Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:4 - ಕನ್ನಡ ಸತ್ಯವೇದವು J.V. (BSI)

4 ನಿನ್ನ ಭಯಭಕ್ತಿಗಾಗಿಯೇ ಆತನು ನಿನ್ನನ್ನು ಶಿಕ್ಷಿಸಿ ನ್ಯಾಯತೀರ್ಪಿಗೆ ಗುರಿಮಾಡುತ್ತಾನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿನ್ನ ಭಯಭಕ್ತಿಗಾಗಿಯೇ ಆತನು ನಿನ್ನನ್ನು ಶಿಕ್ಷಿಸಿ ನ್ಯಾಯತೀರ್ಪಿಗೆ ಗುರಿಮಾಡುತ್ತಾನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿನ್ನ ಭಯಭಕ್ತಿಗಾಗಿ ಆತ ನಿನ್ನನ್ನು ಶಿಕ್ಷಿಸುತ್ತಾನೆಯೇ? ಅದಕ್ಕಾಗಿ ನಿನ್ನನು ನ್ಯಾಯತೀರ್ಪಿಗೆ ಗುರಿಪಡಿಸುತ್ತಾನೆಯೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿನ್ನ ಆರಾಧನೆಯ ದೆಸೆಯಿಂದ ದೇವರು ನಿನ್ನ ಮೇಲೆ ಆರೋಪ ಹೊರಿಸಿ ದಂಡಿಸುವನೇ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ನಿನ್ನ ಭಕ್ತಿಗಾಗಿ ದೇವರು ನಿನ್ನನ್ನು ಗದರಿಸುತ್ತಾರೋ? ನಿನ್ನ ಭಕ್ತಿಗಾಗಿ ದೇವರು ನ್ಯಾಯತೀರ್ಪಿಗೆ ಗುರಿಪಡಿಸುತ್ತಾರೆಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:4
17 ತಿಳಿವುಗಳ ಹೋಲಿಕೆ  

ನೀನು ಇಂಥವನಾದ ನನ್ನ ಮೇಲೆ ಕಣ್ಣಿಟ್ಟು ನಿನ್ನ ನ್ಯಾಯಸ್ಥಾನಕ್ಕೆ ನನ್ನನ್ನು ಬರಮಾಡುವಿಯಾ?


ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.


ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದದರಿಂದ ನೀನು ಆಸಕ್ತನಾಗಿರು; ದೇವರ ಕಡೆಗೆ ತಿರುಗಿಕೋ.


ಅದು ಕಡಿದು ಬೆಂಕಿಯಿಂದ ಸುಡಲ್ಪಟ್ಟಿದೆ. ಅವರು ನಿನ್ನ ಬಾಯಿಗದರಿಕೆಯಿಂದ ನಾಶವಾಗುತ್ತಾರೆ.


ಯಾಕೋಬವಂಶದವರ ದೇವರೇ, ನಿನ್ನ ಗದರಿಕೆಯಿಂದ ರಥಬಲವೂ ಅಶ್ವಬಲವೂ ಮೈಮರೆತು ಬಿದ್ದವು.


ನೀನು ನರನನ್ನು ಪಾಪದ ನಿವಿುತ್ತ ಗದರಿಸಿ ಶಿಕ್ಷಿಸುವಾಗ ಅವನ ಚೆಲುವಿಕೆಯು ನುಸಿಹತ್ತಿತೋ ಎಂಬಂತೆ ಹಾಳಾಗಿ ಹೋಗುತ್ತದೆ. ಮನುಷ್ಯನೆಂಬವನು ಬರೀ ಉಸಿರೇ. ಸೆಲಾ.


ಆತನು ಮನುಷ್ಯನ ಮೇಲೆ ಹೆಚ್ಚು ಗಮನವಿಡುವದೂ ಮನುಷ್ಯನು ಆತನ ನ್ಯಾಯವಿಚಾರಣೆಗೆ ಬರುವದೂ ಅವಶ್ಯವಿಲ್ಲ.


ಕತ್ತಿಗೆ ಭಯಪಡಿರಿ, ಕತ್ತಿಯ ದಂಡನೆಗಳು ತೀಕ್ಷ್ಣವಾಗಿವೆ; ಇದರಿಂದ ನ್ಯಾಯನಿರ್ಣಯವುಂಟೆಂದು ತಿಳಿದುಕೊಳ್ಳುವಿರಿ.


ನನ್ನ ನ್ಯಾಯವನ್ನು ದೇವರ ಮುಂದೆಯೂ ಮಾನವನ ನ್ಯಾಯವನ್ನು ಅವನ ವಿುತ್ರನ ಮುಂದೆಯೂ ಸ್ಥಾಪಿಸಲಿ ಎಂದು ದೇವರಿಗೇನೇ ಕಣ್ಣೀರು ಸುರಿಸುತ್ತೇನೆ.


ಆತನು ನನ್ನಂಥವನಲ್ಲ, ಮನುಷ್ಯನಲ್ಲ, ನಾನು ಆತನೊಂದಿಗೆ ವಾದಿಸುವದು ಹೇಗೆ? ನಾವಿಬ್ಬರೂ ನ್ಯಾಯಾಸನದ ಮುಂದೆ ಕೂಡುವದು ಹೇಗೆ?


ನಾನು ಬಲಿಷ್ಠನ ಶಕ್ತಿಯನ್ನು ಮರೆಹೊಗುವೆನೆಂದರೆ [ದೇವರು] - ಇಗೋ, [ಇದ್ದೇನೆ; ಅನ್ನುವನು] ನ್ಯಾಯವಿಚಾರಣೆಯು [ಆಗಲಿ ಎಂದರೆ ಆತನು] ನನಗೆ ಕಾಲನಿಯಾಮಕರು ಯಾರು [ಅನ್ನುವನು].


ನೀನು ನನ್ನ ಮೇಲೆ ಕಾವಲಿಡುವದೇಕೆ? ನಾನು ಸಮುದ್ರವೋ [ಸಾಗರವೆಂಬ] ಘಟಸರ್ಪವೋ?


ಒಳ್ಳೇದಾಗಲಿ ಕೆಟ್ಟದಾಗಲಿ ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸುವ ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.


ನೀನು ನೀತಿವಂತನಾಗಿರುವದು ಸರ್ವಶಕ್ತನಿಗೆ ಸುಖವೋ? ನಿನ್ನ ನಡತೆಯನ್ನು ಸರಿಪಡಿಸಿಕೊಂಡರೆ ಆತನಿಗೇನು ಲಾಭ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು