Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 11:12 - ಕನ್ನಡ ಸತ್ಯವೇದವು J.V. (BSI)

12 ಕಾಡುಕತ್ತೆಯ ಮರಿಗೆ ನರಜನ್ಮವಾದರೆ ಜಳ್ಳುಮನುಷ್ಯನು ಬುದ್ಧಿಯನ್ನು ಪಡೆದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕಾಡುಕತ್ತೆಯ ಮರಿಗೆ ನರಜನ್ಮವಾದರೆ ಅವಿವೇಕಿಯಾದ ಮನುಷ್ಯನು ವಿವೇಕವನ್ನು ಪಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕಾಡುಕತ್ತೆಮರಿ ನರಜನ್ಮ ತಾಳಿದಾಗ ಪೆದ್ದ ಮಾನವ ಬುದ್ಧಿವಂತನಾದ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಕಾಡುಕತ್ತೆಯು ಮನುಷ್ಯನನ್ನು ಹೇಗೆ ಹೆರಲಾರದೋ ಅದೇ ರೀತಿಯಲ್ಲಿ ದಡ್ಡನು ಎಂದಿಗೂ ಜ್ಞಾನಿಯಾಗಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಒಂದು ಕಾಡುಕತ್ತೆ ಮರಿಗೆ ಹೇಗೆ ಮನುಷ್ಯನಾಗಲು ಸಾಧ್ಯವಿಲ್ಲವೋ, ಹಾಗೆಯೇ ದಡ್ಡ ಮನುಷ್ಯನು ಜ್ಞಾನಿಯಾಗಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 11:12
24 ತಿಳಿವುಗಳ ಹೋಲಿಕೆ  

ಅಪ್ರಯೋಜಕನೇ, ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾಗಿದೆ ಎಂಬದಕ್ಕೆ ದೃಷ್ಟಾಂತಬೇಕೋ?


ಮತ್ತೆ ಮನಸ್ಸಿನಲ್ಲಿ ಹೀಗೆ ಯೋಚಿಸಿದೆನು - ದೇವರು ಮನುಷ್ಯರನ್ನು ಪರೀಕ್ಷಿಸುವದಕ್ಕೂ ಮನುಷ್ಯರು ಪಶುಪ್ರಾಯರಾಗಿದ್ದೇವೆಂದು ತಾವೇ ಗ್ರಹಿಸಿಕೊಳ್ಳುವದಕ್ಕೂ ಆಸ್ಪದವಾಗುವಂತೆ ಇದು ನರಜನ್ಮದವರ ನಿವಿುತ್ತವಾಗಿ ಆಯಿತಲ್ಲವೆ.


ನಾನು ವಿವೇಕಹೀನಪಾಮರನಾಗಿ ನಿನ್ನ ದೃಷ್ಟಿಯಲ್ಲಿ ಕೇವಲ ಪಶುವೇ ಆಗಿದ್ದೆನು.


ನಾವೆಲ್ಲರೂ ಪೂರ್ವದಲ್ಲಿ ಅವಿಧೇಯರಾಗಿದ್ದು ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಫೆಗಳನ್ನು ನೆರವೇರಿಸುತ್ತಾ ನಡೆದು ವಿುಕ್ಕಾದವರಂತೆ ಸ್ವಭಾವಸಿದ್ಧವಾಗಿ ದೇವರ ಕೋಪಕ್ಕೆ ಗುರಿಯಾಗಿದ್ದೆವು.


ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರ್ರಿ, ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.


ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.


ಅಡವಿಯಲ್ಲಿ ಪಳಗಿದ್ದು ಮದದಿಂದ ಗಾಳಿಯನ್ನು ಬುಸುಬುಸನೆ ಮೂಸಿನೋಡುವ ಹೆಣ್ಣು ಕಾಡುಕತ್ತೆಯ ಹಾಗಿದ್ದೀ; ಅದಕ್ಕೆ ಬೆದೆ ಏರಿದಾಗ ಯಾವ ಗಂಡುಕತ್ತೆಯು ನೂಕಿಬಿಟ್ಟೀತು? ಆಯಾ ತಿಂಗಳಿನಲ್ಲಿ ಅದನ್ನು ಹುಡುಕುವವುಗಳೆಲ್ಲಾ ಆಯಾಸಗೊಳ್ಳದೆ ಅದನ್ನು ದೊರಕಿಸಿಕೊಳ್ಳುವವು.


ಪಶುಪ್ರಾಯನು ಅರಿಯನು; ಹುಚ್ಚನು ತಿಳಿಯನು.


ಹುಟ್ಟಿದಂದಿನಿಂದ ನಾನು ಪಾಪಿಯೇ; ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ.


ಆಮೇಲೆ ಮನುಷ್ಯರಿಗೆ - ಇಗೋ, ಕರ್ತನ ಭಯವೇ ಜ್ಞಾನವು ದುಷ್ಟತನವನ್ನು ಬಿಡುವದೇ ವಿವೇಕವು ಎಂದು ಹೇಳಿದನು.


ನರನು ಎಷ್ಟರವನು! ಅವನು ಪರಿಶುದ್ಧನಾಗಿರುವದು ಸಾಧ್ಯವೋ? ಸ್ತ್ರೀಯಲ್ಲಿ ಹುಟ್ಟಿದವನು ನೀತಿವಂತನಾಗಿರಬಹುದೇ?


ಕಾಡುಕತ್ತೆಗೆ ಹುಲ್ಲಿರಲು ಅರಚೀತೇ, ಎತ್ತಿಗೆ ಮೇವಿರಲು ಕೂಗೀತೇ?


ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೇ ಹಿಡುಕೊಂಡು ವಕ್ರಬುದ್ಧಿಯುಳ್ಳವರ ಆಲೋಚನೆಯನ್ನು ನಿರರ್ಥಕ ಮಾಡುತ್ತಾನೆ.


ನನ್ನ ಆಯುಸ್ಸನ್ನು ಗೇಣುದ್ದವಾಗಿ ಮಾಡಿದ್ದೀಯಲ್ಲಾ; ನನ್ನ ಜೀವಿತಕಾಲ ನಿನ್ನ ಎಣಿಕೆಯಲ್ಲಿ ಏನೂ ಅಲ್ಲ ಅಂದೆನು. ಮನುಷ್ಯನೆಂಬವನು ಎಷ್ಟು ಸ್ಥಿರನೆಂದು ಕಂಡರೂ ಬರೀ ಉಸಿರೇ. ಸೆಲಾ.


ನೀನು ನರನನ್ನು ಪಾಪದ ನಿವಿುತ್ತ ಗದರಿಸಿ ಶಿಕ್ಷಿಸುವಾಗ ಅವನ ಚೆಲುವಿಕೆಯು ನುಸಿಹತ್ತಿತೋ ಎಂಬಂತೆ ಹಾಳಾಗಿ ಹೋಗುತ್ತದೆ. ಮನುಷ್ಯನೆಂಬವನು ಬರೀ ಉಸಿರೇ. ಸೆಲಾ.


ಮನುಷ್ಯನು ಬರೀ ಉಸಿರೇ; ಅವನ ಜೀವಕಾಲವು ಬೇಗನೆ ಗತಿಸಿಹೋಗುವ ನೆರಳಿನಂತಿದೆ.


ಪ್ರಸಂಗಿಯು ಹೀಗೆ ಹೇಳುತ್ತಾನೆ - ವ್ಯರ್ಥವೇ ವ್ಯರ್ಥ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ!


ನಿನ್ನ ಹೃದಯದಿಂದ ಕರಕರೆಯನ್ನೂ ದೇಹದಿಂದ ಶ್ರಮೆಯನ್ನೂ ತೊಲಗಿಸು; ಬಾಲ್ಯವೂ ಪ್ರಾಯವೂ ವ್ಯರ್ಥವಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು