Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:5 - ಕನ್ನಡ ಸತ್ಯವೇದವು J.V. (BSI)

5 ನೀವು ನ್ಯಾಯವಂತರೆಂದು ನಾನು ಒಪ್ಪುವದು ದೂರವಾಗಿರಲಿ, ಸಾಯುವ ತನಕ ನನ್ನ ಯಥಾರ್ಥತ್ವದ ಹೆಸರನ್ನು ಕಳಕೊಳ್ಳೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ನ್ಯಾಯವಂತರೆಂದು ನಾನು ಒಪ್ಪುವುದು ಅಸಾಧ್ಯ. ಸಾಯುವ ತನಕ ನನ್ನ ಯಥಾರ್ಥತ್ವವನ್ನು ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀವು ನ್ಯಾಯವಂತರೆಂದು ನಾನು ಒಪ್ಪಿದರೆ ನನಗಿರಲಿ ಧಿಕ್ಕಾರ! ನಾನು ಸತ್ಯತೆಯನ್ನು ಕಳೆದುಕೊಳ್ಳಲಾರೆ ಸಾಯುವ ತನಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀವು ನ್ಯಾಯವಂತರೆಂದು ನಾನು ಒಪ್ಪಿಕೊಳ್ಳುವುದಿಲ್ಲ. ನಾನು ನಿರಪರಾಧಿಯೆಂದು ನನ್ನ ಮರಣದ ದಿನದವರೆಗೂ ಹೇಳುತ್ತಲೇ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ನ್ಯಾಯವಂತರೆಂದು ನಾನು ಒಪ್ಪುವುದಿಲ್ಲ; ನಾನು ಸಾಯುವ ತನಕ, ನನ್ನ ಪ್ರಾಮಾಣಿಕತ್ವವನ್ನು ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:5
17 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ ಅವನ ಹೆಂಡತಿ ಅವನಿಗೆ - ನಿನ್ನ ಯಥಾರ್ಥತ್ವವನ್ನು ಇನ್ನೂ ಬಿಡಲಿಲ್ಲವೋ? ದೇವರನ್ನು ದೂಷಿಸಿ ಸಾಯಿ ಎಂದು ಹೇಳಿದಳು.


ಆಹಾ, ಆತನು ನನ್ನನ್ನು ಕೊಲ್ಲುವನು, ಅದಕ್ಕಾಗಿ ಕಾದಿರುತ್ತೇನೆ, ಆದರೂ ನನ್ನ ನಡತೆಯ ಒಳ್ಳೇತನವನ್ನು ಆತನ ಮುಂದೆ ಸ್ಥಾಪಿಸುವೆನು.


ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದರಿಂದ ನಾನು ಅವನನ್ನು ಮುಖಾಮುಖಿಯಾಗಿ ಎದುರಿಸಿದೆನು.


ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು.


ಯೆಹೋವನು ಈ ಮಾತುಗಳನ್ನು ಯೋಬನಿಗೆ ಹೇಳಿದ ಮೇಲೆ ತೇಮಾನ್ಯನಾದ ಎಲೀಫಜನನ್ನು ಕುರಿತು - ನಿನ್ನ ಮೇಲೆಯೂ ನಿನ್ನ ಇಬ್ಬರು ಸ್ನೇಹಿತರ ಮೇಲೆಯೂ ಕೋಪಗೊಂಡಿದ್ದೇನೆ; ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಯಥಾರ್ಥವನ್ನಾಡಿದಂತೆ ನೀವು ಆಡಲಿಲ್ಲ.


ಇದಲ್ಲದೆ ಅವನ ಮೂವರು ಸ್ನೇಹಿತರು ಯೋಬನನ್ನು ಖಂಡಿಸತಕ್ಕ ಉತ್ತರವನ್ನು ಹೇಳಲಾರದೆ ಹೋದದರಿಂದ ಅವನು ಅವರ ಮೇಲೆಯೂ ಕೋಪಿಸಿಕೊಂಡನು.


ನಾನು ಧರ್ಮವನ್ನು ಧರಿಸಿಕೊಂಡೆನು, ಧರ್ಮವು ನನ್ನನ್ನು ಧರಿಸಿತು, ನನ್ನ ನ್ಯಾಯವೇ ನನಗೆ ನಿಲುವಂಗಿಯೂ ಮುಂಡಾಸವೂ ಆಗಿತ್ತು.


ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.


ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;


ಆಗ ಯೆಹೋವನು ಸೈತಾನನಿಗೆ - ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟಿಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವದಿಲ್ಲ; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶನಮಾಡುವದಕ್ಕೆ ನೀನು ನನ್ನನ್ನು ಪ್ರೇರಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ ಅಂದನು.


ದಯವಿಟ್ಟು ನನ್ನ ವಿಚಾರಣೆಗೆ ತಿರುಗಿಕೊಳ್ಳಿರಿ, ಅನ್ಯಾಯವಾಗದಿರಲಿ; ಮತ್ತೆ ವಿಮರ್ಶೆಗೆ ತಿರುಗಿಕೊಳ್ಳಿರಿ. ನನ್ನ ವ್ಯಾಜ್ಯವು ನ್ಯಾಯವಾದದ್ದು.


ಒಂದು ವೇಳೆ ನಾನು ಕಪಟದ ಜೊತೆಯಲ್ಲಿ ನಡೆದು ಮೋಸವನ್ನು ಹಿಂಬಾಲಿಸಿ ಓಡಿ


ಆಗ ಯೋಬನು ಸ್ವಂತ ಗಣನೆಯಲ್ಲಿ ನೀತಿವಂತನಾಗಿದ್ದದ್ದರಿಂದ ಆ ಮೂವರು ಅವನಿಗೆ ಉತ್ತರಕೊಡುವದನ್ನು ನಿಲ್ಲಿಸಿಬಿಟ್ಟರು.


ಆಮೇಲೆ ಬೂಜ್ ಕುಲಕ್ಕೂ ರಾಮ್ ಗೋತ್ರಕ್ಕೂ ಸೇರಿದ ಬರಕೇಲನ ಮಗನಾದ ಎಲೀಹುವಿಗೆ ಸಿಟ್ಟೇರಿತು; ಯೋಬನು ದೇವರಿಗಿಂತಲೂ ತಾನೇ ನ್ಯಾಯವಂತನೆಂದು ಎಣಿಸಿಕೊಂಡದರಿಂದ ಅವನ ಮೇಲೆ ಎಲೀಹುವಿಗೆ ಸಿಟ್ಟು ಹತ್ತಿತು.


ಹೀಗಾದರೂ ಶಿಷ್ಟನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, ಶುದ್ಧಹಸ್ತನು ಬಲಗೊಳ್ಳುತ್ತಲೇ ಇರುವನು.


ನನ್ನ ನಡತೆಯಲ್ಲಿ ದಾರಿತಪ್ಪಿದ್ದರೆ ನನ್ನ ಹೃದಯವು ಕಂಡಕಂಡದ್ದನ್ನು ಹಿಂಬಾಲಿಸಿದ್ದರೆ ನನ್ನ ಕೈಗಳಲ್ಲಿ ಕಲ್ಮಷವು ಅಂಟಿಕೊಂಡಿದ್ದರೆ


ನಾನು ಪರಿಶುದ್ಧನು, ನನ್ನೊಳಗೆ ದೋಷವಿಲ್ಲ, ನಾನು ನಿರ್ಮಲನು, ನನ್ನಲ್ಲಿ ಏನೂ ಪಾಪವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು