Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:23 - ಕನ್ನಡ ಸತ್ಯವೇದವು J.V. (BSI)

23 ದೇವರಿಂದ ಬರುವ ವಿಪತ್ತಿಗೆ ಅಂಜಿಕೊಂಡಿದ್ದೆನಷ್ಟೆ, ಆತನ ಪ್ರಭಾವದ ದೆಸೆಯಿಂದ ನಾನು ಇಂಥ ಕೃತ್ಯವನ್ನು ಮಾಡುವದಕ್ಕಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ದೇವರಿಂದ ಬರುವ ವಿಪತ್ತಿಗೆ ಹೆದರಿಕೊಂಡಿದ್ದೆನಷ್ಟೆ, ಆತನ ಪ್ರಭಾವದ ದೆಸೆಯಿಂದ ನಾನು ಇಂಥ ಕೃತ್ಯವನ್ನು ಮಾಡುವುದಕ್ಕಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ದೇವರಿಂದ ಬರುವ ವಿಪತ್ತಿನ ಬಗ್ಗೆ ನನಗಿದೆ ಭಯ ಆತನ ಪ್ರಭಾವದ ನಿಮಿತ್ತ ಇಂಥ ಕೃತ್ಯ ನನಗೆ ದುಸ್ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಾನು ಆ ಕೆಟ್ಟಕಾರ್ಯಗಳಲ್ಲಿ ಯಾವುದನ್ನೂ ಮಾಡಲಿಲ್ಲ. ಯಾಕೆಂದರೆ ನಾನು ದೇವರ ಶಿಕ್ಷೆಗೆ ಹೆದರಿಕೊಂಡಿದ್ದೆ. ಆತನ ವೈಭವದ ಎದುರಿನಲ್ಲಿ ನಿಂತುಕೊಳ್ಳಲು ನನಗಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಏಕೆಂದರೆ ದೇವರಿಂದ ಬರುವ ವಿಪತ್ತಿನ ಬಗ್ಗೆ ನನಗೆ ಹೆದರಿಕೆಯಾಯಿತು; ದೇವರ ಪ್ರಭಾವದ ಭಯದ ನಿಮಿತ್ತ ನಾನು ಇಂಥ ಕೃತ್ಯವನ್ನು ಮಾಡುವುದಕ್ಕೆ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:23
15 ತಿಳಿವುಗಳ ಹೋಲಿಕೆ  

ನಿನ್ನ ಭಯದಿಂದ ನನ್ನ ಮಾಂಸವು ಕಂಪಿಸುತ್ತದೆ; ನಿನ್ನ ವಿಧಿಗಳಿಗೆ ಅಂಜಿಕೊಂಡಿದ್ದೇನೆ.


ಆತನ ಶ್ರೇಷ್ಠತೆಯು ನಿಮ್ಮನ್ನು ಹೆದರಿಸುವದಿಲ್ಲವೋ? ಆತನ ಭಯವು ನಿಮ್ಮ ಮೇಲೆ ಬೀಳುವದಿಲ್ಲವೋ?


ಕರ್ತನ ಭಯವು ನಮಗಿರುವದರಿಂದ ನಾವು ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಯಥಾರ್ಥರೆಂಬದು ದೇವರಿಗೆ ಗೊತ್ತುಂಟು; ನಿಮ್ಮ ಮನಸ್ಸಿಗೆ ಕೂಡ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.


ಯೆಹೋವನ ದಿನವು ಸಮೀಪಿಸಿತು; ಅಯ್ಯೋ, ದಿನವೇ! ಅದು ಸರ್ವಶಕ್ತನಿಂದ ನಾಶನದಿನವಾಗಿಯೇ ಬರುವದು.


ಅರಚಿಕೊಳ್ಳಿರಿ, ಯೆಹೋವನ ದಿನವು ಸಮೀಪವಾಯಿತು; ಅದು ಸರ್ವಶಕ್ತನಿಂದ ನಾಶರೂಪವಾಗಿ ಬರುವದು.


ನೀನು ಮಹಾಭಯಂಕರನು; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?


ನಿನ್ನ ಕೈಯೂ ದೇವರ ಕೈಯೂ ಸಮವೋ? ದೇವರ ಧ್ವನಿಯಂತೆ ಗುಡುಗಬಲ್ಲಿಯಾ?


ಅವನು ತನ್ನ ನಾಶವನ್ನು ಕಣ್ಣಾರೆ ಕಾಣಲಿ, ಸರ್ವಶಕ್ತನ ರೌದ್ರರಸವನ್ನು ಪಾನಮಾಡಲಿ.


ಅವನ ಹೊಟ್ಟೆ ತುಂಬುವದು, ಹೌದು, ದೇವರು ತನ್ನ ಕೋಪಾಗ್ನಿಯನ್ನು ಕಳುಹಿಸಿ ಅದನ್ನೇ ಆಹಾರವನ್ನಾಗಿ ಅವನ ಮೇಲೆ ಸುರಿಸುವನು.


ಈ ಮನೆಯಲ್ಲಿ ಅವನೂ ನನಗಿಂತ ದೊಡ್ಡವನಲ್ಲ; ನೀನು ಅವನ ಧರ್ಮಪತ್ನಿಯಾದದರಿಂದ ನಿನ್ನನ್ನು ಮಾತ್ರ ನನಗೆ ಅಧೀನಮಾಡಲಿಲ್ಲ; ಹೀಗಿರುವಲ್ಲಿ ನಾನು ಇಂಥಾ ಮಹಾದುಷ್ಕೃತ್ಯವನ್ನು ನಡಿಸಿ ದೇವರಿಗೆ ವಿರುದ್ಧವಾಗಿ ಹೇಗೆ ಪಾಪಮಾಡಲಿ ಎಂದು ತನ್ನ ದಣಿಯ ಹೆಂಡತಿಗೆ ಉತ್ತರಕೊಟ್ಟನು.


ನನಗಿಂತ ಮುಂಚೆಯಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ [ದಿನಕ್ಕೆ] ನಾಲ್ವತ್ತು ರೂಪಾಯಿಯ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡಿಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವದರಿಂದ ಹಾಗೆ ಮಾಡದೆ ಆ ಗೋಡೆ ಕಟ್ಟುವದರಲ್ಲಿ ನಿರತನಾಗಿದ್ದೆನು.


ಅಪಾಯಗಳು ನನ್ನ ಮೇಲೆ ತಿರುಗಿಬಿದ್ದು ನನ್ನ ಮಾನವನ್ನು ಗಾಳಿಯಂತೆ ಹೊಡೆದುಕೊಂಡು ಹೋಗುತ್ತಿವೆ; ನನ್ನ ಕ್ಷೇಮವು ಮೇಘದ ಹಾಗೆ ಹರಿದು ಹೋಯಿತು.


ಆತನು ಅನ್ಯಾಯಗಾರರಿಗೆ ವಿಪತ್ತನ್ನೂ ಕೆಡುಕರಿಗೆ ಉಪದ್ರವವನ್ನೂ ಕೊಡುವನಲ್ಲವೆ.


ಯೌವನಾರಭ್ಯ ಕುಗ್ಗಿದವನೂ ಮೃತಪ್ರಾಯನೂ ನಿನ್ನ ಗದರಿಕೆಯಿಂದ ದೆಸೆಗೆಟ್ಟವನೂ ಆಗಿದ್ದೇನಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು