Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:3 - ಕನ್ನಡ ಸತ್ಯವೇದವು J.V. (BSI)

3 ಈವರೆಗೆ ಹತ್ತಾರು ಸಾರಿ ನನ್ನನ್ನು ಅವಮಾನಪಡಿಸಿ ನನಗೆ ಕೇಡುಮಾಡುತ್ತಿರುವದಕ್ಕೆ ನಿಮಗೆ ನಾಚಿಕೆಯಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಈವರೆಗೆ ಹತ್ತಾರು ಸಾರಿ ನನ್ನನ್ನು ಅವಮಾನಪಡಿಸಿ ನನಗೆ ಕೇಡುಮಾಡುತ್ತಿರುವುದಕ್ಕೆ ನಿಮಗೆ ನಾಚಿಕೆಯಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಈವರೆಗೆ ನನಗೆ ಕೇಡು ಮಾಡಿದ್ದಕ್ಕೆ ಹತ್ತಾರು ಸಾರಿ ನನ್ನನ್ನು ಅವಮಾನಿಸಿದ್ದಕ್ಕೆ ನಿಮಗಾಗುವುದಿಲ್ಲವೆ ನಾಚಿಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇದುವರೆಗೆ ನೀವು ನನ್ನನ್ನು ಹತ್ತಾರು ಸಲ ಅವಮಾನ ಮಾಡಿರುವಿರಿ. ನೀವು ನಾಚಿಕೆಯಿಲ್ಲದೆ ನನ್ನನ್ನು ಎದುರಿಸುತ್ತೀರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಈಗ ಹತ್ತು ಸಾರಿ ನನ್ನನ್ನು ನಿಂದಿಸಿದ್ದೀರಿ; ನಾಚಿಕೆಯಿಲ್ಲದೆ ನೀವು ನನ್ನ ಮೇಲೆ ಆಕ್ರಮಣ ಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:3
19 ತಿಳಿವುಗಳ ಹೋಲಿಕೆ  

ಅವನು ಚಪಲಚಿತ್ತನಾಗಿ ಹತ್ತುಸಾರಿ ನನ್ನ ಸಂಬಳವನ್ನು ಬದಲಾಯಿಸಿ ವಂಚಿಸಿದರೂ ನನಗೆ ಕೇಡುಮಾಡುವದಕ್ಕೆ ದೇವರು ಅವನಿಗೆ ಅವಕಾಶಕೊಡಲಿಲ್ಲ.


ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಸರ್ವವಿಷಯಗಳಲ್ಲಿ ಅವರನ್ನು ವಿಚಾರಮಾಡಲು ಅವನ ಪೂರ್ಣರಾಜ್ಯದಲ್ಲಿನ ಎಲ್ಲಾ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.


ನನ್ನ ಅಣ್ಣತಮ್ಮಂದಿರಿಗೆ ಹೆರನಂತಾದೆನು; ಒಡಹುಟ್ಟಿದವರಿಗೆ ಪರಕೀಯನಂತಿದ್ದೇನೆ.


ನನ್ನ ಉಸಿರು ನನ್ನ ಹೆಂಡತಿಗೆ ಅಸಹ್ಯವಾಗಿದೆ, ನನ್ನ ಹೊಟ್ಟೆಯಲ್ಲಿ ಹುಟ್ಟಿದ ಮಕ್ಕಳಿಗೂ ಹೇಸಿಕೆಯಾಗಿದ್ದೇನೆ.


ಅವರ ನೆರೆಯೂರುಗಳಲ್ಲಿ ವಾಸಿಸುತ್ತಿದ್ದ ಯೆಹೂದ್ಯರು ಬಂದು ಬಂದು ನಮಗೆ - ನೀವು ಯಾವ ಕಡೆಗೆ ತಿರುಗಿಕೊಂಡರೂ ಆ ಎಲ್ಲಾ ಕಡೆಗಳಿಂದ ನಮಗೆ ವಿರೋಧವಾಗಿ ಯುದ್ಧಕ್ಕೆ ಬರುತ್ತಾರೆ ಎಂದು ಪದೇ ಪದೇ ತಿಳಿಸಿದ್ದರಿಂದ


ಅಧರ್ಮವು ನಿನ್ನ ಕೈಯಲ್ಲಿದ್ದರೆ ಅದನ್ನು ದೂರಮಾಡಿಬಿಡು; ಅನ್ಯಾಯವು ನಿನ್ನ ಗುಡಾರಗಳಲ್ಲಿ ವಾಸಿಸದಿರಲಿ.


ನೀನು ಬಡಾಯಿಕೊಚ್ಚಿದರೆ ಮನುಷ್ಯರು ಸುಮ್ಮನಿರಬೇಕೋ? ನೀನು ಕುಚೋದ್ಯವಾಗಿ ಮಾತಾಡುವಾಗ ನಿನ್ನನ್ನು ಯಾರೂ ನಾಚಿಕೆಪಡಿಸಕೂಡದೋ?


ಈ ಮನುಷ್ಯರೆಲ್ಲರು ಐಗುಪ್ತದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿರುವ ಮಹತ್ಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ ಪದೇಪದೇ ನನ್ನನ್ನು ಪರೀಕ್ಷಿಸಿದದರಿಂದ


ನಾನು ನಿಮ್ಮ ಜೀವನಾಧಾರವನ್ನು ತೆಗೆದುಬಿಟ್ಟಾಗ ಹತ್ತು ಮಂದಿ ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿ ಸುಟ್ಟು ಅದನ್ನು ತೂಕದ ಪ್ರಕಾರ ಹಂಚಿಕೊಡುವರು; ನೀವು ಅದನ್ನು ಉಂಡಾಗ ತೃಪ್ತಿಹೊಂದುವದಿಲ್ಲ.


ಯೋಸೇಫನು ಅವರನ್ನು ಕಂಡಾಗ ಅವರ ಗುರುತು ಹಿಡಿದು ತನ್ನ ಅಣ್ಣಂದಿರೆಂದು ತಿಳಿದಾಗ್ಯೂ ಅವರಿಗೆ ಅನ್ಯನಂತೆ ತೋರ್ಪಡಿಸಿಕೊಂಡು ಬಿರುನುಡಿಯಿಂದ - ನೀವು ಎಲ್ಲಿಂದ ಬಂದವರು ಎಂದು ಕೇಳಿದನು. ಅವರು - ಧಾನ್ಯವನ್ನು ಕೊಂಡುಕೊಳ್ಳುವದಕ್ಕೋಸ್ಕರ ಕಾನಾನ್ ದೇಶದಿಂದ ಬಂದಿದ್ದೇವೆ ಅಂದರು.


ಎಷ್ಟರವರೆಗೆ ನನ್ನ ಆತ್ಮವನ್ನು ನೋಯಿಸಿ ಮಾತುಗಳಿಂದ ನನ್ನನ್ನು ಜಜ್ಜುತ್ತಿರುವಿರಿ?


ನಾನು ನಿಜವಾಗಿ ತಪ್ಪುಳ್ಳವನಾಗಿದ್ದರೆ ಆ ತಪ್ಪು ನನ್ನದೇ.


ಏಕೆಂದರೆ ನನಗೆ ಅಪಮಾನಕರವಾದ ನಿನ್ನ ಖಂಡನೆಯನ್ನು ಕೇಳಿದ್ದೇನೆ, ಆದಕಾರಣ ನನ್ನ ಆತ್ಮವು ನನ್ನ ಬುದ್ಧಿಯಿಂದಲೇ ಕಲಿತ ಉತ್ತರವನ್ನು ನನಗೆ ತಿಳಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು