Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 12:10 - ಕನ್ನಡ ಸತ್ಯವೇದವು J.V. (BSI)

10 ಪ್ರತಿಪ್ರಾಣಿಯ ಪ್ರಾಣವೂ ಸಮಸ್ತಮನುಷ್ಯರ ಆತ್ಮಗಳೂ ಆತನ ಕೈಯಲ್ಲಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಪ್ರತಿ ಪ್ರಾಣಿಯ ಪ್ರಾಣವು, ಸಮಸ್ತ ಮನುಷ್ಯರ ಆತ್ಮಗಳೂ ಯೆಹೋವನ ಕೈಯಲ್ಲಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆತನ ಕೈಯಲ್ಲಿದೆ ಎಲ್ಲ ಜೀವಿಗಳ ಪ್ರಾಣ ಪ್ರತಿಯೊಬ್ಬ ನರಮಾನವನ ಶ್ವಾಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಪ್ರತಿಯೊಂದು ಪ್ರಾಣಿಯ ಜೀವವೂ ಪ್ರತಿಯೊಬ್ಬ ವ್ಯಕ್ತಿಯ ಆತ್ಮವೂ ದೇವರ ಕೈಯಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದೇವರ ಕೈಯಲ್ಲಿ ಎಲ್ಲಾ ಜೀವಿಗಳ ಪ್ರಾಣವೂ ಎಲ್ಲಾ ಮನುಷ್ಯರ ಶ್ವಾಸವೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 12:10
17 ತಿಳಿವುಗಳ ಹೋಲಿಕೆ  

ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ, ಇರುತ್ತೇವೆ. ನಿಮ್ಮ ಕವಿಗಳಲ್ಲಿಯೂ ಕೆಲವರು - ನಾವು ಆತನ ಸಂತಾನದವರೇ ಎಂಬದಾಗಿ ಹೇಳಿದ್ದಾರೆ.


ನಾನು ದೇವರಾತ್ಮನಿಂದಲೇ ನಿರ್ಮಿತನಾಗಿದ್ದೇನೆ, ನನ್ನ ಜೀವವು ಸರ್ವಶಕ್ತನ ಶ್ವಾಸದಿಂದುಂಟಾಗಿದೆ.


ತಾನೇ ಎಲ್ಲರಿಗೂ ಜೀವಶ್ವಾಸ ಮುಂತಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ.


ಅವರು ಅಡ್ಡಬಿದ್ದು - ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ,


ನನ್ನ ನ್ಯಾಯವನ್ನು ತಪ್ಪಿಸಿದ ದೇವರಾಣೆ, ನನ್ನ ಆತ್ಮವನ್ನು ವ್ಯಥೆಪಡಿಸಿರುವ ಸರ್ವಶಕ್ತನಾಣೆ,


ಪರಲೋಕದೊಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿ; ಆತನ ಆಲಯದ ಪಾತ್ರೆಗಳನ್ನು ಸನ್ನಿಧಿಗೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ ಮತ್ತು ಪತ್ನ್ಯುಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿ ಇಲ್ಲದ ಬೆಳ್ಳಿಬಂಗಾರತಾಮ್ರ ಕಬ್ಬಿಣ ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ;


ನೀನು ವಿಮುಖನಾಗಲು ತಲ್ಲಣಿಸುತ್ತವೆ; ಅವುಗಳ ಶ್ವಾಸವನ್ನು ತೆಗೆದುಕೊಳ್ಳಲು ಅವು ಸತ್ತು ತಿರಿಗಿ ಮಣ್ಣಿಗೆ ಸೇರುತ್ತವೆ.


ಹೀಗಿರಲು ಯೆಹೋವದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು; ಆಗ ಮನುಷ್ಯನು ಬದುಕುವ ಪ್ರಾಣಿಯಾದನು.


ದೇಹದಿಂದ ಹುಟ್ಟಿದ್ದು ದೇಹವೇ; ಆತ್ಮನಿಂದ ಹುಟ್ಟಿದ್ದು ಆತ್ಮವೇ.


ನಾನಂತೂ ಭೂವಿುಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲ ಪ್ರಾಣಿಗಳನ್ನೂ ಅಳಿಸಿಬಿಡುವೆನು; ಭೂವಿುಯಲ್ಲಿರುವ ಸಮಸ್ತವೂ ಲಯವಾಗುವದು.


ದೇವರು ಭ್ರಷ್ಟನ ಆತ್ಮವನ್ನು ಕಡಿದೆಳೆಯುವಾಗ ಅವನಿಗೆ ನಿರೀಕ್ಷೆಯೆಲ್ಲಿಯದು?


ಏಕೆಂದರೆ ಧರ್ಮಿಗಳೂ ಜ್ಞಾನಿಗಳೂ ಅವರ ಕೃತ್ಯಗಳೂ ದೇವರ ಕೈಯಲ್ಲುಂಟು; ತಾವು ಪ್ರೀತಿಗೆ ಗುರಿಯೋ ದ್ವೇಷಕ್ಕೆ ಗುರಿಯೋ ಮನುಷ್ಯರಿಗೆ ಗೊತ್ತಿಲ್ಲ. ಅವರ ಮುಂದೆ ಸಮಸ್ತವೂ ಕಾದಿದೆ ಎಂಬೀ ವಿಷಯಗಳನ್ನೆಲ್ಲಾ ವಿಚಾರಿಸಬೇಕೆಂದು ಮನಸ್ಸಿಗೆ ತೆಗೆದುಕೊಂಡೆನು.


ಆಕಾಶಮಂಡಲವನ್ನುಂಟುಮಾಡಿ ಹರವಿ ಭೂಮಂಡಲವನ್ನೂ ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು, ಭೂಚರರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗನ್ನುತ್ತಾನೆ -


ನೀನು ಜೀವಶ್ವಾಸವನ್ನು ಊದಲು ಅವು ಹೊಸದಾಗಿ ಹುಟ್ಟುತ್ತವೆ. ಭೂವಿುಯನ್ನು ನೂತನಪಡಿಸುತ್ತಿರುತ್ತೀ.


ನಾನು ಸರ್ವದಾ ವ್ಯಾಜ್ಯವಾಡೆನು, ಕಡೆಯ ತನಕ ಕೋಪಿಸಿಕೊಳ್ಳೆನು, ಹೀಗೆ ಮಾಡಿದರೆ ಮನುಷ್ಯಾತ್ಮವೂ ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು