Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 2:10 - ಕನ್ನಡ ಸತ್ಯವೇದವು J.V. (BSI)

10 ಆಗ ಯೋಬನು ಆಕೆಗೆ - ಮೂರ್ಖಳು ಮಾತಾಡಿದಂತೆ ನೀನು ಮಾತಾಡುತ್ತೀ; ದೇವರ ಹಸ್ತದಿಂದ ನಾವು ಒಳ್ಳೇದನ್ನು ಹೊಂದುತ್ತೇವಷ್ಟೆ; ಕೆಟ್ಟದ್ದನ್ನು ಹೊಂದಬಾರದೋ ಎಂದು ಹೇಳಿದನು. ಈ ಸಂದರ್ಭದಲ್ಲಿಯೂ ಪಾಪದ ಮಾತೊಂದೂ ಅವನ ತುಟಿಗಳಿಂದ ಹೊರಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಯೋಬನು ಆಕೆಗೆ, “ಮೂರ್ಖಳು ಮಾತನಾಡಿದಂತೆ ನೀನು ಮಾತನಾಡುತ್ತಿ. ದೇವರ ಹಸ್ತದಿಂದ ನಾವು ಒಳ್ಳೆಯದನ್ನು ಹೊಂದುವಾಗ ಕೆಟ್ಟದ್ದನ್ನು ಹೊಂದಬಾರದೋ?” ಎಂದು ಹೇಳಿದನು. ಈ ಸಂದರ್ಭದಲ್ಲಿಯೂ ಪಾಪದ ಮಾತು ಅವನ ತುಟಿಗಳಿಂದ ಹೊರಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ. ದೇವರಿಂದ ನಾವು ಸುಖಪಡೆಯಬಹುದು, ದುಃಖವನ್ನು ಮಾತ್ರ ಪಡೆಯಬಾರದೊ?” ಎಂದು ಉತ್ತರಕೊಟ್ಟ. ಇಂಥ ಪರಿಸ್ಥಿತಿಯಲ್ಲೂ ಪಾಪದ ಮಾತೊಂದೂ ಅವನ ಬಾಯಿಂದ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೋಬನು ತನ್ನ ಹೆಂಡತಿಗೆ, “ನೀನು ಮೂರ್ಖಳಂತೆ ಮಾತಾಡುತ್ತಿರುವೆ! ದೇವರು ಒಳ್ಳೆಯವುಗಳನ್ನು ಕೊಡುವಾಗ ನಾವು ಅವುಗಳನ್ನು ಸ್ವೀಕರಿಸಿಕೊಳ್ಳುತ್ತೇವೆ. ಆತನು ಕೆಟ್ಟದ್ದನ್ನು ಕೊಡುವಾಗ ನಾವು ಸ್ವೀಕರಿಸಿಕೊಳ್ಳಬಾರದೋ?” ಎಂದು ಉತ್ತರಕೊಟ್ಟನು. ಈ ಸಂಕಟದಲ್ಲಿಯೂ ಯೋಬನು ಪಾಪ ಮಾಡಲಿಲ್ಲ ಹಾಗೂ ದೇವರ ವಿರುದ್ಧ ಯಾವ ಮಾತನ್ನು ಆಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ? ನಾವು ದೇವರಿಂದ ಒಳ್ಳೆಯದನ್ನು ಹೊಂದಿದ್ದೇವೆ, ಕಷ್ಟವನ್ನು ಹೊಂದಬಾರದೋ?” ಎಂದನು. ಇವೆಲ್ಲವುಗಳಲ್ಲಿಯೂ ಪಾಪದ ಮಾತೊಂದೂ ಯೋಬನ ಬಾಯಿಂದ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 2:10
30 ತಿಳಿವುಗಳ ಹೋಲಿಕೆ  

ಕಷ್ಟವನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಜೀವವೆಂಬ ಜಯಮಾಲೆಯನ್ನು ಹೊಂದುವನು; ಸ್ವಾವಿುಯು ತನ್ನನ್ನು ಪ್ರೀತಿಸುವವರಿಗೆ ಇದನ್ನು ವಾಗ್ದಾನಮಾಡಿದ್ದಾನೆ.


ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರ್ರಿ. ಉಪದ್ರವದಲ್ಲಿ ಸೈರಣೆಯುಳ್ಳವರಾಗಿರ್ರಿ. ಬೇಸರಗೊಳ್ಳದೆ ಪ್ರಾರ್ಥನೆಮಾಡಿರಿ.


ಆತನು ತಿರುಗಿಕೊಂಡು ಪೇತ್ರನಿಗೆ - ಸೈತಾನನೇ, ನನ್ನ ಮುಂದೆ ನಿಲ್ಲಬೇಡ, ನಡೆ, ನನಗೆ ನೀನು ವಿಘ್ನವಾಗಿದ್ದೀ; ನಿನ್ನ ಯೋಚನೆ ಮನುಷ್ಯರ ಯೋಚನೆಯೇ ಹೊರತು ದೇವರದಲ್ಲ ಎಂದು ಹೇಳಿದನು.


ಆಗ ಯೇಸು ಪೇತ್ರನಿಗೆ - ಕತ್ತಿಯನ್ನು ಒರೆಯಲ್ಲಿ ಹಾಕು; ತಂದೆ ನನಗೆ ಕೊಟ್ಟಿರುವ ಪಾತ್ರೆಯಲ್ಲಿ ನಾನು ಕುಡಿಯಬಾರದೋ ಎಂದು ಹೇಳಿದನು.


ಖಾನೇಷುಮಾರಿ ಮಾಡಿಸಿದನಂತರ ದಾವೀದನನ್ನು ಮನಸ್ಸಾಕ್ಷಿಯು ಹಂಗಿಸತೊಡಗಿತು. ಆದದರಿಂದ ಅವನು ಯೆಹೋವನನ್ನು - ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು; ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷವಿುಸು ಎಂದು ಪ್ರಾರ್ಥಿಸಿದನು.


ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು; ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕುಕ್ಕೆಹಾಕಿಕೊಂಡಿರುವೆನು ಅಂದುಕೊಂಡೆನು.


ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಶಿಕ್ಷಿತನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.


ಇಂಥ ಹುಚ್ಚುತನವನ್ನು ಮಾಡಬೇಡ. ಈ ಅಪಮಾನವನ್ನು ಮರೆಮಾಡುವದು ಹೇಗೆ? ನಿನಗಂತೂ ಇಸ್ರಾಯೇಲ್ಯರಲ್ಲಿ ನೀಚನೆಂಬ ಹೆಸರು ತಪ್ಪದು. ಆದದರಿಂದ ದಯವಿಟ್ಟು ಅರಸನ ಸಂಗಡ ಮಾತಾಡು. ಅವನು ನನ್ನನ್ನು ನಿನಗೆ ಕೊಡದಿರಲಾರನು ಎಂದಳು.


ಮತ್ತು ಪುರುಷನಿಗೆ - ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನೀನು ಹೆಂಡತಿಯ ಮಾತು ಕೇಳಿ ತಿಂದಕಾರಣ ನಿನ್ನ ನಿವಿುತ್ತ ಭೂವಿುಗೆ ಶಾಪ ಬಂತು. ನಿನ್ನ ಜೀವಮಾನವೆಲ್ಲಾ ದುಡಿದು ದುಡಿದು ಭೂವಿುಯ ಹುಟ್ಟುವಳಿಯನ್ನು ತಿನ್ನಬೇಕು.


ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಟಿಯನ್ನು ಪ್ರಸರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿದ್ದೀ; ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುವವು ಎಂದು ಹೇಳಿದನು.


ಅವರಲ್ಲಿ ಐದು ಮಂದಿ ಬುದ್ಧಿಯಿಲ್ಲದವರು, ಐದು ಮಂದಿ ಬುದ್ಧಿವಂತೆಯರು.


ಅವರ ಬಾಯಿಂದ ಬರುವದೆಲ್ಲಾ ಪಾಪವೇ. ಅವರ ಅಹಂಕಾರದಿಂದಲೇ ಅವರು ಸಿಕ್ಕಿ ಬೀಳಲಿ.


ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವದಕ್ಕೆ ನಾನೇನು ಯೋಗ್ಯನೋ ಎಂದು ಉತ್ತರಕೊಟ್ಟನು.


ಅದಕ್ಕೆ ದಾವೀದನು - ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ನೀವು ಈಹೊತ್ತು ನನ್ನನ್ನು ಅಕೃತ್ಯಕ್ಕೆ ಪ್ರೇರಿಸುವವರಾಗಿದ್ದೀರಿ. ಇಂಥ ದಿವಸದಲ್ಲಿ ಇಸ್ರಾಯೇಲ್ಯರಲ್ಲಿ ಒಬ್ಬನಿಗೆ ಮರಣದಂಡನೆಯಾಗುವದು ಸರಿಯೋ? ನಾನು ಇಸ್ರಾಯೇಲ್ಯರ ಅರಸನೆಂಬದು ಈಹೊತ್ತು ಸ್ಪಷ್ಟವಾಗಿ ಗೊತ್ತಾಯಿತು ಎಂದು ನುಡಿದನು.


ಅಜ್ಞಾನವೆಂಬವಳಾದರೋ ಕೂಗಾಟದವಳು, ಮೂಢಳು, ಏನೂ ತಿಳಿಯದವಳು.


ಮೂಢರೇ, [ಮೂಢತ್ವವನ್ನು] ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ ಎಂದು ಪ್ರಬೋಧಿಸುತ್ತಾಳೆ.


ನೀನು ಅವನಿಗೂ ಅವನ ಮನೆಗೂ ಅವನ ಎಲ್ಲಾ ಸ್ವಾಸ್ತ್ಯಕ್ಕೂ ಸುತ್ತುಮುತ್ತಲು ಬೇಲಿಯನ್ನು ಹಾಕಿದ್ದೀಯಲ್ಲಾ. ಅವನು ಕೈಹಾಕಿದ ಕೆಲಸವನ್ನು ನೀನು ಸಫಲಪಡಿಸುತ್ತಿರುವದರಿಂದ ಅವನ ಸಂಪತ್ತು ದೇಶದಲ್ಲಿ ವೃದ್ಧಿಯಾಗುತ್ತಾ ಬಂದಿದೆ.


ಸಮುವೇಲನು ಒಂದನ್ನೂ ಮುಚ್ಚದೆ ಎಲ್ಲವನ್ನೂ ತಿಳಿಸಿದನು; ಏಲಿಯು ಅದನ್ನು ಕೇಳಿ - ಆತನು ಯೆಹೋವನು; ತನಗೆ ಸರಿಕಾಣುವದನ್ನು ಮಾಡಲಿ ಅಂದನು.


ಹೀಗಿರುವಲ್ಲಿ ಅವನ ಹೆಂಡತಿ ಅವನಿಗೆ - ನಿನ್ನ ಯಥಾರ್ಥತ್ವವನ್ನು ಇನ್ನೂ ಬಿಡಲಿಲ್ಲವೋ? ದೇವರನ್ನು ದೂಷಿಸಿ ಸಾಯಿ ಎಂದು ಹೇಳಿದಳು.


ನೀನೇ ಇದನ್ನು ಬರಮಾಡಿದ್ದರಿಂದ ನಾನು ಏನೂ ಹೇಳದೆ ಮೌನವಾಗಿರುವೆನು.


ಸುಖದ ದಿನದಲ್ಲಿ ಸುಖದಿಂದಿರು; ದುಃಖದ ದಿನದಲ್ಲಿ ಯೋಚಿಸು; ಮನುಷ್ಯನು ತನ್ನ ಕಾಲವಾದ ಮೇಲೆ ಸಂಭವಿಸುವ ಯಾವದನ್ನೂ ಗ್ರಹಿಸಲಾರದಂತೆ ದೇವರು ಇವುಗಳನ್ನು ದ್ವಂದ್ವ ಮಾಡಿದ್ದಾನೆ.


ನಿನ್ನ ದಂಡನೆಯನ್ನು ಪರಿಹರಿಸು; ನಿನ್ನ ಕೈಹೊಡೆತದಿಂದ ಸಾಯುವ ಹಾಗಿದ್ದೇನಲ್ಲಾ.


ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು