Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 2:11 - ಕನ್ನಡ ಸತ್ಯವೇದವು J.V. (BSI)

11 ತೇಮಾನ್ಯನಾದ ಎಲೀಫಜನು ಶೂಹ್ಯನಾದ ಬಿಲ್ದದನು ನಾಮಾಥ್ಯನಾದ ಚೋಫರನು ಎಂಬ ಯೋಬನ ಮೂವರು ಸ್ನೇಹಿತರು ಅವನಿಗೆ ಸಂಭವಿಸಿದ ಆಪತ್ತಿನ ಸುದ್ದಿಯನ್ನು ಕೇಳಿದೊಡನೆ - ನಾವೆಲ್ಲರೂ ಕೂಡಿ ನಮ್ಮ ಸಂತಾಪವನ್ನು ತೋರ್ಪಡಿಸಿ ಅವನನ್ನು ಸಂತಯಿಸೋಣ ಬನ್ನಿರಿ ಎಂದು ಗೊತ್ತುಮಾಡಿಕೊಂಡು ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು ಎಂಬ ಯೋಬನ ಮೂವರು ಸ್ನೇಹಿತರು ಅವನಿಗೆ ಸಂಭವಿಸಿದ ಆಪತ್ತಿನ ಸುದ್ದಿಯನ್ನು ಕೇಳಿದೊಡನೆ, “ನಾವೆಲ್ಲರೂ ಕೂಡಿ ನಮ್ಮ ಸಂತಾಪವನ್ನು ತೋರ್ಪಡಿಸಿ, ಅವನನ್ನು ಸಂತೈಸೋಣ ಬನ್ನಿರಿ” ಎಂದು ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಯೋಬನಿಗೆ ಒದಗಿದ್ದ ಆಪತ್ತಿನ ಸುದ್ದಿ ಆತನ ಮೂವರು ಮಿತ್ರರಿಗೆ ಮುಟ್ಟಿತು. ಅವರು ತಮ್ಮ ತಮ್ಮ ಊರುಗಳಿಂದ, ಅಂದರೆ, ತೇಮಾನ್ಯದಿಂದ ಎಲೀಫಜನೂ, ಶೂಹ್ಯದಿಂದ ಬಿಲ್ದದನು, ನಾಮಾಥ್ಯದಿಂದ ಚೋಫರನೂ ಹೊರಟುಬಂದರು. ಯೋಬನಿಗೆ ತಮ್ಮ ಸಂತಾಪವನ್ನು ವ್ಯಕ್ತಪಡಿಸಿ ಅವನನ್ನು ಸಾಂತ್ವನಗೊಳಿಸಬೇಕೆಂಬ ಒಂದೇ ಉದ್ದೇಶದಿಂದ ಅವರು ಆತನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೋಬನ ಮೂವರು ಗೆಳೆಯರು ಯಾರೆಂದರೆ: ತೇಮಾನಿನ ಎಲೀಫಜನು, ಶೂಹದ ಬಿಲ್ದದನು ಮತ್ತು ನಾಮಾಥದ ಚೋಫರನು. ಯೋಬನಿಗೆ ಸಂಭವಿಸಿದ ಆಪತ್ತುಗಳ ಬಗ್ಗೆ ಈ ಮೂವರು ಗೆಳೆಯರು ಕೇಳಿದಾಗ ತಮ್ಮ ಮನೆಯಿಂದ ಹೊರಟು ಒಟ್ಟಾಗಿ ಭೇಟಿಯಾದರು. ಯೋಬನ ಬಳಿಗೆ ಹೋಗಿ ಅನುತಾಪ ಸೂಚಿಸಿ ಸಂತೈಸಲು ಒಪ್ಪಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೋಬನ ಮೂವರು ಸ್ನೇಹಿತರು, ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು ಅವನಿಗೆ ಬಂದ ಈ ಎಲ್ಲಾ ಕಷ್ಟನಷ್ಟವನ್ನು ಕುರಿತು ಕೇಳಿ, ಯೋಬನಿಗೆ ಸಂತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸುವುದಕ್ಕೆ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡು, ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 2:11
34 ತಿಳಿವುಗಳ ಹೋಲಿಕೆ  

ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.


ಆಗ ಅವನ ಎಲ್ಲಾ ಅಣ್ಣತಮ್ಮಂದಿರೂ ಎಲ್ಲಾ ಅಕ್ಕತಂಗಿಯರೂ ಮೊದಲು ಅವನ ಮನೆಯಲ್ಲಿ ಅವನೊಂದಿಗೆ ಭೋಜನಮಾಡುತ್ತಿದ್ದ ಎಲ್ಲಾ ಪರಿಚಿತರೂ ಅವನ ಬಳಿಗೆ ಬಂದು ಯೆಹೋವನು ಅವನ ಮೇಲೆ ಬರಮಾಡಿದ್ದ ಆಪತ್ತಿನ ವಿಷಯವಾಗಿ ತಮ್ಮ ತಮ್ಮ ಅನುತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸಿದರು. ಇದಲ್ಲದೆ ಪ್ರತಿಯೊಬ್ಬರೂ ಒಂದೊಂದು ವರಹವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ತೇಮಾನ್ ಸೀಮೆಗಿದ್ದ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?


ವಿುತ್ರನ ಪ್ರೀತಿಯು ನಿರಂತರ; ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ.


ಒಬ್ಬನು ಮನಗುಂದಿ ಸರ್ವಶಕ್ತನ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ ಅವನ ವಿುತ್ರನು ಅವನಿಗೆ ದಯೆ ತೋರಿಸತಕ್ಕದ್ದು.


ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ; ಒಂದು ಅಂಗಕ್ಕೆ ಮರ್ಯಾದೆ ಬಂದರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.


ಆಕೆ ಅವನಿಗೆ ಜಿಮ್ರಾನ್, ಯೊಕ್ಷಾನ್, ಮೆದಾನ್, ವಿುದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.


ಆದದರಿಂದ ಯೆಹೂದ್ಯರಲ್ಲಿ ಅನೇಕರು ಮಾರ್ಥಳ ಮತ್ತು ಮರಿಯಳ ಬಳಿಗೆ ಅವರನ್ನು ತಮ್ಮನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು.


ನನ್ನ ವಿುತ್ರರೇ, ಕರುಣಿಸಿರಿ, ನೀವಾದರೂ ಕರುಣಿಸಿರಿ! ದೇವರ ಕೈ ನನ್ನನ್ನು ಹೊಡೆಯಿತಲ್ಲಾ.


ಇಂಥಾ ಮಾತುಗಳನ್ನು ಬಹಳವಾಗಿ ಕೇಳಿದ್ದೇನೆ, ನೀವೆಲ್ಲರೂ ಬೇಸರಿಕೆಯನ್ನು ಹುಟ್ಟಿಸುವ ಆದರಣೆಯವರಾಗಿದ್ದೀರಿ.


ತೇಮದ ಗುಂಪಿನವರು ಕಣ್ಣೆತ್ತಿ ನೋಡಿದರು, ಶೆಬದ ಸಮೂಹದವರು ಆ ತೊರೆಗಳನ್ನು ಹಾರೈಸಿದರು.


ಅಬ್ರಹಾಮನ ಉಪಪತ್ನಿಯಾದ ಕೆಟೂರಳ ಸಂತಾನದವರು - ಜಿಮ್ರಾನ್, ಯೊಕ್ಷಾನ್, ಮೆದಾನ್, ವಿುದ್ಯಾನ್, ಇಷ್ಬಾಕ್, ಶೂಹ ಎಂಬವರು. ಯೊಕ್ಷಾನನು, ಶೆಬ, ದೆದಾನ್ ಎಂಬವರನ್ನು ಪಡೆದನು.


ಅವನ ಗಂಡುಮಕ್ಕಳೂ ಹೆಣ್ಣು ಮಕ್ಕಳೂ ಎಲ್ಲರೂ ದುಃಖಶಮನ ಮಾಡುವದಕ್ಕೆ ಪ್ರಯತ್ನಿಸಿದಾಗ್ಯೂ ಅವನು ಶಾಂತಿಯನ್ನು ಹೊಂದಲೊಲ್ಲದೆ - ನಾನು ಹೀಗೇ ಹಂಬಲಿಸುತ್ತಾ ನನ್ನ ಮಗನಿರುವ ಪಾತಾಳವನ್ನು ಸೇರುವೆನು ಅಂದನು. ಹೀಗೆ ತಂದೆಯು ಮಗನಿಗೋಸ್ಕರ ಅಳುತ್ತಿದ್ದನು.


ಏಸಾವನ ವಂಶಸ್ಥರ ಕುಲಪತಿಗಳು. ಏಸಾವನ ಚೊಚ್ಚಲಮಗನಾದ ಎಲೀಫಜನಿಂದ ಹುಟ್ಟಿದವರು ಯಾರಂದರೆ - ತೇಮಾನ ಕುಲಪತಿ, ಓಮಾರಕುಲಪತಿ, ಚೆಫೋಕುಲಪತಿ, ಕೆನಜ್‍ಕುಲಪತಿ,


ಎಲೀಫಜನ ಮಕ್ಕಳು ಯಾರಂದರೆ - ತೇಮಾನ್, ಓಮಾರ್, ಚೆಫೋ, ಗತಾಮ್, ಕೆನಜ್,


ಸೆರೆಯವರ ಸಂಗಡ ನೀವೂ ಜೊತೆ ಸೆರೆಯವರೆಂದು ಭಾವಿಸಿಕೊಂಡು ಅವರನ್ನು ಜ್ಞಾಪಕಮಾಡಿಕೊಳ್ಳಿರಿ. ನಿಮಗೂ ಅನ್ಯಾಯ ಸಂಭವಿಸೀತೆಂದು ತಿಳಿದು ಅನ್ಯಾಯ ಅನುಭವಿಸುವವರನ್ನು ನೆನಸಿರಿ. ದಾಂಪತ್ಯವು ಮಾನ್ಯವಾದದ್ದೆಂದು ಎಲ್ಲರೂ ಎಣಿಸಬೇಕು;


ಸಹತಾಪದಿಂದ ನಿನಗಾಗಿ ಬಡುಕೊಳ್ಳುವವರು ಯಾರಿದ್ದಾರೆ? ನಿನಗೆ ಈ ಎರಡು ಬಾಧೆಗಳು ಬಂದಿವೆ, [ನಿನ್ನ ದೇಶವು] ಹಾಳುಪಾಳಾಗಿದೆ, [ನಿನ್ನ ಪ್ರಜೆಗೆ] ಕ್ಷಾಮವೂ ಖಡ್ಗವೂ ಪ್ರಾಪ್ತವಾಗಿವೆ; ನಾನು ನಿನ್ನನ್ನು ಹೇಗೆ ಸಂತೈಸಲಿ?


ನಿನಗೂ ನಿನ್ನ ತಂದೆಗೂ ವಿುತ್ರನಾದವನನ್ನು ಬಿಡಬೇಡ; ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಆಶ್ರಯಿಸದಿರು; ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು.


ಬಹುಮಂದಿ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ; ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ವಿುತ್ರನುಂಟು.


ಯೆಹೋವನು ಈ ಮಾತುಗಳನ್ನು ಯೋಬನಿಗೆ ಹೇಳಿದ ಮೇಲೆ ತೇಮಾನ್ಯನಾದ ಎಲೀಫಜನನ್ನು ಕುರಿತು - ನಿನ್ನ ಮೇಲೆಯೂ ನಿನ್ನ ಇಬ್ಬರು ಸ್ನೇಹಿತರ ಮೇಲೆಯೂ ಕೋಪಗೊಂಡಿದ್ದೇನೆ; ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಯಥಾರ್ಥವನ್ನಾಡಿದಂತೆ ನೀವು ಆಡಲಿಲ್ಲ.


ನನ್ನ ಆಪ್ತವಿುತ್ರರೆಲ್ಲರೂ ನನ್ನನ್ನು ನೋಡಿ ಹೇಸಿಕೊಳ್ಳುತ್ತಾರೆ; ನನ್ನ ಪ್ರೀತಿಪಾತ್ರರು ಸಹ ನನ್ನ ಮೇಲೆ ತಿರುಗಿಬಿದ್ದಿದ್ದಾರೆ.


ಆಗ ಶೂಹ್ಯನಾದ ಬಿಲ್ದದನು ಪ್ರತ್ಯುತ್ತರವಾಗಿ ಹೀಗಂದನು -


ಗೆಳೆಯರೋ ನನ್ನನ್ನು ಹೀನೈಸುವವರಾಗಿದ್ದಾರೆ;


ಆಗ ತೇಮಾನ್ಯನಾದ ಎಲೀಫಜನು ಮತ್ತೆ ಹೀಗಂದನು -


ನೀವಾದರೋ ಸುಳ್ಳನ್ನು ಮೆತ್ತುವವರಾಗಿದ್ದೀರಿ, ನೀವೆಲ್ಲರೂ ವ್ಯರ್ಥವೈದ್ಯರೇ.


ಆಗ ಶೂಹ್ಯನಾದ ಬಿಲ್ದದನು ಹೀಗೆಂದನು -


ಯೋಬಾಬನು ಸತ್ತ ಮೇಲೆ ತೇಮಾನೀಯರ ದೇಶದವನಾದ ಹೂಷಾಮನು ಅವನಿಗೆ ಬದಲಾಗಿ ಆಳಿದನು.


ಆದದರಿಂದ ಇವರ ತಂದೆಯಾದ ಎಫ್ರಾಯೀಮನು ಬಹು ದಿನಗಳವರೆಗೂ ದುಃಖಪಡುತ್ತಿದ್ದನು. ಅವನ ಸಹೋದರರು ಅವನನ್ನು ಸಂತೈಸುವದಕ್ಕೋಸ್ಕರ ಬಂದರು.


ಆಗ ತೇಮಾನ್ಯನಾದ ಎಲೀಫಜನೂ ಶೂಹ್ಯನಾದ ಬಿಲ್ದದನೂ ನಾಮಾಥ್ಯನಾದ ಚೋಫರನೂ ಹೋಗಿ ಯೆಹೋವನು ತಮಗೆ ಆಜ್ಞಾಪಿಸಿದ ಪ್ರಕಾರ ಮಾಡಲು ಯೆಹೋವನು ಯೋಬನ ವಿಜ್ಞಾಪನೆಯನ್ನು ಲಾಲಿಸಿದನು.


ತೇಮಾನೇ, ನಿನ್ನ ಶೂರರು ಧೈರ್ಯಗೆಟ್ಟು ಎಲ್ಲರೂ ಹತರಾಗಿ ಏಸಾವಿನ ಪರ್ವತದೊಳಗಿಂದ ನಿರ್ಮೂಲರಾಗುವರು.


ಯೋಬಾಬನು ಸತ್ತ ಮೇಲೆ ತೇಮಾನೀಯರ ದೇಶದವನಾದ ಹುಷಾಮನು ಅವನಿಗೆ ಬದಲಾಗಿ ಆಳಿದನು.


ಗೆದೇರೋತ್, ಬೇತ್‍ದಾಗೋನ್, ನಾಮಾ, ಮಕ್ಕೇದಾ ಎಂಬ ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳೂ;


ಇದಕ್ಕೆ ತೇಮಾನ್ಯನಾದ ಎಲೀಫಜನು ಹೀಗೆ ಉತ್ತರಕೊಟ್ಟನು -


ಆಗ ನಾಮಾಥ್ಯನಾದ ಚೋಫರನು ಹೀಗೆಂದನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು