Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 1:9 - ಕನ್ನಡ ಸತ್ಯವೇದವು J.V. (BSI)

9 ಕಡಲನ್ನೂ ಒಣನೆಲವನ್ನೂ ಸೃಷ್ಟಿಸಿದ ಪರಲೋಕದೇವರಾದ ಯೆಹೋವನ ಭಕ್ತನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನು ಅವರಿಗೆ “ನಾನು ಇಬ್ರಿಯನು; ಕಡಲನ್ನೂ ಒಣನೆಲವನ್ನೂ ಸೃಷ್ಟಿಸಿದ ಪರಲೋಕದ ದೇವರಾದ ಯೆಹೋವನ ಭಕ್ತನು” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅದಕ್ಕೆ ಯೋನನು: “ನಾನು ಹಿಬ್ರಿಯನು. ಸಮುದ್ರವನ್ನೂ ಭೂಮಿಯನ್ನೂ ಸೃಷ್ಟಿಸಿದ ಪರಲೋಕ ದೇವರಾದ ಸರ್ವೇಶ್ವರನ ಭಕ್ತನು ನಾನು,” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ಯೋನನು, “ನಾನು ಇಬ್ರಿಯನು, ನಾನು ಭೂಪರಲೋಕಗಳ ದೇವರಾದ ಯೆಹೋವನನ್ನು ಆರಾಧಿಸುವವನು. ಆತನು ಭೂಮಿಯನ್ನೂ ಸಾಗರಗಳನ್ನೂ ನಿರ್ಮಿಸಿದಾತನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವನು ಅವರಿಗೆ, “ನಾನು ಹಿಬ್ರಿಯನು. ಸಮುದ್ರವನ್ನೂ, ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರಲೋಕದ ದೇವರಾದ ಯೆಹೋವ ದೇವರಿಗೆ ನಾನು ಆರಾಧಿಸುವವನಾಗಿದ್ದೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 1:9
29 ತಿಳಿವುಗಳ ಹೋಲಿಕೆ  

ನೀನೊಬ್ಬನೇ ದೇವರು; ನೀನು ಉನ್ನತೋನ್ನತವಾದ ಆಕಾಶವನ್ನೂ ಅದರ ಸೈನ್ಯವನ್ನೂ ಭೂವಿುಯನ್ನೂ ಅದರ ಮೇಲಿರುವದನ್ನೂ ಸಮುದ್ರಗಳನ್ನೂ ಎಲ್ಲಾ ಜಲಚರಗಳನ್ನೂ ಉಂಟು ಮಾಡಿ ಸಮಸ್ತ ಪ್ರಾಣಿಗಳ ಜೀವಾಧಾರನಾಗಿರುತ್ತೀ.


ಪರಲೋಕದಲ್ಲಿರುವ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನ ಕೃಪೆಯು ಶಾಶ್ವತವಾದದ್ದು.


ನಾನು ಈ ವರ್ತಮಾನವನ್ನು ಕೇಳಿದಾಗ ನೆಲದ ಮೇಲೆ ಕೂತುಕೊಂಡು ಅತ್ತೆನು; ಕೆಲವು ದಿವಸಗಳವರೆಗೂ ಶೋಕಿಸುತ್ತಾ ಉಪವಾಸವಾಗಿದ್ದು ಪರಲೋಕ ದೇವರ ಮುಂದೆ ವಿಜ್ಞಾಪನೆ ಮಾಡುತ್ತಾ ಇದ್ದೆನು.


ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ - ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು ತನಗೋಸ್ಕರ ಯೆಹೂದ ದೇಶದ ಯೆರೂಸಲೇವಿುನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ.


ಅವರು ಸಮಾರ್ಯದಿಂದ ಸೆರೆಯವನಾಗಿ ಬಂದಿದ್ದ ಒಬ್ಬ ಯಾಜಕನನ್ನು ಅಲ್ಲಿಗೆ ಕಳುಹಿಸಿದರು. ಇವನು ಬೇತೇಲಿನಲ್ಲಿ ವಾಸವಾಗಿದ್ದು ಜನರಿಗೆ ಯೆಹೋವಭಕ್ತಿಯನ್ನು ಬೋಧಿಸಿದನು.


ಅವರಿಗೆ ಆರಂಭದಲ್ಲಿ ಯೆಹೋವನ ಭಯಭಕ್ತಿ ಇರಲಿಲ್ಲವಾದದರಿಂದ ಆತನು ಸಿಂಹಗಳನ್ನು ಕಳುಹಿಸಿದನು; ಅವು ಅವರಲ್ಲಿ ಅನೇಕರನ್ನು ಕೊಂದವು.


ತಪ್ಪಿಸಿಕೊಂಡವನೊಬ್ಬನು ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಇದನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನು ಎಷ್ಕೋಲ ಆನೇರರಿಗೆ ಸಹೋದರನು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು.


ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರಮಾಡಿಕೊಳ್ಳದೆ ತಮ್ಮ ಕಷ್ಟಗಳ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕ ದೇವರನ್ನು ದೂಷಿಸಿದರು.


ಕರ್ತನೇ, ನಿನ್ನ ನಾಮಕ್ಕೆ ಭಯಪಡದವರೂ ಅದನ್ನು ಘನವಾದದ್ದೆಂದು ಒಪ್ಪಿಕೊಳ್ಳದವರೂ ಯಾರಾದರೂ ಇದ್ದಾರೇ? ನೀನೊಬ್ಬನೇ ಪರಿಶುದ್ಧನು; ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಾಶಕ್ಕೆ ಬಂದದರಿಂದ ಎಲ್ಲಾ ಜನಾಂಗಗಳು ಬಂದು ನಿನ್ನ ಸನ್ನಿಧಾನದಲ್ಲಿ ನಮಸ್ಕಾರ ಮಾಡುವರು ಎಂದು ಹೇಳಿದರು.


ಅದೇ ಗಳಿಗೆಯಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು; ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತುಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕ ದೇವರನ್ನು ಘನಪಡಿಸಿದರು.


ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು; ನಾನು ಇಸ್ರಾಯೇಲ್ ವಂಶದವನು, ಬೆನ್ಯಾಮೀನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು; ನೇಮನಿಷ್ಠೆಗಳನ್ನು ನೋಡಿದರೆ ನಾನು ಫರಿಸಾಯನು,


ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು -


ಜನರೇ, ನೀವು ಮಾಡುವದು ಇದೇನು? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು; ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ ಆತನ ದಯೆಯನ್ನೂ ಭಯಭಕ್ತಿಯಿಂದ ಮರೆಹೊಗುವರು.


ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು, ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮ ಮಾಡಿ ಶಾಶ್ವತವಾಗಿ ನಿಲ್ಲುವದು.


ಅದಕ್ಕೆ ಸೈತಾನನು - ಯೋಬನು ದೇವರಲ್ಲಿ ಭಯಭಕ್ತಿಯನ್ನು ಲಾಭವಿಲ್ಲದೆ ಇಟ್ಟಿದ್ದಾನೋ?


ಆಗ ಅರಸನು ನನ್ನನ್ನು - ನಿನ್ನ ಅಪೇಕ್ಷೆಯೇನು ಎಂದು ಕೇಳಿದನು. ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ ಅರಸನಿಗೆ - ರಾಜರ ಚಿತ್ತವಿರುವದಾದರೆ ಮತ್ತು


ಅವರು ನಮಗೆ - ನಾವು ಪರಲೋಕ ಭೂಲೋಕಗಳ ದೇವರ ಸೇವಕರು. ಅನೇಕಾನೇಕ ವರುಷಗಳ ಹಿಂದೆ ಕಟ್ಟಿದ್ದ ಆಲಯವನ್ನು ತಿರಿಗಿ ಕಟ್ಟುತ್ತಿರುತ್ತೇವೆ. ಇಸ್ರಾಯೇಲ್ಯರ ಒಬ್ಬ ಮಹಾರಾಜನು ಅದನ್ನು ಕಟ್ಟಿಸಿ ತೀರಿಸಿದ್ದನು.


ಕರೆದು ಅವರಿಗೆ - ನೋಡಿರಿ, ನನ್ನ ಯಜಮಾನರು ಒಬ್ಬ ಇಬ್ರಿಯನನ್ನು ನಮ್ಮೊಳಗೆ ಸೇರಿಸಿ ನಮ್ಮನ್ನು ಅವಮಾನಕ್ಕೆ ಗುರಿಮಾಡಿದ್ದಾರೆ. ಅವನು ನನ್ನನ್ನು ಮಾನಭಂಗಪಡಿಸುವದಕ್ಕೆ ನನ್ನ ಹತ್ತಿರ ಬಂದನು. ನಾನು ಗಟ್ಟಿಯಾಗಿ ಕೂಗಿಕೊಂಡೆನು.


ಇದಲ್ಲದೆ ಐಗುಪ್ತ ದೇಶದ ಅರಸನು ಶಿಪ್ರಾ ಪೂಗಾ ಎಂಬ ಇಬ್ರಿಯ ಸೂಲಗಿತ್ತಿಯರ ಸಂಗಡ ಮಾತಾಡಿ


ಮರುದಿವಸ ಅವನು ಹೊರಟುಹೋಗಿ ನೋಡಿದಾಗ ಇಬ್ಬರು ಇಬ್ರಿಯರೇ ಜಗಳವಾಡುತ್ತಿದ್ದರು. ಅನ್ಯಾಯ ಮಾಡುತ್ತಿದ್ದವನಿಗೆ ಅವನು - ಏನಯ್ಯಾ, ನೀನು ಯಾಕೆ ಸ್ವಕುಲದವನನ್ನು ಹೊಡೆಯುತ್ತೀ ಎಂದು ಕೇಳಿದಾಗ


ದೇವರು ಒಣನೆಲಕ್ಕೆ ಭೂವಿುಯೆಂದೂ ಜಲಸಮೂಹಕ್ಕೆ ಸಮುದ್ರವೆಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೇದೆಂದು ನೋಡಿದನು.


ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ದೇಶದಿಂದಲೂ ನನ್ನನ್ನು ಕರತಂದು - ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನೆಂದು ಪ್ರಮಾಣಮಾಡಿ ಹೇಳಿದ ಪರಲೋಕದೇವರಾದ ಯೆಹೋವನು ನಿನ್ನ ಮುಂದೆ ತನ್ನ ದೂತನನ್ನು ಕಳುಹಿಸಿ ನೀನು ಅಲ್ಲಿಂದ ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಳ್ಳುವಂತೆ ಅನುಕೂಲಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು