Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:33 - ಕನ್ನಡ ಸತ್ಯವೇದವು J.V. (BSI)

33 ಆ ತಗ್ಗಿನ ಪ್ರದೇಶದ ಹೆಂಟೆಗಳು ಅವನಿಗೆ ಒಪ್ಪಿತವಾಗಿರುವವು. ಅವನಿಗಿಂತ ಹಿಂದೆ ಲೆಕ್ಕವಿಲ್ಲದಷ್ಟು ಜನರು ಹೀಗೆಯೇ ಇದ್ದರು, ಇನ್ನು ಮುಂದೆ ಸಮಸ್ತರೂ ಹೀಗೆಯೇ ಅವನನ್ನು ಹಿಂಬಾಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆ ಕಣಿವೆಯ ಪ್ರದೇಶದ ಹೆಂಟೆಗಳು ಅವನಿಗೆ ಒಪ್ಪಿತವಾಗಿರುವವು. ಅವನಿಗಿಂತ ಹಿಂದೆ ಲೆಕ್ಕವಿಲ್ಲದಷ್ಟು ಜನರು ಹೀಗೆಯೇ ಇದ್ದರು, ಇನ್ನು ಮುಂದೆ ಸಮಸ್ತರೂ ಹೀಗೆಯೇ ಅವನನ್ನು ಹಿಂಬಾಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅವನಿಗೆ ಹಿಡಿಸುತ್ತದೆ ತಗ್ಗಿನಾ ಹೆಂಟೆಮಣ್ಣು ಅವನನು ಹಿಂಬಾಲಿಸುತ್ತಾರೆ ಅಸಂಖ್ಯಾತ ಜನರು ಮುಂದಕ್ಕೂ ಹಿಂಬಾಲಿಸುತ್ತಾರೆ ಲೆಕ್ಕವಿಲ್ಲದ ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆ ದುಷ್ಟನಿಗೆ ಕಣಿವೆಯ ಮಣ್ಣು ಸಿಹಿಯಾಗಿರುವುದು. ಅವನ ಶವಸಂಸ್ಕಾರದ ಮೆರವಣಿಗೆಯಲ್ಲಿ ಸಾವಿರಾರು ಜನರು ಸೇರಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಕಣಿವೆಯಲ್ಲಿನ ಮಣ್ಣು ಅವರಿಗೆ ಸಿಹಿಯಾಗಿರುತ್ತದೆ; ಪ್ರತಿಯೊಬ್ಬರೂ ಅವರನ್ನು ಹಿಂಬಾಲಿಸುತ್ತಾರೆ. ಹೀಗೆ ಅವರನ್ನು ಲೆಕ್ಕವಿಲ್ಲದಷ್ಟು ಜನರು ಹಿಂಬಾಲಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:33
11 ತಿಳಿವುಗಳ ಹೋಲಿಕೆ  

ಒಂದೇ ಸಾರಿ ಸಾಯುವದೂ ಆಮೇಲೆ ನ್ಯಾಯತೀರ್ಪೂ ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ ಹಾಗೆಯೇ ಕ್ರಿಸ್ತನು ಸಹ ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತನಾದನು,


ನೀನು ನನ್ನನ್ನು ಮರಣಕ್ಕೆ ಗುರಿಮಾಡಿ ಸಮಸ್ತಜೀವಿಗಳು ಹೋಗಬೇಕಾದ ಮನೆಗೆ ಸೇರಿಸುವಿಯೆಂದು ನನಗೆ ಗೊತ್ತೇ ಇದೆ.


ಮಣ್ಣು ಭೂವಿುಗೆ ಸೇರಿ ಇದ್ದ ಹಾಗಾಗುವದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವದು; ಇಷ್ಟರೊಳಗಾಗಿ [ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ.]


ಗಾಳಿಯನ್ನು ತಡೆಯುವ ಶಕ್ತಿಯು ಹೇಗೆ ಯಾರಿಗೂ ಇಲ್ಲವೋ ಹಾಗೆ ತಮ್ಮ ಮರಣದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇಲ್ಲ; ಯುದ್ಧಕಾಲದಲ್ಲಿ ಹೇಗೆ ವಿರಾಮ ದೊರೆಯುವದಿಲ್ಲವೋ ಹಾಗೆ ಅಧರ್ಮಕ್ಕೊಳಪಟ್ಟವನಿಗೆ ಬಿಡುಗಡೆಯಿಲ್ಲ.


ಒಂದು ತಲಾಂತರವು ಗತಿಸುವದು, ಇನ್ನೊಂದು ತಲಾಂತರವು ಬರುವದು. ಭೂವಿುಯಾದರೋ ಶಾಶ್ವತವಾಗಿ ನಿಲ್ಲುವದು.


ಅವರು ಉನ್ನತಿಗೆ ಬರುವರು; ಸ್ವಲ್ಪ ಕಾಲದ ಮೇಲೆ ಅವರು ಎಲ್ಲಿಯೋ? ಸರ್ವಮನುಷ್ಯರೊಂದಿಗೆ ಸುಗ್ಗಿಯ ತೆನೆಗಳಂತೆ ಕೊಯ್ಯಲ್ಪಟ್ಟು ಕೆಳಕ್ಕೆ ಬಿದ್ದು ಕೂಡಿಸಲ್ಪಡುವರು.


ಅದು ನನ್ನ ಸಂಗಡ ಪಾತಾಳಕ್ಕೆ ಇಳಿದು ಬಂದೀತೇ? ನಾವು ಜೊತೆಯಾಗಿ ದೂಳಿಗೆ ಸೇರೇವೋ?


ಸಮಾಧಿಗೆ ಸೇರುವಾಗ ಬಹಳವಾಗಿ ಹರ್ಷಿಸಿ ಉಲ್ಲಾಸಪಡುತ್ತಾರೆ.


ನೀನು ತಿರಿಗಿ ಮಣ್ಣಿಗೆ ಸೇರುವತನಕ ಬೆವರಿಡುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಲ್ಲವೋ; ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ ಎಂದು ಹೇಳಿದನು.


ಅವನನ್ನು ಮೆರವಣಿಗೆಯಿಂದ ಸಮಾಧಿಗೆ ತೆಗೆದುಕೊಂಡು ಹೋಗುವರು; ಅವನ ಗೋರಿಗೆ ಕಾವಲಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು