Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 12:14 - ಕನ್ನಡ ಸತ್ಯವೇದವು J.V. (BSI)

14 ಇಗೋ, ಯಾರೂ ಕಟ್ಟದಹಾಗೆ ಕೆಡವಿಬಿಡುವನು, ಯಾರೂ ಬಿಡಿಸದಂತೆ ಸೆರೆಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಗೋ, ಯಾರೂ ಕಟ್ಟದ ಹಾಗೆ ಕೆಡವಿಬಿಡುವನು, ಯಾರೂ ಬಿಡಿಸದಂತೆ ಸೆರೆಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆತ ಕೆಡವಿದ್ದನ್ನು ಯಾರಿಂದಲೂ ಕಟ್ಟಲಾಗದು ಆತ ಸೆರೆಹಿಡಿದವರನ್ನು ಯಾರಿಂದಲೂ ಬಿಡಿಸಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದೇವರು ಕೆಡವಿದ್ದನ್ನು ಮತ್ತೆ ಕಟ್ಟುವುದಕ್ಕಾಗಲಿ ಸೆರೆಗೆ ಹಾಕಿದವನನ್ನು ಬಿಡಿಸುವುದಕ್ಕಾಗಲಿ ಯಾರಿಗೂ ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದೇವರು ಕೆಡವಿದ್ದನ್ನು ತಿರುಗಿ ಕಟ್ಟಲಾಗುವುದಿಲ್ಲ; ದೇವರು ಸೆರೆಯಲ್ಲಿ ಹಾಕುವ ಮನುಷ್ಯನನ್ನು ಯಾರೂ ಬಿಡಿಸಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 12:14
19 ತಿಳಿವುಗಳ ಹೋಲಿಕೆ  

ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ - ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯುವವನೂ ಯಾರೂ ತೆರೆಯದಂತೆ ಮುಚ್ಚುವವನೂ ಆಗಿರುವಾತನು ಹೇಳುವದೇನಂದರೆ -


ಅವನು ದಾವೀದನ ಮನೆಯ ಬೀಗದ ಕೈಯನ್ನು ತನ್ನ ಹೆಗಲ ಮೇಲೆ ವಹಿಸಿಕೊಳ್ಳುವಂತೆ ಮಾಡುವೆನು; ಅವನು ತೆರೆದರೆ ಯಾರೂ ಮುಚ್ಚರು, ಮುಚ್ಚಿದರೆ ಯಾರೂ ತೆರೆಯರು.


ಹೀಗಿರಲು ಎದೋಮ್ಯರು - ನಾವು ಹಾಳಾದೆವು, ಆದರೆ ಹಾಳುಪ್ರದೇಶಗಳನ್ನು ಮತ್ತೆ ಕಟ್ಟುವೆವು ಅಂದುಕೊಂಡರೆ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಅವರು ಕಟ್ಟಿದರೂ ನಾನು ಕೆಡವಿ ಹಾಕುವೆನು; ಅವರು ದುಷ್ಟ ಪ್ರಾಂತದವರೂ, ಯೆಹೋವನ ನಿತ್ಯಕೋಪಕ್ಕೆ ಈಡಾದ ಜನರೂ ಅನ್ನಿಸಿಕೊಳ್ಳುವರು.


ಸೇನಾಧೀಶ್ವರನಾದ ಯೆಹೋವನು ಹೀಗೆ ನುಡಿಯುತ್ತಾನೆ - ಬಾಬೆಲಿನ ಗಾತ್ರವಾದ ಪೌಳಿ ಗೋಡೆಯು ಸಂಪೂರ್ಣವಾಗಿ ನೆಲಸಮವಾಗುವದು, ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥ, ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವದು.


ಆತನು ತನ್ನ ಕೆಲಸವನ್ನು ಎಲ್ಲರೂ ತಿಳಿದುಕೊಳ್ಳಬೇಕೆಂದು ಪ್ರತಿಯೊಬ್ಬನ ಕೈಯನ್ನು ಮುದ್ರಿಸುವನು.


ಆತನು ನನ್ನನ್ನು ಸುತ್ತುಮುತ್ತಲೂ ಕೆಡವಿದ್ದರಿಂದ ಇಲ್ಲದೆ ಹೋದೆನು. ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟಿದ್ದಾನೆ.


ದೇವರು ನನ್ನನ್ನು ತುಂಟರಿಗೆ ಒಪ್ಪಿಸಿ ಕೆಟ್ಟವರ ಕೈಗೆ ಎಸೆದುಬಿಟ್ಟಿದ್ದಾನೆ.


ಆತನು ಹಾದುಹೋದರೂ ಸೆರೆಯಲ್ಲಿಟ್ಟರೂ ನ್ಯಾಯವಿಚಾರಣೆಗೆ ಕರೆದರೂ ಆತನನ್ನು ತಳ್ಳಿಬಿಡುವವರು ಯಾರು?


ಅಬೀಷೈಯು ದಾವೀದನಿಗೆ - ದೇವರು ಈ ಹೊತ್ತು ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದಾನೆ; ಅಪ್ಪಣೆಯಾಗಲಿ, ನಾನು ಬರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಹತ್ತಿಕೊಳ್ಳುವಂತೆ ತಿವಿಯುವೆನು; ಎರಡನೆಯ ಸಾರಿ ಹೊಡೆಯುವದು ಅವಶ್ಯವಿಲ್ಲ ಎಂದು ಹೇಳಿದನು.


ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವನು; ನಾನು ನಿನ್ನನ್ನು ಕೊಂದು ನಿನ್ನ ತಲೆಯನ್ನು ಕಡಿದುಹಾಕಿ ಫಿಲಿಷ್ಟಿಯಸೈನ್ಯದ ಶವಗಳನ್ನು ಮೃಗಪಕ್ಷಿಗಳಿಗೆ ಹಂಚಿಕೊಡುವೆನು. ಇದರಿಂದ ಇಸ್ರಾಯೇಲ್ಯರೊಳಗೆ ದೇವರಿರುತ್ತಾನೆಂಬದು ಭೂಲೋಕದವರಿಗೆಲ್ಲಾ ತಿಳಿದು ಬರುವದು;


ಯಾಕಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು ಎಲ್ಲರನ್ನೂ ಅವಿಧೇಯತೆಯೆಂಬ ದುಃಸ್ಥಿತಿಯಲ್ಲಿ ಕಟ್ಟಿಹಾಕಿದ್ದಾನೆ.


ಯೆಹೋವನು ಬಾಬೆಲಿಗೆ ಬರಮಾಡುವ ವಿಪತ್ತಿನಿಂದ ಆ ಪಟ್ಟಣವೂ ಹೀಗೆಯೇ ಮುಣುಗುವದು, ಮತ್ತೆ ಏಳದು ಎಂದು ಹೇಳು. ಜನಗಳು ಆಯಾಸಗೊಂಡು ದುಡಿದದ್ದು [ಬೆಂಕಿಗೆ ತುತ್ತಾಗುವದು] ಎಂಬ ಮಾತಿನವರೆಗೆ ಯೆರೆಮೀಯನ ಪ್ರವಾದನೆ.


ನೀನು ದುರ್ಗವನ್ನು ನಾಶಪಡಿಸಿ ಪಟ್ಟಣವನ್ನು ಹಾಳು ದಿಬ್ಬವನ್ನಾಗಿಯೂ ಅನ್ಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಬಾರದ ಹಾಳೂರನ್ನಾಗಿಯೂ ಮಾಡಿದ್ದೀ.


ಮತ್ತು ಆ ಪ್ರದೇಶವನ್ನು ಜವುಗುನೆಲವನ್ನಾಗಿಯೂ ಮುಳ್ಳುಹಂದಿಗೆ ಸೊತ್ತನ್ನಾಗಿಯೂ ಮಾಡಿ ನಾಶನವೆಂಬ ಬರಲಿನಿಂದ ಗುಡಿಸಿಬಿಡುವೆನು ಎಂದು ಸೇನಾಧೀಶ್ವರನಾದ ಯೆಹೋವನು ಹೇಳಿದ್ದಾನೆ.


ಯೆಹೋವನು ನನ್ನನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟರೂ ನೀನು ನನ್ನನ್ನು ಕೊಲ್ಲಲಿಲ್ಲ; ಇದರಿಂದ ನೀನು ನನಗೆ ಹಿತವನ್ನೇ ಮಾಡುವಂಥವನೆಂಬದು ಈ ಹೊತ್ತು ಪ್ರಕಟವಾಯಿತು.


ನಾನು ನಿನ್ನನ್ನು ಬೋಳುಬಂಡೆ ಮಾಡುವೆನು; ನೀನು ಬಲೆಗಳಿಗೆ ಹಾಸಬಂಡೆಯಾಗುವಿ; ನಿನ್ನ ಮೇಲೆ ಇನ್ನು ಕಟ್ಟಡಕಟ್ಟರು; ಯೆಹೋವನಾದ ನಾನೇ ಅಪ್ಪಣೆಕೊಟ್ಟಿದ್ದೇನೆ; ಇದು ಕರ್ತನಾದ ಯೇಹೋವನ ನುಡಿ.


ದೇವರು ನೋಹನಿಗೆ ಅಪ್ಪಣೆಕೊಟ್ಟಂತೆ ಎಲ್ಲಾ ಪ್ರಾಣಿಗಳಲ್ಲಿ ಒಂದು ಗಂಡು ಒಂದು ಹೆಣ್ಣು ಈ ಮೇರೆಗೆ ಸೇರಿದವು. ಯೆಹೋವನು ನೋಹನನ್ನು ಒಳಗಿಟ್ಟು ಮುಚ್ಚಿದನು.


ದೇವರ ಕಾರ್ಯವನ್ನು ನೋಡು; ಆತನು ಸೊಟ್ಟಗೆ ಮಾಡಿದ್ದನ್ನು ನೆಟ್ಟಗೆ ಮಾಡುವದಕ್ಕೆ ಯಾರಿಂದಾದೀತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು