Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:18 - ಕನ್ನಡ ಸತ್ಯವೇದವು J.V. (BSI)

18 [ಜ್ಞಾನವಿರುವಲ್ಲಿ] ಹವಳವೂ ಸ್ಪಟಿಕವೂ ನೆನಪಿಗೆ ಬರುವದಿಲ್ಲ. ಮುತ್ತುಗಳನ್ನು ಸಂಪಾದಿಸುವದಕ್ಕಿಂತಲೂ ಜ್ಞಾನವನ್ನು ಸಂಪಾದಿಸುವದು ಎಷ್ಟೋ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಜ್ಞಾನವಿರುವಲ್ಲಿ ಹವಳವೂ, ಸ್ಫಟಿಕವೂ ನೆನಪಿಗೆ ಬರುವುದಿಲ್ಲ. ಮುತ್ತುಗಳನ್ನು ಸಂಪಾದಿಸುವುದಕ್ಕಿಂತಲೂ ಜ್ಞಾನವನ್ನು ಸಂಪಾದಿಸುವುದು ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸುಜ್ಞಾನವಿರುವಲ್ಲಿ ಹವಳ-ಸ್ಫಟಿಕಗಳು ನೆನಪಿಗೆ ಬಾರವು ಮಾಣಿಕ್ಯಗಳ ಸಂಪಾದನೆಗಿಂತ ಅದರ ಸಂಪಾದನೆ ಶ್ರೇಷ್ಠವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಜ್ಞಾನವು ಹವಳಕ್ಕಿಂತಲೂ ಸ್ಪಟಿಕಕ್ಕಿಂತಲೂ ಹೆಚ್ಚು ಬೆಲೆ ಬಾಳುತ್ತದೆ. ಜ್ಞಾನವು ಮಾಣಿಕ್ಯಕ್ಕಿಂತಲೂ ಅಮೂಲ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹವಳವೂ, ಸೂರ್ಯಕಾಂತ ಶಿಲೆಯೂ ಜ್ಞಾನಕ್ಕೆ ಹೋಲಿಸಲು ಅರ್ಹವಲ್ಲ; ಜ್ಞಾನದ ಬೆಲೆಯು ಮಾಣಿಕ್ಯಗಳಿಗಿಂತ ಎಷ್ಟೋ ಶ್ರೇಷ್ಠ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:18
13 ತಿಳಿವುಗಳ ಹೋಲಿಕೆ  

ಅದರ ಬೆಲೆಯು ಹವಳಕ್ಕಿಂತಲೂ ಹೆಚ್ಚು, ನಿನ್ನ ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ,


ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದದರಿಂದ ಅರಾವಿುನವರೂ ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಲು ರಕ್ತಾಂಬರ ಕಸೂತಿಯ ವಸ್ತ್ರ ನಾರುಬಟ್ಟೆ ಹವಳ ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.


ಆ ಪ್ರಜೆಯಲ್ಲಿನ ಮಹನೀಯರು ಹಿಮಕ್ಕಿಂತ ಶುಭ್ರವಾಗಿಯೂ ಹಾಲಿಗಿಂತ ಬಿಳುಪಾಗಿಯೂ ಇದ್ದರು. ಅವರ ದೇಹದ ಬಣ್ಣವು ಹವಳವನ್ನು ಮೀರಿತ್ತು, ಅವರ ರೂಪವು ಇಂದ್ರನೀಲಮಣಿಯಷ್ಟು ಅಂದವಾಗಿತ್ತು.


ಗುಣವತಿಯಾದ ಸತಿಯು ಎಲ್ಲಿ ಸಿಕ್ಕಾಳು? ಆಕೆಯು ಹವಳಕ್ಕಿಂತಲೂ ಬಹು ಅಮೂಲ್ಯಳು.


ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು; ಒಂದೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಸ್ವಚ್ಫವಾದ ಗಾಜಿನಂತಿರುವ ಸೋಸಿದ ಬಂಗಾರವಾಗಿತ್ತು.


ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶಿಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ಜಂತದ ಸಾಮಾನು, ಬಹು ಬೆಲೆಯುಳ್ಳ ಮರ, ತಾಮ್ರ, ಕಬ್ಬಿಣ, ಚಂದ್ರಕಾಂತ ಶಿಲೆ ಇವುಗಳಿಂದ ಮಾಡಿದ ಸಕಲ ವಿಧವಾದ ಪಾತ್ರೆ,


ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಆ ಸ್ತ್ರೀಯು ಧೂಮ್ರವರ್ಣದ ವಸ್ತ್ರಗಳನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ರತ್ನ ಮುತ್ತು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅಸಹ್ಯವಾದವುಗಳಿಂದ ಅಂದರೆ ಅವಳ ಜಾರತ್ವ ಸಂಬಂಧವಾದ ಅಶುದ್ಧ ವಸ್ತುಗಳಿಂದ ತುಂಬಿತ್ತು.


ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ ಡಂಭವಿಲ್ಲದವರಾಗಿಯೂ ಇದ್ದು ಮರ್ಯಾದೆಗೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ.


ದೇವರ ವಸ್ತುವನ್ನು ನಾಯಿಗಳಿಗೆ ಹಾಕಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಚೆಲ್ಲಿದರೆ ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.


ಜ್ಞಾನವು ಹವಳಕ್ಕಿಂತಲೂ ಶ್ರೇಷ್ಠ, ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.


ಜ್ಞಾನವನ್ನು ಪಡೆಯುವವನು ಧನ್ಯನು, ವಿವೇಕವನ್ನು ಸಂಪಾದಿಸುವವನು ಭಾಗ್ಯವಂತನು.


ಹೊನ್ನು ಉಂಟು, ಹವಳದ ರಾಶಿ ಉಂಟು, ಆದರೆ ಜ್ಞಾನದ ತುಟಿಗಳೇ ಅಮೂಲ್ಯಾಭರಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು