Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:22 - ಕನ್ನಡ ಸತ್ಯವೇದವು J.V. (BSI)

22 ಮೇಲಣ ಲೋಕದವರಿಗೂ ನ್ಯಾಯತೀರಿಸುವ ದೇವರಿಗೆ ಜ್ಞಾನಬೋಧನೆಯನ್ನು ಮಾಡಬಹುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮೇಲಣ ಲೋಕದವರಿಗೂ, ನ್ಯಾಯತೀರಿಸುವ ದೇವರಿಗೂ ಜ್ಞಾನಬೋಧನೆಯನ್ನು ಮಾಡಬಹುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದೇವರಿಗೆ ಜ್ಞಾನಬೋಧೆ ಮಾಡಬಲ್ಲವನು ಇದ್ದಾನೆಯೇ? ಉನ್ನತರಿಗೂ ನ್ಯಾಯತೀರಿಸುವಂಥವನು ಆತನೇ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ದೇವರಿಗೆ ಜ್ಞಾನವನ್ನು ಉಪದೇಶಿಸಲು ಯಾರಿಂದಲೂ ಆಗದು. ಮೇಲಿನ ಲೋಕದಲ್ಲಿರುವ ಜನರಿಗೂ ಸಹ ದೇವರು ನ್ಯಾಯತೀರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ದೇವರಿಗೆ ಅರಿವನ್ನು ಬೋಧಿಸಬಹುದೇ? ಉನ್ನತರಿಗೂ ನ್ಯಾಯತೀರಿಸುವುದು ದೇವರೇ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:22
23 ತಿಳಿವುಗಳ ಹೋಲಿಕೆ  

ಕರ್ತನ ಮನಸ್ಸನ್ನು ತಿಳುಕೊಂಡವನಾರು?


ಕರ್ತನ ಮನಸ್ಸನ್ನು ತಿಳುಕೊಂಡು ಆತನಿಗೆ ಉಪದೇಶಿಸುವವನಾರು ಎಂದು ಬರೆದದೆಯಲ್ಲಾ. ನಮಗಾದರೋ ಕ್ರಿಸ್ತನ ಮನಸ್ಸು ದೊರಕಿತು.


ತಮ್ಮ ದೊರೆತನವನ್ನು ಕಾಪಾಡದೆ ತಮಗೆ ತಕ್ಕ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದಲ್ಲಿ ಆಗುವ ದಂಡನೆಯ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಇಟ್ಟಿದ್ದಾನೆ.


ಹೇಗಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರಬೇಕೆಂದು ಕತ್ತಲೇ ಗುಂಡಿಗಳಿಗೆ ಒಪ್ಪಿಸಿದನು.


ನಾವು ದೇವದೂತರಿಗೂ ತೀರ್ಪುಮಾಡುವೆವೆಂಬದು ನಿಮಗೆ ತಿಳಿಯದೋ? ಐಹಿಕ ಜೀವದ ಕಾರ್ಯಗಳನ್ನು ಕುರಿತು ನಾವು ತೀರ್ಪುಮಾಡುವದು ದೊಡ್ಡದೋ?


ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣು ಮಡಕೆಗಳಲ್ಲಿ ಅವನೂ ಒಂದು ಮಡಕೆಯಲ್ಲವೆ. ಮಣ್ಣು - ಏನು ಮಾಡುತ್ತೀ ಎಂದು ರೂಪಿಸುವವನನ್ನು ಕೇಳುವದುಂಟೇ? ನಿನ್ನ ಕಾರ್ಯವು [ನಿನ್ನ ವಿಷಯವಾಗಿ] ಅವನಿಗೆ ಕೈಯಿಲ್ಲ ಅಂದೀತೇ?


ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷ್ಯಕ್ಕೆ ತರುವನು; ಆ ಹಿಂಸಕರಿಗಿಂತ ಮಹೋನ್ನತನು ಇದ್ದಾನಲ್ಲಾ.


ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ ದೇವರುಗಳೊಳಗೆ ನ್ಯಾಯವಿಧಿಸುತ್ತಾನೆ -


ಆಕ್ಷೇಪಕನು ಸರ್ವಶಕ್ತನ ಸಂಗಡಲೂ ವ್ಯಾಜ್ಯವಾಡುವನೋ? ದೇವರೊಂದಿಗೆ ವಿವಾದಮಾಡುವವನು ಇದಕ್ಕೆಲ್ಲಾ ಉತ್ತರಕೊಡಲಿ ಎಂದು ಹೇಳಿದನು.


ಇಗೋ, ದೇವರು ತನ್ನ ಶಕ್ತಿಯಿಂದ ಉನ್ನತಕಾರ್ಯಗಳನ್ನು ನಡಿಸುವನು, ಆತನಂಥ ಉಪದೇಶಕನು ಯಾರು?


ಕಾಡುಮೃಗಗಳಿಗಿಂತ ನಮಗೆ ಹೆಚ್ಚು ಜ್ಞಾನವನ್ನು ಬೋಧಿಸುತ್ತಾ ಆಕಾಶದ ಪಕ್ಷಿಗಳಿಗಿಂತ ಹೆಚ್ಚು ಬುದ್ಧಿಯನ್ನು ನಮಗೆ ಕಲಿಸುತ್ತಾನೆ ಎಂದು ಹೇಳಿಕೊಳ್ಳುವದೇ ಇಲ್ಲ.


ಆಹಾ, ತನ್ನ ದೂತರಲ್ಲಿಯೂ ಆತನು ನಂಬಿಕೆಯಿಡುವದಿಲ್ಲ, ಆಕಾಶವೂ ಆತನ ದೃಷ್ಟಿಯಲ್ಲಿ ನಿರ್ಮಲವಾಗಿರದು.


ಆಹಾ, ಆತನು ತನ್ನ ಪರಿಚಾರಕರಲ್ಲಿಯೂ ನಂಬಿಕೆಯನ್ನಿಡುವದಿಲ್ಲ, ತನ್ನ ದೂತರ ಮೇಲೆಯೂ ತಪ್ಪುಹೊರಿಸುತ್ತಾನೆ.


ಅವನ ಆಯುಸ್ಸೇ ಕತ್ತರಿಸಿಹೋದ ಮೇಲೆ ತನ್ನನ್ನು ಹಿಂಬಾಲಿಸುವ ಸಂತತಿಯವರ ಚಿಂತೆ ಏನು?


ಆತನ ಮಾರ್ಗವನ್ನು ಆತನಿಗೆ ಯಾರು ನೇವಿುಸಿದರು? ನೀನು ಅನ್ಯಾಯವನ್ನು ನಡಿಸಿದಿ ಎಂದು ಹೇಳಬಲ್ಲವರಾರು?


ಶೂರನಂತೆ ನಡುಕಟ್ಟಿಕೋ; ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು.


[ಅವರಲ್ಲಿ] ಯಾರು ಯೆಹೋವನ ಆಲೋಚನಾಸಭೆಯಲ್ಲಿ ನಿಂತು ಆತನ ಮಾತನ್ನು ಕೇಳಿ ಕಂಡಿದ್ದಾರೆ? ಯಾರು ಆತನ ನುಡಿಗೆ ಕಿವಿಗೊಟ್ಟು ಗಮನಿಸಿದ್ದಾರೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು