Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 11:20 - ಕನ್ನಡ ಸತ್ಯವೇದವು J.V. (BSI)

20 ಆದರೆ ದುಷ್ಟರು ನಿರಾಶ್ರಯರಾಗಿ ಕಂಗೆಡುವರು, ಪ್ರಾಣಬಿಡಬೇಕೆಂಬದೇ ಅವರ ಆಶೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೆ ದುಷ್ಟರು ನಿರಾಶ್ರಯರಾಗಿ ಕಂಗೆಡುವರು, ಪ್ರಾಣಬಿಡಬೇಕೆಂಬುದೇ ಅವರ ಬಯಕೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ದುರ್ಜನರು ನಿರಾಶೆಯಿಂದ ಕಂಗೆಡುವರು ಪ್ರಾಣಬಿಡಬೇಕೆಂಬುದೇ ಅವರ ಆಶೆಯಾಗಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ದುಷ್ಟರು ಸಹಾಯಕ್ಕಾಗಿ ಎದುರುನೋಡಿದರೂ ತಮ್ಮ ಆಪತ್ತುಗಳಿಂದ ಪಾರಾಗಲು ಅವರಿಗೆ ಸಾಧ್ಯವಿಲ್ಲ. ಅವರ ನಿರೀಕ್ಷೆಯೇ ಅವರನ್ನು ಮರಣಕ್ಕೆ ನಡೆಸುತ್ತದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವುದಿಲ್ಲ; ಪ್ರಾಣಬಿಡಬೇಕೆಂಬುದೇ ಅವರ ನಿರೀಕ್ಷೆಯಾಗಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 11:20
25 ತಿಳಿವುಗಳ ಹೋಲಿಕೆ  

ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವದಿಲ್ಲ; ಸ್ವಲ್ಪ ಹೊತ್ತು ಅಂಗಾಲಿಡುವದಕ್ಕೂ ಸ್ಥಳ ಸಿಕ್ಕುವದಿಲ್ಲ. ನೀವು ನಡುಗುವ ಹೃದಯವುಳ್ಳವರಾಗಿಯೂ ದಿಕ್ಕು ತೋರದೆ ಕಂಗೆಟ್ಟವರಾಗಿಯೂ ಮನಗುಂದಿದವರಾಗಿಯೂ ಇರುವಂತೆ ಯೆಹೋವನು ಮಾಡುವನು.


ನಾನು ಬಡವರ ಇಷ್ಟವನ್ನು ಭಂಗಪಡಿಸಿ ವಿಧವೆಯನ್ನು ಕಂಗೆಡಿಸಿದೆನೋ?


ಯಾವನು ಸ್ವಲಾಭಕ್ಕಾಗಿ ವಿುತ್ರರ ಮೇಲೆ ದೂರು ಹೊರಿಸುವನೋ ಅವನ ಮಕ್ಕಳು ಕಂಗೆಡುವರು.


ಈ ಅತ್ಯಂತ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು; ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು;


ವೇಗಿಗೂ ಓಡಿಹೋಗುವದಕ್ಕೆ ಶಕ್ತಿಯಿರದು, ಬಲಿಷ್ಟನು ತನ್ನ ಬಲವನ್ನು ಸ್ಥಿರಪಡಿಸಿಕೊಳ್ಳನು, ಪರಾಕ್ರವಿುಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು,


ನಮಗೆ ಬರತಕ್ಕ ಸಹಾಯವನ್ನು ವ್ಯರ್ಥವಾಗಿ ಎದುರುನೋಡಿ ನೋಡಿ ಕಣ್ಣು ಮೊಬ್ಬಾಯಿತು. ನಮ್ಮನ್ನು ಉದ್ಧರಿಸಲಾರದ ಜನಾಂಗದ ಆಗಮನವನ್ನು ನಮ್ಮ ಕೋವರದಲ್ಲಿ ಕಾದುಕೊಂಡಿದ್ದೇವಲ್ಲಾ.


ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವವನ ದೀಪವು ಮಧ್ಯರಾತ್ರಿಯ ಅಂಧಕಾರದಲ್ಲಿ ಆರಿಹೋಗುವದು.


ದುಷ್ಟನಿಗೆ ಶಂಕಿಸಿದ್ದೇ ಸಂಭವಿಸುವದು; ಶಿಷ್ಟನಿಗೆ ಇಷ್ಟವು ಲಭಿಸುವದು.


ಮೊರೆಯಿಟ್ಟಿಟ್ಟು ಬೇಸತ್ತು ಹೋಗಿದ್ದೇನೆ; ಗಂಟಲು ಒಣಗಿಹೋಯಿತು. ನನ್ನ ದೇವರನ್ನು ನಿರೀಕ್ಷಿಸುತ್ತಾ ದೃಷ್ಟಿ ಮಂದವಾಯಿತು.


ಅಧರ್ಮಿಗಳು ಅಡಗಿಕೊಳ್ಳುವದಕ್ಕೆ ಅನುಕೂಲವಾದ ಯಾವ ಕತ್ತಲೂ ಯಾವ ಗಾಢಾಂಧಕಾರವೂ ಇರುವದಿಲ್ಲ.


ದೇವರು ಕರುಣವಿಲ್ಲದೆ ಅವನ ಮೇಲೆ [ತನ್ನ ಬಾಣಗಳನ್ನು] ಎಸೆಯುತ್ತಲಿರುವನು, ಅವನು ಆತನ ಕೈಯಿಂದ ತಪ್ಪಿಸಿಕೊಳ್ಳಲೇಬೇಕೆಂದಿರುವನು.


ದೇವರು ಭ್ರಷ್ಟನ ಆತ್ಮವನ್ನು ಕಡಿದೆಳೆಯುವಾಗ ಅವನಿಗೆ ನಿರೀಕ್ಷೆಯೆಲ್ಲಿಯದು?


ಅವನ ನಿರ್ಭಯದ ಗುಡಾರದಿಂದ ಅವನನ್ನು ಎಳೆದು ಮಹಾಭೀತಿಗಳ ರಾಜನ ಸನ್ನಿಧಿಗೆ ಸಾಗಿಸಿಕೊಂಡು ಹೋಗುವನು.


ನಾನು ನಿಮಗೆ ಮಾಡುವದೇನಂದರೆ - ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜ ಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.


ಆತನು ದಯಮಾಡಿ ತನ್ನ ಕೈ ಜಾಡಿಸಿ ನನ್ನನ್ನು ಜಜ್ಜಿ ಸಂಹರಿಸಿದರೆ


ಆಮೇಲೆ ಯೋಬನು ಪ್ರತ್ಯುತ್ತರವಾಗಿ ಇಂತೆಂದನು -


ನನ್ನ ಬಲಗಡೆಗೆ ನೋಡಿ ಪರಾಂಬರಿಸು; ಅಲ್ಲಿ ಸಹಾಯಕರು ಯಾರೂ ಇಲ್ಲ. ಆಶ್ರಯವು ನಾಶವಾಯಿತು; ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ.


ಶಿಷ್ಟನ ನಂಬಿಕೆಗೆ ಆನಂದವು ಫಲ; ದುಷ್ಟನ ನಿರೀಕ್ಷೆ ನಿಷ್ಫಲ.


ಕುರುಬರು ಓಡಿಹೋಗುವದಕ್ಕೆ ಮಾರ್ಗವು ಸಿಕ್ಕದು, ಮಂದೆಯ ಹಿರಿಯ ಮಣಿಗಳು ತಪ್ಪಿಸಿಕೊಳ್ಳುವದಕ್ಕೆ ಆಸ್ಪದ ದೊರೆಯದು.


ಅವರು ನಿಕ್ಷೇಪಕ್ಕಾಗಿ ಅಗೆಯುವ ಆಶೆಗಿಂತಲೂ ಹೆಚ್ಚಾದ ಆಶೆಯಿಂದ ಮರಣವನ್ನು ಹಾರೈಸಿ ಹುಡುಕಿದರೂ ಅದು ದೊರೆಯದು.


ಸಮಾಧಿಗೆ ಸೇರುವಾಗ ಬಹಳವಾಗಿ ಹರ್ಷಿಸಿ ಉಲ್ಲಾಸಪಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು