Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:21 - ಕನ್ನಡ ಸತ್ಯವೇದವು J.V. (BSI)

21 ಅವನ ಆಯುಸ್ಸೇ ಕತ್ತರಿಸಿಹೋದ ಮೇಲೆ ತನ್ನನ್ನು ಹಿಂಬಾಲಿಸುವ ಸಂತತಿಯವರ ಚಿಂತೆ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವನಿಗೆ ನೇಮಕವಾದ ದಿನಗಳು ಮುಗಿದುಹೋದ ಮೇಲೆ ತನ್ನನ್ನು ಹಿಂಬಾಲಿಸುವ ಸಂತತಿಯವರ ಚಿಂತೆ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವನ ಆಯುಸ್ಸೇ ಕತ್ತರಿಸಿಹೋದ ಮೇಲೆ ಅವನಿಗೆಲ್ಲಿಯದು ತನ್ನಾನಂತರ ಬರುವ ಸಂತತಿಯ ಚಿಂತೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದುಷ್ಟನ ಜೀವಿತವು ಮುಗಿದುಹೋದ ಮೇಲೆ, ತಾನು ಬಿಟ್ಟುಹೋಗಿರುವ ತನ್ನ ಕುಟುಂಬದ ಬಗ್ಗೆ ಅವನು ಚಿಂತಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ದುಷ್ಟರಿಗೆ ನೇಮಕವಾದ ತಿಂಗಳುಗಳು ಮುಗಿದು ಹೋದ ಮೇಲೆ ತಾವು ಬಿಟ್ಟುಹೋಗುವ ಕುಟುಂಬದವರ ಚಿಂತೆ ಅವರಿಗೆ ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:21
8 ತಿಳಿವುಗಳ ಹೋಲಿಕೆ  

ಮನುಷ್ಯನ ದಿನಗಳು ಇಷ್ಟೇ ಎಂಬದು ತೀರ್ಮಾನವಾಗಿದೆಯಲ್ಲಾ, ಅವನ ತಿಂಗಳುಗಳ ಲೆಕ್ಕವು ನಿನಗೆ ಗೊತ್ತು; ದಾಟಲಾರದ ಗಡಿಗಳನ್ನು ಅವನಿಗೆ ನೇವಿುಸಿದ್ದೀ.


ನನ್ನ ಆಯುಷ್ಯವನ್ನು ಕಡಿಮೆಮಾಡಿ ಬಿಟ್ಟಿದ್ದಾನೆ. ಆದದರಿಂದ - ನನ್ನ ದೇವರೇ, ಅರ್ಧಾಯುಷ್ಯದಲ್ಲಿಯೇ ನನ್ನನ್ನು ಒಯ್ಯಬೇಡ; ನಿನ್ನ ವರುಷಗಳು ತಲತಲಾಂತರಕ್ಕೂ ಇರುತ್ತವೆ.


ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕರು. ನಾನಂತೂ ನಿನ್ನನ್ನೇ ನಂಬಿಕೊಂಡಿರುವೆನು.


ಅವನ ಮಕ್ಕಳು ಘನತೆಯನ್ನು ಹೊಂದುವದು ಅವನಿಗೆ ತಿಳಿಯುವದಿಲ್ಲ. ಅವರು ಕುಂದಿಹೋಗುವಾಗಲೂ ಅವರ ಸ್ಥಿತಿಯು ಅವನಿಗೆ ಗೋಚರವಾಗುವದಿಲ್ಲ.


ಅವನು ತನ್ನ ನಾಶವನ್ನು ಕಣ್ಣಾರೆ ಕಾಣಲಿ, ಸರ್ವಶಕ್ತನ ರೌದ್ರರಸವನ್ನು ಪಾನಮಾಡಲಿ.


ಮೇಲಣ ಲೋಕದವರಿಗೂ ನ್ಯಾಯತೀರಿಸುವ ದೇವರಿಗೆ ಜ್ಞಾನಬೋಧನೆಯನ್ನು ಮಾಡಬಹುದೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು