Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:6 - ಕನ್ನಡ ಸತ್ಯವೇದವು J.V. (BSI)

6 ನೋಡು, ನಾನೂ ಜೇಡಿಮಣ್ಣಿನಿಂದ ರೂಪಿಸಲ್ಪಟ್ಟು ದೇವರ ದೃಷ್ಟಿಯಲ್ಲಿ ನಿನ್ನ ಹಾಗೆಯೇ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೋಡು, ನಾನು ದೇವರ ದೃಷ್ಟಿಯಲ್ಲಿ ನಿನ್ನ ಹಾಗೆಯೇ ಇದ್ದೇನೆ. ನಾನೂ ಜೇಡಿಮಣ್ಣಿನಿಂದ ರೂಪಿಸಲ್ಪಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೋಡು, ನಾನು ಕೂಡ ಜೇಡಿಮಣ್ಣಿನಿಂದ ರೂಪಿತನು ದೇವರ ದೃಷ್ಟಿಯಲ್ಲಿ ನಿನ್ನ ಹಾಗೆಯೇ ಇರುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀನು ಮತ್ತು ನಾನು ದೇವರ ಎದುರಿನಲ್ಲಿ ಒಂದೇ ರೀತಿಯಲ್ಲಿದ್ದೇವೆ. ದೇವರು ನಮ್ಮಿಬ್ಬರನ್ನು ಮಣ್ಣಿನಿಂದ ನಿರ್ಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೋಡು, ದೇವರ ದೃಷ್ಟಿಯಲ್ಲಿ ನಾನು ನಿನ್ನಂತೆಯೇ ಇದ್ದೇನೆ; ನಾನು ಸಹ ಜೇಡಿಮಣ್ಣಿನಿಂದ ರೂಪಿತವಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:6
15 ತಿಳಿವುಗಳ ಹೋಲಿಕೆ  

ದೂಳಿನಲ್ಲಿರುವ ಅಸ್ತಿವಾರದ ಮೇಲೆ ಮಣ್ಣಿನಿಂದಾದ [ಶರೀರಗಳೆಂಬ] ಮನೆಗಳೊಳಗೆ ವಾಸಿಸುವವರಲ್ಲಿ ಇನ್ನೆಷ್ಟೋ ಹೆಚ್ಚಾಗಿ ತಪ್ಪುಕಂಡುಹಿಡಿಯಬೇಕಲ್ಲವೇ. ಅವರು ದೀಪದ ಹುಳದಂತೆ ಅಳಿದು ಹೋಗುತ್ತಾರೆ.


ನಾವು ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ಬುದ್ಧಿ ಹೇಳುವ ಹಾಗಾಯಿತು. ದೇವರೊಂದಿಗೆ ಸಮಾಧಾನವಾಗಿರೆಂದು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇವೆ.


ಭೂವಿುಯ ಮೇಲಿರುವ ನಮ್ಮ ಮನೆಯು ಅಂದರೆ ನಮ್ಮ ದೇಹವೆಂಬ ಗುಡಾರವು ಕಿತ್ತುಹಾಕಲ್ಪಟ್ಟರೂ ದೇವರಿಂದುಂಟಾದ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು. ಅದು ಕೈಯಿಂದ ಕಟ್ಟಿದ ಮನೆಯಾಗಿರದೆ ನಿತ್ಯವಾಗಿರುವಂಥದಾಗಿದೆ.


ಅಯ್ಯೋ, ನನ್ನ ಕಡೆಗೆ ಕಿವಿಗೊಡತಕ್ಕವನು ಇದ್ದರೆ ಎಷ್ಟೋ ಲೇಸು! ಇದೇ ನನ್ನ ಕೈಗುರುತು, ನೋಡಿರಿ, ಸರ್ವಶಕ್ತನು ನನಗೆ ಉತ್ತರಕೊಡಲಿ! ನನ್ನ ವಿರೋಧಿಯು ಬರೆದುಕೊಂಡ ಆಪಾದನಪತ್ರವು ನನಗೆ ಸಿಕ್ಕಿದರೆ ಎಷ್ಟೋ ಸಂತೋಷ!


ಸಮೃದ್ಧಿಯು ತುಂಬಿರುವಾಗಲೇ ಅವನಿಗೆ ಇಕ್ಕಟ್ಟಾಗುವದು. ಶ್ರಮೆಯನ್ನನುಭವಿಸುವ ಪ್ರತಿಯೊಬ್ಬನ ಕೈ ಅವನ ಮೇಲೆ ಬೀಳುವದು.


ನಿಮ್ಮ ಸ್ಮೃತಿಗಳು ಬೂದಿಯ ಸಾಮತಿಗಳು; ನಿಮ್ಮ ಕೋಟೆಯು ಬರೀ ಮಣ್ಣಿನದೇ.


ನೀನು ನನ್ನನ್ನು ಜೇಡಿಮಣ್ಣಿನಿಂದಲೋ ಎಂಬಂತೆ ರೂಪಿಸಿದ್ದೀಯೆಂದು ಕೃಪೆಮಾಡಿ ನೆನಸಿಕೋ. ನನ್ನನ್ನು ತಿರಿಗಿ ಮಣ್ಣಾಗುವಂತೆ ಮಾಡುವಿಯಾ?


ಅವನೇ ನಿನಗೋಸ್ಕರ ಜನರ ಸಂಗಡ ಮಾತಾಡುವನು. ಅವನು ನಿನಗೆ ಬಾಯಂತಿರುವನು; ನೀನು ಅವನಿಗೆ ದೇವರಂತಿರುವಿ.


ಅವನು ಆಕೆಯ ಮೇಲೆ ಕೋಪಗೊಂಡು - ದೇವರು ನಿನಗೆ ಮಕ್ಕಳನ್ನು ಕೊಡದೆಹೋದ ಮೇಲೆ ಕೊಡಲಿಕ್ಕೆ ನನ್ನಿಂದಾದೀತೋ ಅಂದನು.


ನೀನು ತಿರಿಗಿ ಮಣ್ಣಿಗೆ ಸೇರುವತನಕ ಬೆವರಿಡುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಲ್ಲವೋ; ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ ಎಂದು ಹೇಳಿದನು.


ಹೀಗಿರಲು ಯೆಹೋವದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು; ಆಗ ಮನುಷ್ಯನು ಬದುಕುವ ಪ್ರಾಣಿಯಾದನು.


ಆದರೆ ನಾನು ಸರ್ವಶಕ್ತನ ಸಂಗಡ ಮಾತಾಡಬೇಕು, ದೇವರೊಂದಿಗೆ ವಾದಿಸಲು ಅಪೇಕ್ಷಿಸುತ್ತೇನೆ.


ಬಲಾಧಿಕ್ಯವು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂದು ತೋರುವದಕ್ಕಾಗಿ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು