Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:28 - ಕನ್ನಡ ಸತ್ಯವೇದವು J.V. (BSI)

28 ಆಮೇಲೆ ಮನುಷ್ಯರಿಗೆ - ಇಗೋ, ಕರ್ತನ ಭಯವೇ ಜ್ಞಾನವು ದುಷ್ಟತನವನ್ನು ಬಿಡುವದೇ ವಿವೇಕವು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಬಳಿಕ ಮಾನವನಿಗೆ ಇಂತೆಂದನು: ‘ಸರ್ವೇಶ್ವರನಲ್ಲಿ ಭಯಭಕ್ತಿ ಇಡುವುದೇ ಸುಜ್ಞಾನ ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಇದಲ್ಲದೆ ದೇವರು ಮನುಷ್ಯರಿಗೆ, ‘ಯೆಹೋವನಲ್ಲಿ ಭಯಭಕ್ತಿಯಿಂದಿರುವುದೇ ಜ್ಞಾನ; ದುಷ್ಟತನವನ್ನು ತೊರೆದುಬಿಡುವುದೇ ವಿವೇಕ’ ಎಂದು ಹೇಳಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ದೇವರು ಮನುಷ್ಯನಿಗೆ, “ಇಗೋ, ಕರ್ತ ದೇವರಲ್ಲಿ ಭಯಭಕ್ತಿ ಇಡುವುದೇ ಜ್ಞಾನ! ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:28
25 ತಿಳಿವುಗಳ ಹೋಲಿಕೆ  

ಯೆಹೋವನ ಭಯವೇ ಜ್ಞಾನಕ್ಕೆ ಮೂಲವು; ಆತನ ಕಟ್ಟಳೆಗಳನ್ನು ನಡಿಸುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.


ಯೆಹೋವನ ಭಯವೇ ತಿಳುವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆ ಮಾಡುವರು.


ಯೆಹೋವನ ಭಯವೇ ಜ್ಞಾನಕ್ಕೆ ಮೂಲವು, ಪರಿಶುದ್ಧನ ತಿಳುವಳಿಕೆಯೇ ವಿವೇಕವು.


ನೀನೇ ಬುದ್ಧಿವಂತನು ಎಂದೆಣಿಸದೆ ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.


ವಿಷಯವು ತೀರಿತು; ಎಲ್ಲವೂ ಕೇಳಿ ಮುಗಿಯಿತು; ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು; ಮನುಷ್ಯರೆಲ್ಲರ [ಕರ್ತವ್ಯವು] ಇದೇ.


ಇವುಗಳನ್ನು ಕೈಕೊಂಡು ಅನುಸರಿಸಿರಿ. ಅನುಸರಿಸಿದರೇ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ - ಈ ದೊಡ್ಡ ಜನಾಂಗವು ಜ್ಞಾನ ವಿವೇಕವುಳ್ಳ ಜನಾಂಗ ಎಂದು ಮಾತಾಡಿಕೊಳ್ಳುವರು.


ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು; ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.


ಸತ್ಯವಂತನ ರಾಜಮಾರ್ಗ ಹಾನಿಗೆ ದೂರ; ತನ್ನ ನಡತೆಯನ್ನು ಗಮನಿಸುವವನು ತನ್ನ ಆತ್ಮವನ್ನು ಕಾಯುವನು.


ಜ್ಞಾನಿಯ ಬೋಧೆ ಜೀವದ ಬುಗ್ಗೆ; ಅದನ್ನಾಲಿಸುವವನು ಮೃತ್ಯುಪಾಶದಿಂದ ತಪ್ಪಿಸಿಕೊಳ್ಳುವನು.


ರಹಸ್ಯವಾದವುಗಳು ನಮ್ಮ ದೇವರಾದ ಯೆಹೋವನವು; ಆದರೆ ಆತನಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ - ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕಂತಲೂ ಲಿಪಿಯುಂಟು.


ನಿಮ್ಮನ್ನು ತೊಳೆದುಕೊಳ್ಳಿರಿ, ಶುದ್ಧಿಮಾಡಿಕೊಳ್ಳಿರಿ, ನನ್ನ ಕಣ್ಣೆದುರಿನ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿರಿ;


ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೇದನ್ನು ಮಾಡಲಿ; ಸಮಾಧಾನವನ್ನು ಹಾರೈಸಿ ಅದಕ್ಕೋಸ್ಕರ ಪ್ರಯತ್ನಪಡಲಿ.


ಅಹಾಬನು ತನ್ನ ಉಗ್ರಾಣಿಕನಾದ ಓಬದ್ಯ ಎಂಬವನನ್ನು ಕರೇಕಳುಹಿಸಿದನು.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದನು.


ಜ್ಞಾನವಾದರೋ ಎಲ್ಲಿ ಸಿಕ್ಕೀತು? ವಿವೇಕವು ದೊರೆಯುವ ಸ್ಥಳವೆಲ್ಲಿ?


ಹೀಗಿರಲು ಜ್ಞಾನವು ಎಲ್ಲಿಂದ ಬರುವದು, ವಿವೇಕವು ಯಾವ ಸ್ಥಳದಲ್ಲಿ ದೊರಕೀತು?


ಜ್ಞಾನವನ್ನು ಕಂಡು ಲಕ್ಷಿಸಿದನು, ಅದನ್ನು ಸ್ಥಾಪಿಸಿದ್ದಲ್ಲದೆ ವಿಮರ್ಶೆ ಮಾಡಿದನು.


ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು; ಜ್ಞಾನಹೀನನು ಸೊಕ್ಕೇರಿ ಭಯವನ್ನು ಲಕ್ಷಿಸನು.


ಜನಾಂಗಗಳನ್ನು ಶಿಕ್ಷಿಸುವವನೂ ಮನುಷ್ಯರಿಗೆ ಬುದ್ಧಿಕಲಿಸುವವನೂ ಗದರಿಸನೋ?


ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.


ಕೃಪಾಸತ್ಯತೆಗಳಿಂದ ಪಾಪನಿವಾರಣೆ; ಯೆಹೋವನ ಭಯಭಕ್ತಿಯಿಂದ ಹಾನಿ ನಿವಾರಣೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು