Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 18:8 - ಕನ್ನಡ ಸತ್ಯವೇದವು J.V. (BSI)

8 ತನ್ನ ಹೆಜ್ಜೆಗಳಿಂದಲೇ ಬಲೆಗೆ ಬೀಳುವನು, ಗುಂಡಿಯನ್ನು ಮುಚ್ಚಿದ ತಟ್ಟಿಯ ಮೇಲೆ ನಡೆಯುವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ತನ್ನ ಹೆಜ್ಜೆಗಳಿಂದಲೇ ಬಲೆಗೆ ಬೀಳುವನು, ಹಾಳು ಗುಂಡಿಯ ಮೇಲೆ ನಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವನನ್ನು ಅವನ ಕಾಲುಗಳೆ ಬಲೆಗೆ ಬೀಳಿಸುವುವು ಅವನನ್ನು ಪಾಳುಗುಂಡಿಯ ಮೇಲೆ ನಡೆಸುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವನ ಸ್ವಂತ ಕಾಲುಗಳೇ ಅವನನ್ನು ಬಲೆಗೆ ನಡೆಸುತ್ತದೆ. ಅವನು ಬಲೆಯೊಳಗೆ ನಡೆದುಹೋಗಿ ಸಿಕ್ಕಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ದುಷ್ಟನು ತನ್ನ ಹೆಜ್ಜೆಗಳಿಂದಲೇ ಬಲೆಯಲ್ಲಿ ಬೀಳುವನು; ಅವನು ಕುಣಿಯಲ್ಲಿ ಬಿದ್ದು ಅಲೆದಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 18:8
18 ತಿಳಿವುಗಳ ಹೋಲಿಕೆ  

ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದುಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು.


ಆದಕಾರಣ ಬೋನುಗಳು ನಿನ್ನ ಸುತ್ತಲು ಕಾದಿವೆ, ಫಕ್ಕನೆ ಉಂಟಾದ ಭಯವು ನಿನ್ನನ್ನು ತಲ್ಲಣಗೊಳಿಸುತ್ತದೆ.


ಅವನಿಗೆ ನಾಶನವು ಅಕಸ್ಮಾತ್ತಾಗಿ ಬರಲಿ; ತಾನು ಒಡ್ಡಿದ ಬಲೆಯಲ್ಲಿ ತಾನೇ ಸಿಕ್ಕಿಬೀಳಲಿ. ತಾನೇ ತೋಡಿದ ಕುಣಿಯಲ್ಲಿ ತಾನೇ ಬಿದ್ದುಹೋಗಲಿ.


ಸೈತಾನನ ಉರ್ಲಿಗೆ ಬಿದ್ದವರಾದ ಇವರು ಒಂದು ವೇಳೆ ತಪ್ಪಿಸಿಕೊಂಡು ದೇವರ ಚಿತ್ತವನ್ನು ಅನುಸರಿಸುವದಕ್ಕೆ ಸ್ವಸ್ಥಚಿತ್ತರಾದಾರು.


ಐಶ್ವರ್ಯವಂತರಾಗಬೇಕೆಂದು ಮನಸ್ಸು ಮಾಡುವವರು ದುಷ್ಪ್ರೇರಣೆಯೆಂಬ ಉರ್ಲಿನಲ್ಲಿ ಸಿಕ್ಕಿಕೊಂಡು ಬುದ್ಧಿವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರನಾಶನಗಳಲ್ಲಿ ಮುಳುಗಿಸುತ್ತವೆ.


ಇದಲ್ಲದೆ ಅವನು ಹೊರಗಣವರಿಂದ ಒಳ್ಳೆಯವನೆನಿಸಿಕೊಂಡಿರಬೇಕು; ಇಲ್ಲದಿದ್ದರೆ ನಿಂದೆಗೆ ಗುರಿಯಾಗುವನು ಮತ್ತು ಸೈತಾನನ ಉರ್ಲಿನೊಳಗೆ ಸಿಕ್ಕಿಬಿದ್ದಾನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಗುಂಪಾಗಿ ಕೂಡಿದ ಬಹುಜನಾಂಗಗಳವರ ಕೈಯಿಂದ ನಾನು ನನ್ನ ಬಲೆಯನ್ನು ನಿನ್ನ ಮೇಲೆ ಬೀಸುವೆನು; ಅವರು ನಿನ್ನನ್ನು ಆ ಬಲೆಯಿಂದ ಮೇಲಕ್ಕೆ ಎಳೆಯುವರು.


ಕೆಟ್ಟವನ ದುರ್ಮಾರ್ಗದಲ್ಲಿ ಉರುಲುಂಟು; ಒಳ್ಳೆಯವನು ಉಲ್ಲಾಸಗೊಂಡು ಹರ್ಷಧ್ವನಿಗೈಯುವನು.


ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರವಿುಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.


ಹಾಮಾನನನ್ನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿಗೆ ಹಾಕಿದರು. ಅರಸನ ಕೋಪವೂ ಶಾಂತವಾಯಿತು.


ಅಹಷ್ವೇರೋಷ್‍ರಾಜನು ಎಸ್ತೇರ್‍ರಾಣಿಯನ್ನು - ಇಂಥ ದುಷ್ಕೃತ್ಯದ ಮೇಲೆ ಮನಸ್ಸಿಟ್ಟವನು ಯಾವನು? ಅವನೆಲ್ಲಿ ಎಂದು ಕೇಳಲು


ತನ್ನ ಹೆಂಡತಿಯಾದ ಜೆರೆಷಳ ಮತ್ತು ಎಲ್ಲಾ ಆಪ್ತರ ಮುಂದೆ ತನಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದನು. ಆಗ ಅವನ ಪಂಡಿತರೂ ಹೆಂಡತಿಯೂ ಅವನಿಗೆ - ಯಾವನ ಮುಂದೆ ನಿನ್ನ ಪತನವು ಪ್ರಾರಂಭವಾಯಿತೋ ಆ ಮನುಷ್ಯನು ಯೆಹೂದಸಂತಾನದವನಾಗಿದ್ದರೆ ನೀನು ಗೆಲ್ಲಲಾರಿ, ಅವನ ಮುಂದೆ ಬಿದ್ದು ಹಾಳಾಗುವಿ ಅಂದರು.


ಅರಸನ ಚಿತ್ತ ಬಂದರೆ ಅವರನ್ನು ಸಂಹರಿಸಬೇಕು ಎಂಬ ರಾಯಸವು ಹೊರಡಲಿ; ಹಾಗೆ ಮಾಡಿದರೆ ನಾನು ರಾಜ ಭಂಡಾರಗಳಿಗೆ ಸೇರಿಸುವದಕ್ಕೋಸ್ಕರ ಹತ್ತು ಸಾವಿರ ತಲಾಂತು ಬೆಳ್ಳಿಯನ್ನು ತೂಕ ಮಾಡಿ ಉದ್ಯೋಗಸ್ಥರ ಕೈಗೆ ಒಪ್ಪಿಸುವೆನು ಎಂದು ಹೇಳಿದನು.


ಹಸಿದವನು ಅವರ ಬೆಳೆಯನ್ನು ಮುಳ್ಳು ಬೇಲಿಯೊಳಗಿಂದಲೇ ತಿಂದುಬಿಡುವನು. ಅವರ ಸೊತ್ತನ್ನು ನುಂಗಲು ಬೋನು ಬಾಯಿ ತೆರೆದಿದೆ.


ಕತ್ತರಿಬೋನು ಅವನ ಹಿಮ್ಮಡಿಯನ್ನು ಕಚ್ಚುವದು, ಉರುಲು ಅವನನ್ನು ಹಿಡಿಯುವದು,


ಹೀಗಾದರೆ ನನ್ನ ನ್ಯಾಯವನ್ನು ತಿರುಗಿಸಿಬಿಟ್ಟು ನನ್ನ ಸುತ್ತಲೂ ತನ್ನ ಬಲೆಯನ್ನೊಡ್ಡಿದವನು ದೇವರೇ ಎಂದು ತಿಳಿದುಕೊಳ್ಳಿರಿ.


ಭೂನಿವಾಸಿಯೇ, ಭಯವೂ ಗುಂಡಿಯೂ ಬಲೆಯೂ ನಿನಗೆ ಕಾದಿವೆ.


ಭಯದ ಸಪ್ಪಳದಿಂದ ಓಡಿಹೋಗುವವನು ಗುಂಡಿಯಲ್ಲಿ ಬೀಳುವನು, ಗುಂಡಿಯನ್ನು ಹತ್ತಿಬರುವವನು ಬಲೆಗೆ ಸಿಕ್ಕುವನು. ನೋಡು, ಆಕಾಶದ ದ್ವಾರಗಳು ತೆರೆದಿವೆ, ಭೂವಿುಯ ಅಸ್ತಿವಾರಗಳು ಕಂಪಿಸುತ್ತಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು