Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 12:21 - ಕನ್ನಡ ಸತ್ಯವೇದವು J.V. (BSI)

21 ಪ್ರಭುಗಳಿಗೆ ಅವಮಾನವನ್ನುಂಟುಮಾಡಿ ಬಲಿಷ್ಠರ ನಡುಕಟ್ಟನ್ನು ಸಡಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಪ್ರಭುಗಳಿಗೆ ಅವಮಾನವನ್ನು ಉಂಟುಮಾಡಿ ಬಲಿಷ್ಠರ ನಡುಕಟ್ಟನ್ನು ಸಡಿಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅಧಿಪತಿಗಳಿಗೆ ಉಂಟುಮಾಡುತ್ತಾನೆ ಅವಮಾನವನ್ನು ಬಿಚ್ಚಿಬಿಡುತ್ತಾನೆ ಬಲಾಢ್ಯರ ನಡುಕಟ್ಟನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದೇವರು ಪ್ರಮುಖರಿಗೆ ಅವಮಾನ ಮಾಡುವನು; ಅಧಿಪತಿಗಳ ಶಕ್ತಿಯನ್ನು ತೆಗೆದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯ್ಯುತ್ತಾರೆ; ಬಲಿಷ್ಠರ ಬಲವನ್ನು ಸಡಿಲಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 12:21
25 ತಿಳಿವುಗಳ ಹೋಲಿಕೆ  

ಪ್ರಭುಗಳಿಗೆ ಅಪಮಾನವನ್ನುಂಟುಮಾಡಿ ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವಾತನು


ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ವಜ್ರಕವಚವನ್ನು ಧರಿಸಿಕೊಂಡು


ಕಡೇ ಮಾತೇನಂದರೆ, ನೀವು ಕರ್ತನನ್ನೂ ಆತನ ಅತ್ಯಧಿಕವಾದ ಶಕ್ತಿಯನ್ನೂ ಆಶ್ರಯಿಸಿಕೊಂಡವರಾಗಿ ಬಲಗೊಳ್ಳಿರಿ.


ಆ ಘನವನ್ನು ಅವನು ದೇವರಿಗೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.


ಅವನು ಒಂದು ದಿವಸ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್‍ಹದ್ದೋನನು ಅರಸನಾದನು.


ಗರ್ವದ ಸಕಲ ವೈಭವವನ್ನು ಹೊಲಸುಮಾಡಬೇಕೆಂತಲೂ ಲೋಕಮಾನ್ಯರೆಲ್ಲರನ್ನು ಅವಮಾನ ಪಡಿಸಬೇಕೆಂತಲೂ ಸೇನಾಧೀಶ್ವರನಾದ ಯೆಹೋವನೇ ಹೀಗೆ ಸಂಕಲ್ಪಿಸಿದ್ದಾನೆ.


ನಿನ್ನ ನಿಲುವಂಗಿಯನ್ನು ಅವನಿಗೆ ತೊಡಿಸಿ ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟಿ ನಿನ್ನ ಅಧಿಕಾರವನ್ನು ಅವನ ಕೈಗೆ ಕೊಡುವೆನು; ಅವನು ಯೆರೂಸಲೇವಿುನ ನಿವಾಸಿಗಳಿಗೂ ಯೆಹೂದದ ಮನೆತನದವರಿಗೂ ತಂದೆಯಾಗುವನು.


ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ.


ಅವರಲ್ಲಿ ಯಾರೂ ಬಳಲಿ ಮುಗ್ಗರಿಸರು, ಯಾರೂ ತೂಕಡಿಸಿ ನಿದ್ರಿಸರು; ಅವರ ನಡುಕಟ್ಟು ಬಿಚ್ಚಿಲ್ಲ, ಅವರ ಕೆರದ ಬಾರು ಕಿತ್ತಿಲ್ಲ;


ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲಾ; ಯೆಹೋವನ ಆ ಮಾತು ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲಿ ಹಾಕಿಬಿಡು ಎಂದು ಹೇಳಿದನು.


ಮೋಶೆ ಆಜ್ಞಾಪಿಸಿದಂತೆ ಅವರು ಮರುದಿನದ ತನಕ ಅದನ್ನು ಇಟ್ಟುಕೊಂಡರು; ಅದು ನಾರಲಿಲ್ಲ, ಹುಳವೂ ಬೀಳಲಿಲ್ಲ.


ಅಪ್ಪಣೆಕೊಡದೆ ಹೋದರೆ ನಾನು ನಿನ್ನ ದೇಶಕ್ಕೆಲ್ಲಾ ಕಪ್ಪೆಗಳಿಂದ ಉಪದ್ರವ ಕೊಡುವೆನು.


ಬಂಗಾರವನ್ನು ಕೂಡಿಸಿಟ್ಟು ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿದ ಅಧಿಪತಿಗಳ ಸಂಗಡಲೂ ವಿಶ್ರವಿುಸಿಕೊಳ್ಳುತ್ತಿದ್ದೆನು.


ಅರಸರು ಹಾಕಿದ ಬಂಧನವನ್ನು ಬಿಚ್ಚಿಬಿಟ್ಟು ಅವರ ಸೊಂಟಕ್ಕೇ ಚಿಂದಿಯನ್ನು ಬಿಗಿಯುವನು.


ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.


ಪ್ರಭುಗಳನ್ನು ನಿರ್ನಾಮ ಮಾಡುತ್ತಾನೆ, ಭೂಪತಿಗಳನ್ನು ಶೂನ್ಯಗೊಳಿಸುತ್ತಾನೆ.


ಯೆಹೋವನು ಯಾವನ ಕೈಹಿಡಿದು ಯಾವನೆದುರಿಗೆ ಜನಾಂಗಗಳನ್ನು ತುಳಿದು ರಾಜರ ನಡುಕಟ್ಟನ್ನು ಬಿಚ್ಚಿ ಯಾವನ ಮುಂದೆ ಬಾಗಿಲುಹೆಬ್ಬಾಗಿಲುಗಳನ್ನು ತೆರೆದು ಮುಚ್ಚಲೀಸನೋ ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ -


ನಾನು ಅದರೊಳಗಿಂದ ಅಧಿಪತಿಯನ್ನು ಕಡಿದುಹಾಕಿ ಸಕಲರಾಜ್ಯಾಧಿಕಾರಿಗಳನ್ನೂ ಸಂಹರಿಸುವೆನು; ಇದು ಯೆಹೋವನ ನುಡಿ.


ದೇವರು ತಾನು ಹಾಕಿದ್ದ ಕಟ್ಟನ್ನು ಸಡಲಿಸಿ ನನ್ನನ್ನು ಬಾಧಿಸುವದಕ್ಕೆ ಅವರನ್ನು ಬಿಟ್ಟಿದ್ದಾನೆ. ಅವರು ನನ್ನ ಎದುರಿನಲ್ಲಿಯೇ ಕಡಿವಾಣವನ್ನು ಕಿತ್ತು ಹಾಕಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು