುವನು ಅವನ ಶವವನ್ನು ಕೆಳಗಿಳಿಸಿ ಅದನ್ನು ಊರಬಾಗಿಲಲ್ಲಿ ಹಾಕಿಸಿ ಅದರ ಮೇಲೆ ಕಲ್ಲಿನ ದೊಡ್ಡ ರಾಶಿಯನ್ನು ಹಾಕಿಸಿದನು. ಅದು ಇಂದಿನ ವರೆಗೂ ಹಾಗೆಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆಯಿಯ ಅರಸನನ್ನು ಸಂಜೆಯವರೆಗೂ ಮರಕ್ಕೆ ನೇತುಹಾಕಿಸಿದನು. ಸೂರ್ಯನು ಅಸ್ತಮಿಸುತ್ತಲೆ ಅವನ ಶವವನ್ನು ಕೆಳಗಿಳಿಸಿ ಅದನ್ನು ಊರಬಾಗಿಲಿನಲ್ಲಿ ಹಾಕಿಸಿ ಅದರ ಮೇಲೆ ಕಲ್ಲಿನ ದೊಡ್ಡ ರಾಶಿಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೆಹೋಶುವನು “ಆಯಿ”ಯ ಅರಸನನ್ನು ಒಂದು ಮರಕ್ಕೆ ಸಾಯಂಕಾಲದವರೆಗೂ ನೇತುಹಾಕಿದನು. ಸೂರ್ಯನು ಮುಳುಗಿದ ಮೇಲೆ, ಯೆಹೋಶುವನು ಆ ಅರಸನ ಶವವನ್ನು ಮರದಿಂದ ಕೆಳಗಿಳಿಸಿ ನಗರದ ದ್ವಾರದಲ್ಲೇ ಬಿಸಾಡಿ ಅದರ ಮೇಲೆ ಕಲ್ಲಿನ ದೊಡ್ಡ ಕುಪ್ಪೆಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಯಿ ಎಂಬ ಪಟ್ಟಣದ ಅರಸನನ್ನು ಸಾಯಂಕಾಲದವರೆಗೂ ಒಂದು ಮರದಲ್ಲಿ ತೂಗಿಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶುವನು ಅವನ ಹೆಣವನ್ನು ಮರದಿಂದ ಇಳಿಸಿ, ಅದನ್ನು ಆ ಪಟ್ಟಣದ ಬಾಗಿಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿದರು. ಆ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಇಟ್ಟರು. ಅದು ಇಂದಿನವರೆಗೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:29
14 ತಿಳಿವುಗಳ ಹೋಲಿಕೆ  

ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ಬಲುದೊಡ್ಡ ಕಲ್ಲು ಕುಪ್ಪೆಯನ್ನು ಮಾಡಿದರು. ಇಸ್ರಾಯೇಲ್ಯರಾದರೋ ತಮ್ಮತಮ್ಮ ನಿವಾಸಗಳಿಗೆ ಓಡಿಹೋದರು.


ಅವನ ಮೇಲೆ ಕಲ್ಲುಗಳ ಒಂದು ದೊಡ್ಡ ಕುಪ್ಪೆಯನ್ನು ಹಾಕಿದರು. ಅದು ಇಂದಿನವರೆಗೂ ಅದೆ. ಆಗ ಯೆಹೋವನ ರೋಷಾಗ್ನಿಯು ಅಡಗಿಹೋಯಿತು. ಈ ಸಂಗತಿಯ ದೆಸೆಯಿಂದ ಆ ಸ್ಥಳಕ್ಕೆ ಇಂದಿನವರೆಗೂ ಆಕೋರಿನ ತಗ್ಗು ಎಂಬ ಹೆಸರಿರುತ್ತದೆ.


ಆ ಘನವನ್ನು ಅವನು ದೇವರಿಗೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.


ನಿನ್ನ ಬಲಗಡೆಯಲ್ಲಿರುವ ಕರ್ತನು ತನ್ನ ಕೋಪದ ದಿನದಲ್ಲಿ ರಾಜರನ್ನು ಖಂಡಿಸುವನು.


ಪ್ರಭುಗಳಿಗೆ ಅಪಮಾನವನ್ನುಂಟುಮಾಡಿ ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವಾತನು


ಹಾಮಾನನನ್ನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿಗೆ ಹಾಕಿದರು. ಅರಸನ ಕೋಪವೂ ಶಾಂತವಾಯಿತು.


ಇದಲ್ಲದೆ ಯೆಹೋಶುವನು ಲಾಕೀಷಿನವರ ಸಹಾಯಕ್ಕೆ ಬಂದ ಗೆಜೆರಿನ ಅರಸನಾದ ಹೋರಾಮನನ್ನೂ ಅವನ ಪ್ರಜೆಗಳೆಲ್ಲರನ್ನೂ ಹೊಡೆದುಹಾಕಿದನು; ಒಬ್ಬನೂ ಉಳಿಯಲಿಲ್ಲ.


ಯೆಹೋವನು ಅದನ್ನೂ ಅದರ ಅರಸನನ್ನೂ ಇಸ್ರಾಯೇಲ್ಯರ ಕೈಗೆ ಕೊಟ್ಟನು. ಅವರು ಅದರಲ್ಲಿದ್ದ ಜನರಲ್ಲಿ ಒಬ್ಬನನ್ನೂ ಉಳಿಸದೆ ಎಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಯೆರಿಕೋವಿನ ಅರಸನಿಗಾದ ಗತಿಯೇ ಇದರ ಅರಸನಿಗೂ ಆಯಿತು.


ಆ ಹೊತ್ತು ಸೌರಣೆಯ ದಿವಸವಾಗಿದ್ದದರಿಂದ ಯೆಹೂದ್ಯರು - ಸಬ್ಬತ್‍ದಿನದಲ್ಲಿ ಶವಗಳು ಶಿಲುಬೆಯ ಮೇಲೆ ಇರಬಾರದೆಂದು ಪಿಲಾತನನ್ನು - ಅವರ ಕಾಲುಗಳನ್ನು ಮುರಿಸಿ ಅವರನ್ನು ತೆಗೆಸಿಹಾಕಬೇಕೆಂಬದಾಗಿ ಕೇಳಿಕೊಂಡರು; ಯಾಕಂದರೆ ಆ ಸಬ್ಬತ್‍ದಿನವು ಬಹು ವಿಶೇಷವಾದದ್ದು.


ಯೆರಿಕೋವಿನ ಅರಸನು 1; ಬೇತೇಲಿನ ಹತ್ತಿರವಿರುವ ಆಯಿ ಎಂಬ ಊರಿನ ಅರಸನು 1;


ಆಯಿ ಎಂಬ ಪಟ್ಟಣದ ಅರಸನನ್ನು ಹಿಡಿದು ಜೀವದೊಡನೆ ಯೆಹೋಶುವನ ಬಳಿಗೆ ತೆಗೆದುಕೊಂಡು ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು