Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:1 - ಕನ್ನಡ ಸತ್ಯವೇದವು J.V. (BSI)

1 ಸರ್ವಶಕ್ತನು ಏಕೆ [ದಂಡನೆಯ] ಕಾಲಗಳನ್ನು ನೇವಿುಸಿ ಇಟ್ಟುಕೊಂಡಿಲ್ಲ? ಆತನನ್ನು ಅರಿತವರಿಗೆ ಆತನ [ನ್ಯಾಯ ತೀರ್ಪಿನ] ದಿನಗಳು ಏಕೆ ಗೋಚರವಾಗುವದಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಸರ್ವಶಕ್ತನಾದ ದೇವರು ಏಕೆ ದುಷ್ಟರಿಗೆ ದಂಡನೆಯ ಕಾಲಗಳನ್ನು ನೇಮಿಸಿ ಇಟ್ಟುಕೊಂಡಿಲ್ಲ? ಆತನನ್ನು ಅರಿತವರಿಗೆ ಆತನ ನ್ಯಾಯತೀರ್ಪಿನ ದಿನಗಳು ಏಕೆ ಗೋಚರವಾಗುವುದಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವಶಕ್ತಸ್ವಾಮಿ ಕಾಲರಾಶಿಯನ್ನೇಕೆ ನೇಮಿಸಿಟ್ಟುಕೊಂಡಿಲ್ಲ? ಆತನನ್ನು ಅರಿತವರಿಗೆ ಆತನ ದಿನಗಳೇಕೆ ಗೋಚರವಾಗುವುದಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಸರ್ವಶಕ್ತನಾದ ದೇವರು ನ್ಯಾಯತೀರ್ಪಿಗೆ ಸಮಯವನ್ನು ಗೊತ್ತುಪಡಿಸದಿರುವುದೇಕೆ? ಆತನನ್ನು ಅರಿತವರಿಗೆ ಸಮಯವು ತಿಳಿಯದಿರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಸರ್ವಶಕ್ತರು ತೀರ್ಪಿನ ಕಾಲವನ್ನು ನಿಗದಿಪಡಿಸದೆ ಇರುವುದೇಕೆ? ದೇವರನ್ನು ತಿಳಿದವರು ದೇವರ ದಿನಗಳಿಗೋಸ್ಕರ ವ್ಯರ್ಥವಾಗಿ ನೋಡುತ್ತಿರುವುದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:1
29 ತಿಳಿವುಗಳ ಹೋಲಿಕೆ  

ಆತನು ಅವರಿಗೆ - ತಂದೆಯು ಸ್ವಂತ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ ಸಮಯಗಳನ್ನೂ ತಿಳುಕೊಳ್ಳುವದು ನಿಮ್ಮ ಕೆಲಸವಲ್ಲ.


ಆಗ ನಾನು ಮನಸ್ಸಿನಲ್ಲಿ - ದೇವರು ಧರ್ಮಿಗಳಿಗೂ ಅಧರ್ಮಿಗಳಿಗೂ ನ್ಯಾಯತೀರಿಸುವನು.; ಆತನ ನ್ಯಾಯಕ್ರಮದಲ್ಲಿ ಎಲ್ಲಾ ಕೆಲಸಕಾರ್ಯಗಳಿಗೂ ತಕ್ಕ ಸಮಯವುಂಟಲ್ಲವೆ ಅಂದುಕೊಂಡೆನು.


ಹೇಗಂದರೆ ಜಲಪ್ರಳಯಕ್ಕೆ ಮುಂಚಿನ ದಿನಗಳಲ್ಲಿ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಉಣ್ಣುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮಾಡಿಕೊಡುತ್ತಾ ಇದ್ದು


ಭಾಗ್ಯವಂತನಾದ ಏಕಾಧಿಪತಿಯು ತನ್ನ ಕ್ಲುಪ್ತ ಸಮಯದಲ್ಲೇ ಆತನನ್ನು ಪ್ರತ್ಯಕ್ಷಪಡಿಸುವನು. ಆ ಏಕಾಧಿಪತಿಯು ರಾಜಾಧಿರಾಜನೂ ಕರ್ತರ ಕರ್ತನೂ


ಆದರೂ ಮುಂದಣ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಾನೆ.


ನೀನು ನಿನ್ನ ಮೊಂಡತನವನ್ನೂ ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸುವದರಿಂದ ನಿನಗೋಸ್ಕರ ದೇವರ ಕೋಪವನ್ನು ಕೂಡಿಟ್ಟುಕೊಳ್ಳುತ್ತಾ ಇದ್ದೀ. ದೇವರ ಕೋಪವೂ ನ್ಯಾಯವಾದ ತೀರ್ಪು ಪ್ರಕಟವಾಗುವ ದಿವಸ ಬರುತ್ತದಷ್ಟೆ.


ಆತನು ಒಬ್ಬನಿಂದಲೇ ಎಲ್ಲಾ ಜನಾಂಗದವರನ್ನು ಹುಟ್ಟಿಸಿ ಅವರವರು ಇರತಕ್ಕ ಕಾಲಗಳನ್ನೂ ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ವಾಸಮಾಡಿ


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವದೇ ನಿತ್ಯಜೀವವು.


ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ತಳ್ಳುತ್ತಾನೆ, ನಿಲ್ಲಿಸುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ;


ಆದರೆ ಆ ಯುದ್ಧದಿನವು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ದಿನವಾಗಿದೆ; ಅದು ದಂಡನೆಯ ದಿವಸ; ಆಗ ಖಡ್ಗವು ನುಂಗಿ ನುಂಗಿ ತಣಿಯುವದು, ಅವರ ರಕ್ತವನ್ನು ತುಂಬಾ ಹೀರುವದು; ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಬಡಗಲಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಬಲಿಮಾಡಬೇಕೆಂದಿದ್ದಾನಲ್ಲಾ.


ಚಿಕ್ಕವನಿಂದ ಒಂದು ಕುಲವಾಗುವದು, ಅಲ್ಪನಿಂದ ಬಲವಾದ ಜನಾಂಗವಾಗುವದು; ಯೆಹೋವನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಲುಬೇಗನೆ ಉಂಟುಮಾಡುವೆನು.


ಸೇನಾಧೀಶ್ವರನಾದ ಯೆಹೋವನ [ನ್ಯಾಯನಿರ್ಣಯ] ದಿವಸವು ಗರ್ವದಿಂದ ಹೆಚ್ಚಿಕೊಂಡಿರುವ ಸಮಸ್ತಕ್ಕೂ ಸಂಭವಿಸುವದು; ಆಗ ಅದೆಲ್ಲಾ ತಗ್ಗುವದು.


ನಿನ್ನನ್ನು ಅರಿತವರಿಗೆ ನಿನ್ನ ಪ್ರೀತಿಯನ್ನು ಯಾವಾಗಲೂ ದಯಪಾಲಿಸು; ಯಥಾರ್ಥಚಿತ್ತರಿಗೆ ನಿನ್ನ ನ್ಯಾಯವನ್ನು ನಿರಂತರವೂ ಅನುಗ್ರಹಿಸು.


ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಯಾಕಂದರೆ ನಿನ್ನ ಮರೆಹೊಗುವವರನ್ನು ನೀನು ಕೈಬಿಡುವವನಲ್ಲ.


ಆಗ ಯೆಹೋವನು ತನ್ನೊಳಗೆ - ನಾನು ಮಾಡಬೇಕೆಂದಿರುವ ಕಾರ್ಯವನ್ನು ಅಬ್ರಹಾಮನಿಗೆ ಮರೆಮಾಡುವದು ಸರಿಯೋ?


ಏಳುದಿನಗಳ ನಂತರ ನಾನು ಭೂವಿುಯ ಮೇಲೆ ನಾಲ್ವತ್ತು ದಿವಸ ಹಗಲಿರುಳು ಮಳೆಯನ್ನು ಸುರಿಸಿ ನನ್ನಿಂದಾದ ಜೀವರಾಶಿಗಳನ್ನೆಲ್ಲಾ ಭೂವಿುಯ ಮೇಲಿನಿಂದ ಅಳಿಸಿಬಿಡುತ್ತೇನೆ ಎಂದು ಹೇಳಿದನು.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಲೋಕಾದಿಯಿಂದ ಅಂಥವರಿಗೆ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವದು, ಅವರ ನಾಶವು ತೂಕಡಿಸುವದಿಲ್ಲ.


ಸಹೋದರರೇ, ಈ ಸಂಗತಿಗಳು ನಡೆಯಬೇಕಾದ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯುವದು ಅವಶ್ಯವಿಲ್ಲ.


ನನ್ನ ಆಯುಷ್ಕಾಲವು ನಿನ್ನ ಕೈಯಲ್ಲಿದೆ; ಹಿಂದಟ್ಟುವ ಶತ್ರುಗಳಿಗೆ ನನ್ನನ್ನು ತಪ್ಪಿಸಿಕಾಪಾಡು.


ಹಿಂಸಕನಿಗೆ ಎಷ್ಟು ವರುಷಗಳು ನೇಮಕವಾಗಿವೆಯೋ ಅಷ್ಟು ಕಾಲವೂ ಆ ದುಷ್ಟನು ಪೀಡಿತನಾಗಿಯೇ ಇರುವನು.


ಯೆಹೋವನ ದಿನವು ಸಮಸ್ತ ಜನಾಂಗಗಳಿಗೆ ಸಮೀಪಿಸಿದೆ; ನೀನು ಮಾಡಿದ್ದೇ ನಿನಗಾಗುವದು; ನಿನ್ನ ಕೃತ್ಯವೇ ನಿನ್ನ ತಲೆಗೆ ಬರುವದು.


ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ; ಯೆಹೋವನ ದಿನವು ಸಮೀಪಿಸಿತು; ಯೆಹೋವನು ಯಜ್ಞದ ಔತಣವನ್ನು ಸಿದ್ಧಪಡಿಸಿದ್ದಾನೆ, ಕರೆದವರನ್ನು ಮಡಿಮಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು