Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:34 - ಕನ್ನಡ ಸತ್ಯವೇದವು J.V. (BSI)

34 ನಾನು ಬಾಗಲು ದಾಟದೆ ಮೌನವಾಗಿದ್ದು ಸಾಮಾನ್ಯ ಜನರ ಹಾಗೆ ನನ್ನ ದ್ರೋಹಗಳನ್ನು ಮರೆಮಾಜಿ ಎದೆಯಲ್ಲಿ ನನ್ನ ಪಾಪವನ್ನು ಬಚ್ಚಿಟ್ಟುಕೊಂಡಿದ್ದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನಾನು ಬಾಗಿಲು ದಾಟದೆ ಮೌನವಾಗಿದ್ದು, ಸಾಮಾನ್ಯ ಜನರ ಹಾಗೆ ನನ್ನ ದ್ರೋಹಗಳನ್ನು ಮರೆಮಾಡಿ, ಎದೆಯಲ್ಲಿ ನನ್ನ ಪಾಪವನ್ನು ಬಚ್ಚಿಟ್ಟುಕೊಂಡಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಬಾಗಿಲನ್ನೂ ದಾಟದೆ ಒಳಗೇ ನಾನು ಮೌನವಿದ್ದಿದ್ದರೆ ಜನಸಾಮಾನ್ಯರಂತೆ ಪಾಪವನು ಮನದಲೆ ಬಚ್ಚಿಟ್ಟಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಜನರ ಮಾತಿಗೆ ನಾನೆಂದೂ ಭಯಗೊಂಡಿರಲಿಲ್ಲ; ಯಾವ ಕುಟುಂಬದ ಅಸಮ್ಮತಿಗೂ ನಾನೆಂದೂ ಹೆದರಿಕೊಂಡಿರಲಿಲ್ಲ; ಅಂಥ ಯಾವ ಭಯವೂ ನನ್ನನ್ನು ಮೌನಗೊಳಿಸಿ ಮನೆಯೊಳಗಿರಿಸಲಿಲ್ಲ. ಯಾಕೆಂದರೆ ನನ್ನ ಮೇಲೆ ಜನರಿಗಿರುವ ದ್ವೇಷಕ್ಕೆ ನಾನು ಹೆದರಿಕೊಂಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ನಾನು ದೊಡ್ಡ ಸಮೂಹಕ್ಕೆ ಹೆದರಿದೆನೋ? ಕುಲಗಳ ಅವಹೇಳನಕ್ಕೆ ಕಳವಳಗೊಂಡರೂ, ಬಾಗಿಲಿನಿಂದ ಹೊರಗೆ ಹೋಗದೆ ಮೌನವಾಗಿದ್ದೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:34
20 ತಿಳಿವುಗಳ ಹೋಲಿಕೆ  

ದುಷ್ಕಾರ್ಯವನ್ನು ಮಾಡುವವರು ಬಹು ಮಂದಿ ಆದಾಗ್ಯೂ ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.


ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ತಿಳುಕೊಳ್ಳುವದಿಲ್ಲ.


ಕೆಟ್ಟ ಕೆಲಸಕ್ಕೆ ಎರಡು ಕೈಗಳನ್ನು ಹಾಕಿ ಚೆನ್ನಾಗಿ ಮಾಡುತ್ತಾರೆ; ಪ್ರಭುವು [ಧನವನ್ನು] ಕೇಳುತ್ತಾನೆ, ನ್ಯಾಯಾಧಿಪತಿಯು ಲಂಚಕ್ಕೆ [ಕೈಯೊಡ್ಡುತ್ತಾನೆ], ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ; ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.


ಇದನ್ನು ಕೇಳಿ ಅರಸನಾದ ಚಿದ್ಕೀಯನು ಯೆರೆಮೀಯನಿಗೆ - ಕಸ್ದೀಯರು ತಮ್ಮನ್ನು ಮರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸುವರೋ ಏನೋ; ಅವರು ನನ್ನನ್ನು ಹಿಂಸಿಸಿಯಾರು ಎಂದು ಶಂಕೆಪಡುತ್ತೇನೆ ಎಂದುತ್ತರಕೊಡಲು


ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ - ಈ ಪ್ರಾಣವನ್ನು ನಮಗೆ ದಯಪಾಲಿಸಿದ ಯೆಹೋವನ ಜೀವದಾಣೆ, ನಾನು ನಿನ್ನನ್ನು ಸಾಯಿಸೆನು, ನಿನ್ನ ಪ್ರಾಣವನ್ನು ಹುಡುಕುವ ಇವರ ಕೈಗೂ ನಿನ್ನನ್ನು ಸಿಕ್ಕಿಸೆನು ಎಂದು ರಹಸ್ಯವಾಗಿ ಪ್ರಮಾಣಮಾಡಲು


ಮನುಷ್ಯನ ಭಯ ಉರುಲು; ಯೆಹೋವನ ಭರವಸ ಉದ್ಧಾರ.


ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.


ಬಲಿಷ್ಟನಾದರೆ ದೇಶವೇ ಅವನದು, ಅಲ್ಲಿ ಸನ್ಮಾನಯೋಗ್ಯನಾಗಿ ವಾಸಿಸತಕ್ಕವನು ಅವನೇ.


ನೀನು ಈಗ ಸುಮ್ಮನಿದ್ದು ಬಿಟ್ಟರೆ ಬೇರೆ ಕಡೆಯಿಂದ ಯೆಹೂದ್ಯರಿಗೆ ಸಹಾಯವೂ ವಿಮೋಚನೆಯೂ ಉಂಟಾದಾವು; ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗುವಿ. ಇದಲ್ಲದೆ ನೀನು ಇಂಥ ಸಂದರ್ಭಕ್ಕಾಗಿಯೇ ಪಟ್ಟಕ್ಕೆ ಬಂದಿರಬಹುದು, ಯಾರು ಬಲ್ಲರು ಎಂದು ಹೇಳಿ ಕಳುಹಿಸಿದನು.


ಅರಸನು ಕರಿಸಿದರೆ ಹೊರತು ಅವನ ಬಳಿಗೆ ಒಳಗಣ ಪ್ರಾಕಾರಕ್ಕೆ ಹೋಗುವವರು ಮರಣದಂಡನೆಗೆ ಪಾತ್ರರಾಗುವರು ಎಂಬ ಒಂದೇ ನಿಯಮವು ಎಲ್ಲಾ ಸ್ತ್ರೀ ಪುರುಷರಿಗುಂಟು; ಯಾರ ಕಡೆಗೆ ಅವನು ತನ್ನ ಸುವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರೆಂಬದು ಅರಸನ ಎಲ್ಲಾ ಸೇವಕರಿಗೂ ಸಂಸ್ಥಾನಗಳ ಎಲ್ಲಾ ಜನರಿಗೂ ಗೊತ್ತುಂಟಲ್ಲಾ; ನನಗಂತೂ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವದಕ್ಕೆ ಆಮಂತ್ರಣವಾಗಲಿಲ್ಲ ಎಂದು ಹೇಳಿಸಿದಳು.


ಮಹಾಯಾಜಕ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲೊಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದದರಿಂದ ಅವನನ್ನು ನನ್ನ ಸನ್ನಿಧಿಯಿಂದ ಓಡಿಸಿಬಿಟ್ಟೆನು.


ನಾನು ತುಸು ಆಲೋಚಿಸಿಕೊಂಡು ಶ್ರೀಮಂತರಿಗೂ ಅಧಿಕಾರಿಗಳಿಗೂ - ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವದೆಂದರೇನು ಎಂದು ಹೇಳಿ ಅವರೊಡನೆ ಬಹಳವಾಗಿ ಹೆಣಗಾಡಿ ಅವರಿಗೆ ವಿರೋಧವಾಗಿ ಮಹಾಸಭೆಯನ್ನು ಕೂಡಿಸಿ -


ಮೋಶೆ ಅವರಿಗೆ - ಇಸ್ರಾಯೇಲ್ಯರ ದೇವರಾದ ಯೆಹೋವನು ಅಪ್ಪಣೆಮಾಡುವದೇನಂದರೆ - ನಿಮ್ಮಲ್ಲಿ ಪ್ರತಿಯೊಬ್ಬನು ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ಮಧ್ಯದಲ್ಲಿ ಒಂದು ಬಾಗಲಿನಿಂದ ಮತ್ತೊಂದು ಬಾಗಲಿನವರೆಗೂ ಹೋಗುತ್ತಾ ಬರುತ್ತಾ ಅಣ್ಣ ತಮ್ಮ ಗೆಳೆಯ ನೆರೆಯವ ಎಂದು ಲಕ್ಷಿಸದೆ ಜನರನ್ನು ಸಂಹರಿಸಬೇಕು ಎಂದು ಹೇಳಿದನು.


[ಯೆರೂಸಲೇವಿುಗೆ ಬಂದ ಆ ಅಶ್ಶೂರ್ಯರು] ಗೋಡೆಯ ಮೇಲಿದ್ದ ಜನರನ್ನು ಬೆದರಿಸಿ ಅಂಜಿಸಿ ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವದಕ್ಕಾಗಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು