Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 2:5 - ಕನ್ನಡ ಸತ್ಯವೇದವು J.V. (BSI)

5 ಆದರೆ ನಿನ್ನ ಕೈಚಾಚಿ ಅವನ ಅಸ್ತಿಮಾಂಸಗಳನ್ನು ಹೊಡೆ; ಅವನು ನಿನ್ನ ಮುಖದೆದುರಿಗೆ ನಿನ್ನನ್ನು ದೂಷಿಸಲೇ ದೂಷಿಸುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದರೆ ನಿನ್ನ ಕೈಚಾಚಿ ಅವನ ಅಸ್ತಿಮಾಂಸಗಳನ್ನು ಹೊಡೆ. ಆಗ ಅವನು ನಿನ್ನ ಮುಖದೆದುರಿಗೆ ನಿನ್ನನ್ನು ದೂಷಿಸದೆ ಬಿಡುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀವೀಗ ಕೈಚಾಚಿ ಯೋಬನ ಮೂಳೆಮಾಂಸಗಳನ್ನು ಮುಟ್ಟಿನೋಡಿ; ಅವನು ನಿಮ್ಮ ಮುಖದೆದುರಿಗೇ ನಿಮ್ಮನ್ನು ದೂಷಿಸುತ್ತಾನೋ ಇಲ್ಲವೋ ನೀವೇ ನೋಡುವಿರಂತೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ನೀನು ಕೈಚಾಚಿ ಅವನ ಮಾಂಸವನ್ನೂ ಮೂಳೆಗಳನ್ನೂ ಹೊಡೆ. ಅವನು ನಿನ್ನ ಮುಖದೆದುರಿಗೆ ನಿನ್ನನ್ನು ಖಂಡಿತವಾಗಿ ದೂಷಿಸುವನು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ಈಗ ನಿಮ್ಮ ಕೈಚಾಚಿ, ಅವನ ಎಲುಬನ್ನೂ ಅವನ ಮಾಂಸವನ್ನೂ ಹೊಡೆದರೆ, ಅವನು ನಿಮ್ಮ ಮುಖದೆದುರಿಗೇ ನಿಮ್ಮನ್ನು ಶಪಿಸುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 2:5
16 ತಿಳಿವುಗಳ ಹೋಲಿಕೆ  

ಆದರೆ ನಿನ್ನ ಕೈನೀಡಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡು. ಆಗ ಅವನು ನಿನ್ನ ಎದುರಿಗೆ ನಿನ್ನನ್ನು ದೂಷಿಸಲೇ ದೂಷಿಸುವನು ಅಂದನು.


ಔತಣ ಸರದಿ ತೀರಿದನಂತರ ಯೋಬನು ತನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು ಎಂದು ಅವರನ್ನು ಕರಿಸಿ ಶುದ್ಧಿಪಡಿಸಿ ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುತ್ತಿದ್ದನು.


ಮತ್ತು ನೀನು ಇಸ್ರಾಯೇಲ್ಯರಿಗೆ ಹೀಗೆ ಹೇಳಬೇಕು - ತನ್ನ ದೇವರನ್ನು ದೂಷಿಸಿದವನು ಆ ದೋಷದ ಫಲವನ್ನು ಅನುಭವಿಸಬೇಕು.


ಅವರು ಘೋರಕಷ್ಟಕ್ಕೊಳಗಾಗಿ ಹಸಿದುಕೊಂಡು ದೇಶದಲ್ಲಿ ಅಲೆಯುವರು; ಹಸಿದಾಗ ರೇಗಿಕೊಂಡು ತಮ್ಮ ರಾಜನನ್ನೂ ತಮ್ಮ ದೇವರನ್ನೂ ಶಪಿಸುವರು;


ನಿನ್ನ ದಂಡನೆಯನ್ನು ಪರಿಹರಿಸು; ನಿನ್ನ ಕೈಹೊಡೆತದಿಂದ ಸಾಯುವ ಹಾಗಿದ್ದೇನಲ್ಲಾ.


ಹೀಗಿರುವಲ್ಲಿ ಅವನ ಹೆಂಡತಿ ಅವನಿಗೆ - ನಿನ್ನ ಯಥಾರ್ಥತ್ವವನ್ನು ಇನ್ನೂ ಬಿಡಲಿಲ್ಲವೋ? ದೇವರನ್ನು ದೂಷಿಸಿ ಸಾಯಿ ಎಂದು ಹೇಳಿದಳು.


ಮತ್ತು ದಾವೀದನು ದೇವರಿಗೆ - ಜನರನ್ನು ಲೆಕ್ಕಿಸಬೇಕೆಂದು ಆಜ್ಞಾಪಿಸಿದವನು ನಾನಲ್ಲವೋ! ಮಹಾಪಾಪಮಾಡಿದವನು ನಾನೇ; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ಯೆಹೋವನೇ, ನನ್ನ ದೇವರೇ, ನಿನ್ನ ಹಸ್ತವು ನಿನ್ನ ಜನರನ್ನು ಬಾಧಿಸುವದಕ್ಕೆ ಅವರಿಗೆ ವಿರೋಧವಾಗಿರದೆ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ ಎಂದು ಬೇಡಿಕೊಂಡನು.


ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು. ಆಗ ಪರಲೋಕದಲ್ಲಿ ಮಹಾ ಶಬ್ದವನ್ನು ಕೇಳಿದೆನು, ಅದು - ಈಗ ಜಯವೂ ಶಕ್ತಿಯೂ ರಾಜ್ಯವೂ ನಮ್ಮ ದೇವರಿಗೆ ಉಂಟಾಯಿತು; ಆತನು ಅಭಿಷೇಕಿಸಿದವನ ಅಧಿಕಾರವು ಈಗ ಸ್ಥಾಪಿತವಾಯಿತು; ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ.


[ಯೆಹೋವನ] ಹೆಸರನ್ನು ದೂಷಿಸಿದದರಿಂದ ಅವನನ್ನು ಮೋಶೆಯ ಬಳಿಗೆ ಹಿಡಿದು ತಂದರು. ಅವನ ತಾಯಿಯು ದಾನ್‍ಕುಲದ ದಿಬ್ರೀಯ ಮಗಳಾದ ಶೆಲೋಮೀತ್ ಎಂಬವಳು.


ಯೆಹೋವನ ಆ ಮಾತಿಗೆ ಸೈತಾನನು - ಚರ್ಮಕ್ಕೆ ಚರ್ಮ ಎಂಬಂತೆ ಒಬ್ಬ ಮನುಷ್ಯನು ಪ್ರಾಣವನ್ನು ಉಳಿಸಿಕೊಳ್ಳುವದಕ್ಕೋಸ್ಕರ ತನ್ನ ಸರ್ವಸ್ವವನ್ನೂ ಕೊಡುವನು.


ಯೆಹೋವನು ಸೈತಾನನಿಗೆ - ಅವನು ನಿನ್ನ ಕೈಯಲ್ಲಿದ್ದಾನೆ, ನೋಡು; ಅವನ ಪ್ರಾಣವನ್ನಾದರೋ ಉಳಿಸಲೇಬೇಕು ಎಂದು ಅಪ್ಪಣೆಕೊಟ್ಟನು.


ಈ ಜನರು ವನಗಳಲ್ಲಿ ಯಜ್ಞಮಾಡುತ್ತಾ ಇಟ್ಟಿಗೆಯ ವೇದಿಯ ಮೇಲೆ ಧೂಪಹಾಕುತ್ತಾ ಗೋರಿಗಳಲ್ಲಿ ಕೂತುಕೊಳ್ಳುತ್ತಾ


ಯೆಹೋವನು ಸೈತಾನನಿಗೆ - ಅವನ ಸ್ವಾಸ್ತ್ಯವೆಲ್ಲಾ ನಿನ್ನ ಕೈಯಲ್ಲಿದೆ, ನೋಡು. ಆದರೆ ಅವನ ಮೈ ಮೇಲೆ ಮಾತ್ರ ಕೈಹಾಕಬೇಡ ಎಂದು ಅಪ್ಪಣೆ ಕೊಟ್ಟನು. ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟುಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು