Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:23 - ಕನ್ನಡ ಸತ್ಯವೇದವು J.V. (BSI)

23 ದೇವರು ಅವರಿಗೆ ಅಭಯವನ್ನು ಕೊಟ್ಟದರಿಂದ ಅವರು ಅದನ್ನು ಆಧಾರಮಾಡಿಕೊಳ್ಳುವರು; ಆತನ ಕಟಾಕ್ಷವು ಅವರ ಮಾರ್ಗಗಳ ಮೇಲಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ದೇವರು ಅವರಿಗೆ ಅಭಯವನ್ನು ಕೊಟ್ಟಿದ್ದರಿಂದ ಅವರು ಅದನ್ನು ಆಧಾರಮಾಡಿಕೊಳ್ಳುವರು; ಆತನ ಕಟಾಕ್ಷವು ಅವರ ಮಾರ್ಗಗಳ ಮೇಲಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವರು ಆಧರಿಸಿ ನಿಂತಿರುವುದು ದೇವರಿತ್ತ ಅಭಯದ ನಿಮಿತ್ತ ಆತನ ಕಟಾಕ್ಷ ಅವರ ಮಾರ್ಗದತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ತಾವು ಸುರಕ್ಷಿತವಾಗಿದ್ದೇವೆಂದು ದುಷ್ಟರು ಹೇಳುವುದು ಕೇವಲ ಅಲ್ಪಕಾಲದವರಗಷ್ಟೇ. ಯಾಕೆಂದರೆ ದೇವರು ಅವರನ್ನು ಗಮನಿಸುತ್ತಲೇ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಭದ್ರತೆಯಲ್ಲಿ ವಿಶ್ರಾಂತಿ ಪಡೆಯಲು ದೇವರು ಅವರಿಗೆ ಅವಕಾಶ ನೀಡಬಹುದು; ಆದರೆ ದೇವರ ಕಣ್ಣುಗಳು ಅವರ ಮಾರ್ಗಗಳ ಮೇಲಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:23
25 ತಿಳಿವುಗಳ ಹೋಲಿಕೆ  

ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವದು; ಆತನು ಕೆಟ್ಟವರನ್ನೂ ಒಳ್ಳೆಯವರನ್ನೂ ನೋಡುತ್ತಲೇ ಇರುವನು.


ಅವಳ ಮಕ್ಕಳನ್ನು ಕೊಂದೇ ಕೊಲ್ಲುವೆನು; ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು. ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲ ಕೊಡುವೆನು.


ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಆದರೆ ಆ ಆಳು - ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಅಂತ ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವದಕ್ಕೂ ತಿಂದು ಕುಡಿದು ಅಮಲೇರುವದಕ್ಕೂ ತೊಡಗಿದರೆ


ಕೇಡನ್ನು ನೋಡಲಾರದ ಅತಿಪವಿತ್ರ ದೃಷ್ಟಿಯುಳ್ಳವನೇ, ಕೆಡುಕನ್ನು ಕಟಾಕ್ಷಿಸಲಾರದವನೇ, ಏಕೆ ಕೆಡುಕರನ್ನು ಕಟಾಕ್ಷಿಸುತ್ತೀ? ದುಷ್ಟನು ತನಗಿಂತ ಯೋಗ್ಯನನ್ನು ನುಂಗಿಬಿಡುವಾಗ ಏಕೆ ಸುಮ್ಮನಿದ್ದೀ?


ಪಾತಾಳದವರೆಗೆ ತೋಡಿಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು; ಸ್ವರ್ಗದ ತನಕ ಹತ್ತಿದರೇನು, ಅಲ್ಲಿಂದಲೂ ಅವರನ್ನಿಳಿಸುವೆನು;


ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ - ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವದನ್ನೂ ಎಂದಿಗೂ ಮರೆತುಬಿಡೆನು.


ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ; ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷದಿನವಾಗಿರುವದು [ಎಂದು ಹರಟಿಕೊಳ್ಳುವರು].


ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೆ ನಡೆಯದಿರುವ ಕಾರಣ ಅಪರಾಧಮಾಡಬೇಕೆಂಬ ಯೋಚನೆಯು ನರಜನ್ಮದವರ ಹೃದಯದಲ್ಲಿ ತುಂಬಿ ತುಳುಕುವದು.


ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷ್ಯಕ್ಕೆ ತರುವನು; ಆ ಹಿಂಸಕರಿಗಿಂತ ಮಹೋನ್ನತನು ಇದ್ದಾನಲ್ಲಾ.


ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ. ಆತನು ಮನುಷ್ಯನ ನಡತೆಯನ್ನೆಲ್ಲಾ ಪರೀಕ್ಷಿಸುವವನಾಗಿದ್ದಾನೆ.


ಜಾರಿಬಿದ್ದವರಿಗೆ ಅಪಮಾನವು ಕಾದಿರುತ್ತದೆ. ಕಳ್ಳರ ಗುಡಾರಗಳಾದರೋ ಸಮೃದ್ಧಿವಾಗಿರುವವು, ಕೈಯಲ್ಲಿರುವದನ್ನೇ ದೇವರನ್ನಾಗಿ ಮಾಡಿಕೊಂಡು ದೇವರನ್ನು ರೇಗಿಸುವವರು ಸುರಕ್ಷಿತರಾಗಿದ್ದಾರೆ.


ಆತನೇ ವ್ಯರ್ಥಜನರನ್ನು ತಿಳಿದುಕೊಳ್ಳುವನು; ಯಾವ ವಿಮರ್ಶೆಯೂ ಇಲ್ಲದೆ ಅಧರ್ಮವನ್ನು ಕಂಡುಹಿಡಿಯುವನು.


ನೀನು ಮಾಂಸದ ಕಣ್ಣುಳ್ಳವನೋ? ಮನುಷ್ಯರು ನೋಡುವಂತೆ ನೋಡುತ್ತೀಯಾ?


ಆತನೇ ನನ್ನ ನಡತೆಯನ್ನು ನೋಡಿ ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುತ್ತಿದ್ದಾನೆ ಎಂದು ಅಂದುಕೊಳ್ಳುತ್ತಿದ್ದೆನು.


ಆತನು ಮನುಷ್ಯನ ಮಾರ್ಗಗಳ ಮೇಲೆ ಕಣ್ಣಿಟ್ಟು ಅವನ ಹೆಜ್ಜೆಗಳನ್ನೆಲ್ಲಾ ನೋಡುವನು.


ನಿನ್ನ ನೇಮಗಳನ್ನೂ ಕಟ್ಟಳೆಗಳನ್ನೂ ಅನುಸರಿಸಿದ್ದೇನೆ; ನನ್ನ ನಡತೆಯೆಲ್ಲಾ ನಿನಗೆ ಗೊತ್ತದೆ.


ಅವನ ಪ್ರಯತ್ನಗಳು ಯಾವಾಗಲೂ ಕೈಗೂಡುತ್ತವೆ; ನಿನ್ನ ನ್ಯಾಯತೀರ್ಪು ಮಹೋನ್ನತವಾಗಿರುವದರಿಂದ ಅವನ ಗ್ರಹಿಕೆಗೆ ಬರುವದಿಲ್ಲ; ವೈರಿಗಳ ಗುಂಪನ್ನಾದರೋ ತಾತ್ಸಾರ ಮಾಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು