Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:30 - ಕನ್ನಡ ಸತ್ಯವೇದವು J.V. (BSI)

30 ನಿರ್ದೋಷಿಯಲ್ಲದವನನ್ನೂ ತಪ್ಪಿಸುವನು, ಹೌದು, ಆತನು ಇಂಥವನನ್ನು ತಪ್ಪಿಸುವದಕ್ಕೆ ನಿನ್ನ ಕೈಗಳ ಪರಿಶುದ್ಧತೆಯೇ ಕಾರಣವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಿರ್ದೋಷಿಯನ್ನು ಆತನು ತಪ್ಪಿಸುವನು, ಹೌದು, ಆತನು ಇಂಥವನನ್ನು ತಪ್ಪಿಸುವುದಕ್ಕೆ ನಿನ್ನ ಕೈಗಳ ಪರಿಶುದ್ಧತೆಯೇ ಕಾರಣವಾಗಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆತ ವಿಮೋಚಿಸುತ್ತಾನೆ ನಿರ್ದೋಷಿಗಳನು ನಿನ್ನ ಕೈ ಶುದ್ಧವಿರಲಿ ವಿಮೋಚಿಸುವನು ನಿನ್ನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಿರಪರಾಧಿಗಳನ್ನು ರಕ್ಷಿಸುವನು. ನೀನು ಪರಿಶುದ್ಧನಾಗಿರುವುದರಿಂದ ನಿನ್ನ ಪ್ರಾರ್ಥನೆಗೆ ಉತ್ತರವಾಗಿ ಆತನು ಅವರನ್ನು ಕ್ಷಮಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನಿರ್ದೋಷಿಯಾಗಿ ಇಲ್ಲದವರನ್ನು ಸಹ ದೇವರು ವಿಮೋಚಿಸುತ್ತಾರೆ; ನಿನ್ನ ಕೈಗಳ ಶುದ್ಧತ್ವದಿಂದ ಅಂಥವರು ಬಿಡುಗಡೆಯಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:30
17 ತಿಳಿವುಗಳ ಹೋಲಿಕೆ  

ಯೆಹೋವನು ನನ್ನ ನೀತಿಗೆ ಸರಿಯಾಗಿ ಮೇಲು ಮಾಡಿದನು; ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲ ಕೊಟ್ಟನು.


ಪೌಲನೇ, ಭಯಪಡಬೇಡ, ನೀನು ಚಕ್ರವರ್ತಿಯ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣ ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು ನನ್ನ ಸಂಗಡ ಹೇಳಿದನು.


ನಿನಗೆ ಮೆಚ್ಚುವನೋ? ಪ್ರಸನ್ನನಾಗುವನೋ? ಹಾಗಾದರೆ ದೇವರ ದಯೆ ದೊರೆಯುವ ಹಾಗೆ ದೇವರನ್ನು ಒಲಿಸಿಕೊಳ್ಳಿರಿ; ಆಹಾ, ಇದೇ ನಿಮ್ಮ ಕೈಯ ಕಾಣಿಕೆ; ನಿಮ್ಮಲ್ಲಿ ಯಾರಿಗಾದರೂ ಆತನು ಪ್ರಸನ್ನನಾಗುವನೋ? ಇದು ಸೇನಾಧೀಶ್ವರ ಯೆಹೋವನ ನುಡಿ.


ಯೆರೂಸಲೇವಿುನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನನುಸರಿಸುವ ಒಬ್ಬನಾದರೂ ಇದ್ದಾನೋ, ಇಂಥ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷವಿುಸುವೆನು.


ನಿಮ್ಮ ಸಂತಾನದವರು ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ತಿರಿಗಿ ಕಟ್ಟುವರು. ನೀವು ತಲತಲಾಂತರಗಳಿಂದ ಪಾಳುಬಿದ್ದಿರುವ ಅಸ್ತಿವಾರಗಳ ಮೇಲೆ ಕಟ್ಟಡಗಳನ್ನು ಎಬ್ಬಿಸುವಿರಿ; ಬಿದ್ದ ಗೋಡೆಯನ್ನು ಹಾಕುವ ಜನಾಂಗ, ಹಾದಿಗಳನ್ನು ತಿರುಗಾಡುವ ಸ್ಥಿತಿಗೆ ತರುವ ಜನಾಂಗ, ಎಂಬೀ ಬಿರುದುಗಳು ನಿಮಗುಂಟಾಗುವವು.


ಯಾವನು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ ಮೋಸಪ್ರಮಾಣಮಾಡದೆ ಶುದ್ಧಹಸ್ತವೂ ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ


ಹೀಗಿರಲಾಗಿ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ವಾಗ್ವಾದವೂ ಇಲ್ಲದವರಾಗಿ ಭಕ್ತಿಪೂರ್ವಕವಾಗಿಯೇ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ.


ನೀವು [ನನ್ನ ಕಡೆಗೆ] ಕೈಯೆತ್ತುವಾಗ ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿದರೂ ನಾನು ಕೇಳೆನು, ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.


ಹೀಗಾದರೂ ಶಿಷ್ಟನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, ಶುದ್ಧಹಸ್ತನು ಬಲಗೊಳ್ಳುತ್ತಲೇ ಇರುವನು.


ಆಗ ಯೋಬನು ಇಂತೆಂದನು -


ಯೆಹೋವನ ಪರ್ವತವನ್ನು ಹತ್ತತಕ್ಕವನು ಯಾರು? ಆತನ ಪವಿತ್ರಸ್ಥಾನದಲ್ಲಿ ನಿಲ್ಲುವದಕ್ಕೆ ಎಂಥವನು ಯೋಗ್ಯನು?


ಆಗ ತೇಮಾನ್ಯನಾದ ಎಲೀಫಜನೂ ಶೂಹ್ಯನಾದ ಬಿಲ್ದದನೂ ನಾಮಾಥ್ಯನಾದ ಚೋಫರನೂ ಹೋಗಿ ಯೆಹೋವನು ತಮಗೆ ಆಜ್ಞಾಪಿಸಿದ ಪ್ರಕಾರ ಮಾಡಲು ಯೆಹೋವನು ಯೋಬನ ವಿಜ್ಞಾಪನೆಯನ್ನು ಲಾಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು