Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:14 - ಕನ್ನಡ ಸತ್ಯವೇದವು J.V. (BSI)

14 ಭೂಲೋಕದಲ್ಲಿ ಹಾಳುಬಿದ್ದ ಪಟ್ಟಣಗಳನ್ನು ತಮಗಾಗಿ ಕಟ್ಟಿಸಿಕೊಂಡ ಅರಸರೊಂದಿಗೂ ಮಂತ್ರಿಗಳೊಡನೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಭೂಲೋಕದಲ್ಲಿ ಹಾಳುಬಿದ್ದ ಪಟ್ಟಣಗಳನ್ನು ತಮ್ಮ ಸಮಾಧಿಗಾಗಿ ಕಟ್ಟಿಸಿಕೊಂಡ ಅರಸರೊಂದಿಗೂ, ಮಂತ್ರಿಗಳೊಡನೆಯೂ ನಾನಿರುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಪಾಳು ಪೊಡವಿಯಲ್ಲಿ ನೆಲಮಾಳಿಗೆಗಳನ್ನು ನಿರ್ಮಿಸಿಕೊಂಡಿದ್ದ ರಾಜ-ಮಂತ್ರಿಗಳೊಡನೆ ನಾನಿರುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಭೂರಾಜರೊಂದಿಗೂ ಮಂತ್ರಿಗಳೊಂದಿಗೂ ವಿಶ್ರಮಿಸಿಕೊಳ್ಳುತ್ತಿದ್ದೆನು. ಅವರು ತಮಗಾಗಿ ಕಟ್ಟಿಸಿಕೊಂಡ ಪಟ್ಟಣಗಳು ಈಗ ಹಾಳುಬಿದ್ದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಭೂಲೋಕದಲ್ಲಿ ಹಾಳುಬಿದ್ದ ಪಟ್ಟಣಗಳನ್ನು ತಮಗಾಗಿ ಕಟ್ಟಿಸಿಕೊಂಡ ರಾಜರೊಂದಿಗೂ ಮಂತ್ರಿಗಳೊಡನೆಯೂ ನಾನಿರುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:14
17 ತಿಳಿವುಗಳ ಹೋಲಿಕೆ  

ಅವನು ಹಾಳು ಪಟ್ಟಣಗಳಲ್ಲಿ ಸೇರಿಕೊಂಡು ದಿಬ್ಬಗಳಾಗಿ ಹೋಗಲಿ ಯಾರೂ ವಾಸಿಸದಿರಲಿ ಎಂದು ಶಾಪಹೊಂದಿದ ಮನೆಗಳೊಳಗೆ ವಾಸವಾಗಿದ್ದನು.


ಪುರಾತನಕಾಲದಲ್ಲಿ ಹಾಳಾದ ಪಟ್ಟಣಗಳಂತೆ ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ ನಿರ್ನಿವಾಸಿಯಾಗುವಂತೆ ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲಿ ಸೇರಿಸುವೆನು.


ನಿಮ್ಮ ಸಂತಾನದವರು ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ತಿರಿಗಿ ಕಟ್ಟುವರು. ನೀವು ತಲತಲಾಂತರಗಳಿಂದ ಪಾಳುಬಿದ್ದಿರುವ ಅಸ್ತಿವಾರಗಳ ಮೇಲೆ ಕಟ್ಟಡಗಳನ್ನು ಎಬ್ಬಿಸುವಿರಿ; ಬಿದ್ದ ಗೋಡೆಯನ್ನು ಹಾಕುವ ಜನಾಂಗ, ಹಾದಿಗಳನ್ನು ತಿರುಗಾಡುವ ಸ್ಥಿತಿಗೆ ತರುವ ಜನಾಂಗ, ಎಂಬೀ ಬಿರುದುಗಳು ನಿಮಗುಂಟಾಗುವವು.


ಅಯ್ಯೋ, ಮನೆಗೆ ಮನೆಯನ್ನೂ ಹೊಲಕ್ಕೆ ಹೊಲವನ್ನೂ ಸೇರಿಸಿಕೊಳ್ಳುತ್ತಾ ಬಂದು ಇತರರಿಗೆ ಸ್ವಲ್ಪ ಸ್ಥಳವನ್ನೂ ಬಿಡದೆ ದೇಶದ ಮಧ್ಯದಲ್ಲಿ ತಾವೇ ತಾವಾಗಿ ವಾಸಿಸುವವರ ಗತಿಯನ್ನು ಏನು ಹೇಳಲಿ!


ಗಾಳಿಯನ್ನು ತಡೆಯುವ ಶಕ್ತಿಯು ಹೇಗೆ ಯಾರಿಗೂ ಇಲ್ಲವೋ ಹಾಗೆ ತಮ್ಮ ಮರಣದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇಲ್ಲ; ಯುದ್ಧಕಾಲದಲ್ಲಿ ಹೇಗೆ ವಿರಾಮ ದೊರೆಯುವದಿಲ್ಲವೋ ಹಾಗೆ ಅಧರ್ಮಕ್ಕೊಳಪಟ್ಟವನಿಗೆ ಬಿಡುಗಡೆಯಿಲ್ಲ.


ತನ್ನನ್ನು ಪಾತಾಳಕ್ಕೆ ತಪ್ಪಿಸಿಕೊಂಡು ಮರಣಹೊಂದದೆ ಚಿರಂಜೀವಿಯಾಗಿರುವ ಮನುಷ್ಯನು ಯಾವನಿದ್ದಾನೆ? ಸೆಲಾ.


ಅವರು ಕುರಿಗಳಂತೆ ಪಾತಾಳದಲ್ಲಿ ದಟ್ಟವಾಗಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರಿಗೆ ನಿವಾಸವಿಲ್ಲದ ಹಾಗೆ ಪಾತಾಳವು ಅವರ ರೂಪವನ್ನು ನಾಶಮಾಡುವದು; ಉದಯಕಾಲದಲ್ಲಿ ಯಥಾರ್ಥರು ಅವರ ಮೇಲೆ ದೊರೆತನ ನಡಿಸುವರು.


ನೀನು ನನ್ನನ್ನು ಮರಣಕ್ಕೆ ಗುರಿಮಾಡಿ ಸಮಸ್ತಜೀವಿಗಳು ಹೋಗಬೇಕಾದ ಮನೆಗೆ ಸೇರಿಸುವಿಯೆಂದು ನನಗೆ ಗೊತ್ತೇ ಇದೆ.


ಮಂತ್ರಿಗಳನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ನ್ಯಾಯಾಧಿಪತಿಗಳನ್ನು ಹುಚ್ಚರನ್ನಾಗಿ ಮಾಡುವನು.


ಪಿತೃಗಳ ಬಳಿಗೆ ಸೇರಿದನು; ಅವನ ಶವವನ್ನು ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ರೆಹಬ್ಬಾಮನು ಅರಸನಾದನು.


ಅನಂತರ ದಾವೀದನು ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು.


ಅರಸರು ಹಾಕಿದ ಬಂಧನವನ್ನು ಬಿಚ್ಚಿಬಿಟ್ಟು ಅವರ ಸೊಂಟಕ್ಕೇ ಚಿಂದಿಯನ್ನು ಬಿಗಿಯುವನು.


ಜನಾಂಗಗಳ ಎಲ್ಲಾ ಅರಸರೂ, ಹೌದು, ಸಕಲ ರಾಜರೂ ತಮ್ಮ ತಮ್ಮ ಮನೆಗಳಲ್ಲಿ ವೈಭವದೊಡನೆ ದೀರ್ಘನಿದ್ರೆಮಾಡುತ್ತಾರೆ.


ಇಲ್ಲಿ ನಿನಗೇನು? ಇಲ್ಲಿ ನಿನಗೆ ಯಾರಿದ್ದಾರೆ? ಇಲ್ಲಿ ನಿನಗಾಗಿ ಗೋರಿಯನ್ನು ತೋಡಿಸಿಕೊಂಡಿದ್ದೀಯಾ? ಎತ್ತರದಲ್ಲಿ ನಿನಗೆ ಸಮಾಧಿಯನ್ನು ಕೊರೆಸುತ್ತಾ ಬಂಡೆಯನ್ನು ಕಡೆಯಿಸಿ ನಿನಗೆ ನಿವಾಸವನ್ನು ಮಾಡಿಸುತ್ತಾ ಇದ್ದೀಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು