Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 4:11 - ಕನ್ನಡ ಸತ್ಯವೇದವು J.V. (BSI)

11 ಇಂಥ ಗಿಡಕ್ಕಾಗಿ ನೀನು ಕನಿಕರಪಟ್ಟಿರುವಲ್ಲಿ ಎಡಗೈ ಬಲಗೈ ತಿಳಿಯದ ಒಂದು ಲಕ್ಷ ಇಪ್ಪತ್ತು ಸಾವಿರ ನರಪ್ರಾಣಿಗಳೂ ಬಹು ಪಶುಗಳೂ ಉಳ್ಳ ಆ ದೊಡ್ಡ ಪಟ್ಟಣವಾದ ನಿನೆವೆಗಾಗಿ ನಾನು ಕನಿಕರಪಡಬಾರದೋ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇಂಥ ಗಿಡಕ್ಕಾಗಿ ನೀನು ಕನಿಕರಪಡುವಾಗ ಎಡಗೈ ಬಲಗೈ ತಿಳಿಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು, ಅಪಾರ ಪಶುಪ್ರಾಣಿಗಳೂ ಇರುವ ದೊಡ್ಡ ಪಟ್ಟಣವಾದ ನಿನೆವೆಗಾಗಿ ನಾನು ಕನಿಕರಪಡಬಾರದೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹೀಗಿರುವಲ್ಲಿ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಹೆಚ್ಚುಮಂದಿ ನಿರಪರಾಧಿಗಳೂ ಅಪಾರ ಪಶುಪ್ರಾಣಿಗಳೂ ಇರುವ ನಿನೆವೆ ಮಹಾನಗರದ ಬಗ್ಗೆ ನಾನು ಇನ್ನೆಷ್ಟು ಚಿಂತೆಪಡಬೇಕು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಒಂದು ಗಿಡಕ್ಕಾಗಿ ನೀನು ಇಷ್ಟೊಂದು ದುಃಖಗೊಂಡರೆ, ನಿನೆವೆಯಂತಹ ಇಷ್ಟು ದೊಡ್ಡ ನಗರಕ್ಕಾಗಿ ನನಗೂ ಖಂಡಿತವಾಗಿ ದುಃಖವಾಗುತ್ತದೆ. ಈ ನಗರದಲ್ಲಿ ಅನೇಕಾನೇಕ ಜನರಿದ್ದಾರೆ! ಅನೇಕ ಪ್ರಾಣಿಗಳಿವೆ. ಈ ನಗರದಲ್ಲಿರುವ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ ಜನರಿಗೆ ತಾವು ತಪ್ಪು ಮಾಡುತ್ತಿರುವುದಾಗಿ ತಿಳಿದಿರಲಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹಾಗಾದರೆ ಎಡಬಲ ಕೈಗಳನ್ನು ತಿಳಿಯದವರಾದ ಲಕ್ಷದ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು ಬಹಳ ಪಶುಪ್ರಾಣಿಗಳೂ ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆಯನ್ನು ನಾನು ಚಿಂತಿಸಬಾರದೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 4:11
17 ತಿಳಿವುಗಳ ಹೋಲಿಕೆ  

ನಾನು ನಿನ್ನನ್ನು ಕರುಣಿಸಿದ ಹಾಗೆ ನೀನು ಸಹ ನಿನ್ನ ಜೊತೇಸೇವಕನನ್ನು ಕರುಣಿಸಬಾರದಾಗಿತ್ತೇ ಎಂದು ಹೇಳಿ ಸಿಟ್ಟುಮಾಡಿ


ನೀನೆದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಗಟ್ಟಿಯಾಗಿ ಕೂಗುತ್ತಾ ಅದನ್ನು ಖಂಡಿಸು; ಅದರ ನಿವಾಸಿಗಳ ದುಷ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ ಎಂದು ಅಪ್ಪಣೆಮಾಡಿದನು.


ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀ.


ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರೂ ಒಳ್ಳೇದು ಕೆಟ್ಟದ್ದು ಅರಿಯದ ನಿಮ್ಮ ಮಕ್ಕಳೂ ಅಲ್ಲಿಗೆ ಸೇರುವರು; ಅವರಿಗೇ ಆ ದೇಶವನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು.


ಪಶುಗಳಿಗೋಸ್ಕರ ಹುಲ್ಲನ್ನು ಮೊಳಿಸುತ್ತೀ; ಮನುಷ್ಯರಿಗೋಸ್ಕರ ಪೈರುಗಳನ್ನು ಹುಟ್ಟಿಸುತ್ತೀ. ಅವರು ಭೂವ್ಯವಸಾಯಮಾಡಿ ಆಹಾರವನ್ನೂ


ದೇವರು ನಿನೆವೆಯವರ ಕಾರ್ಯಗಳನ್ನು ನೋಡಿ ಅವರು ತಮ್ಮ ದುರ್ಮಾರ್ಗದಿಂದ ತಿರುಗಿಕೊಂಡರೆಂದು ತಿಳಿದು ಮನಮರುಗಿ ತಾನು ಅವರಿಗೆ ಮಾಡುವೆನೆಂದು ಪ್ರಕಟಿಸಿದ್ದ ಕೇಡನ್ನು ಮಾಡದೆ ಬಿಟ್ಟನು.


ಬನ್ನಿರಿ ವಾದಿಸುವ ಎಂದು ಯೆಹೋವನು ಅನ್ನುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದ ಹಾಗೆ ಬಿಳುಪಾಗುವವು; ಕಿರಮಂಜಿಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.


ಆ ಮಗುವು ಕೆಟ್ಟದ್ದು ಬೇಡ, ಒಳ್ಳೇದು ಬೇಕು ಅನ್ನುವಷ್ಟು ಬಲ್ಲವನಾಗುವದರೊಳಗೆ, ಯಾವ ಇಬ್ಬರು ರಾಜರಿಗೆ ನೀನು ಹೆದರಿ ನಡುಗುತ್ತೀಯೋ ಅವರ ದೇಶವು ನಿರ್ಜನವಾಗುವದು.


ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.


ಅದಕ್ಕೆ ಯೆಹೋವನು - ನೀನು ಆ ಸೋರೆಗಿಡಕ್ಕಾಗಿ ಕಷ್ಟಪಡಲಿಲ್ಲ, ಬೆಳೆಯಿಸಲಿಲ್ಲ; ಅದು ಒಂದು ರಾತ್ರಿಯಲ್ಲಿ ಹುಟ್ಟಿ ಒಂದು ರಾತ್ರಿಯಲ್ಲಿ ನಾಶವಾಯಿತು;


ನಿಮ್ಮ ಕೂಡ ನಾವೆಯಿಂದ ಹೊರಟುಬಂದ ಪಶುಪಕ್ಷಿಮೃಗಾದಿ ಸಕಲ ಭೂಜಂತುಗಳನ್ನೂ ಕುರಿತು ಸ್ಥಿರಪ್ರತಿಜ್ಞೆ ಮಾಡುತ್ತೇನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು