Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:29 - ಕನ್ನಡ ಸತ್ಯವೇದವು J.V. (BSI)

29 ಆತನು ನೆಮ್ಮದಿಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು? ವಿಮುಖನಾದರೆ ಆತನ ದರ್ಶನ ಮಾಡುವವರಾರು? ಆತನು ಜನಾಂಗಕ್ಕಾಗಲಿ ಮನುಷ್ಯನಿಗಾಗಲಿ ಮಾಡುವದೆಲ್ಲಾ ಹೀಗೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆತನು ನೆಮ್ಮದಿಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು? ವಿಮುಖನಾದರೆ ಆತನ ದರ್ಶನ ಮಾಡುವವರಾರು? ಆತನು ಜನಾಂಗಕ್ಕಾಗಲಿ, ಮನುಷ್ಯನಿಗಾಗಲಿ ಮಾಡುವುದೆಲ್ಲಾ ಹೀಗೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ವ್ಯಕ್ತಿಯಾಗಿರಲಿ, ರಾಷ್ಟ್ರವಾಗಿರಲಿ, ಯಾರಾಗಿದ್ದರೇನು? ದೇವರು ಸುಮ್ಮನಿದ್ದರೆ ತಪ್ಪುಹೊರಿಸುವವರಾರು? ವಿಮುಖನಾದರೆ ಆತನ ದರ್ಶನ ಪಡೆಯಬಲ್ಲವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆದರೆ ದೇವರು ಬಡಜನರಿಗೆ ಸಹಾಯಮಾಡದಿರಲು ನಿರ್ಧರಿಸಿದರೆ, ಆತನನ್ನು ದೋಷಿಯೆಂದು ತೀರ್ಪುಮಾಡುವವನು ಯಾರು? ದೇವರು ತನ್ನ ಮುಖವನ್ನು ಅವರಿಗೆ ಮರೆಮಾಡಿಕೊಂಡರೆ ಆತನನ್ನು ನೋಡಬಲ್ಲವರು ಯಾರು? ಮನುಷ್ಯರನ್ನೂ ಜನಾಂಗಗಳನ್ನೂ ಆಳುವವನು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆದರೆ ದೇವರು ಸುಮ್ಮನಿದ್ದರೆ ಅವರ ಮೇಲೆ, ತಪ್ಪುಹೊರಿಸುವವರು ಯಾರು? ದೇವರು ತಮ್ಮ ಮುಖವನ್ನು ವ್ಯಕ್ತಿಗಾಗಲಿ, ದೇಶಕ್ಕಾಗಲಿ ಮರೆಮಾಡಿದರೆ, ದೇವದರ್ಶನ ಪಡೆಯಬಲ್ಲವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:29
26 ತಿಳಿವುಗಳ ಹೋಲಿಕೆ  

ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.


ಆತನಂತು ಒಂದೇ ಮನಸ್ಸುಳ್ಳವನಾಗಿದ್ದಾನೆ, ತಿರುಗಿಸಬಲ್ಲವರು ಯಾರು? ತಾನು ಬಯಸಿದ್ದನ್ನೇ ಮಾಡುತ್ತಾನೆ.


ಶಾಂತಿಯನ್ನು ನಿಮಗೆ ಬಿಟ್ಟುಹೋಗುತ್ತೇನೆ, ನನ್ನಲ್ಲಿರುವಂಥ ಶಾಂತಿಯನ್ನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಿಂದ ನಾನು ನಿಮಗೆ ಕೊಡುವದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.


ಧರ್ಮದಿಂದ ಸಮಾಧಾನವು ಫಲಿಸುವದು, ಶಾಂತಿ ನಿರ್ಭಯಗಳು ಧರ್ಮದ ನಿತ್ಯಪರಿಣಾಮವಾಗಿರುವವು.


ನನಗೆ ವಿಮುಖನಾಗಿರಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ. ನೀನೇ ನನಗೆ ಸಹಾಯಕನಾಗಿದ್ದೆಯಲ್ಲವೇ; ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದು ಬಿಡಬೇಡ.


ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವಶಾಂತಿಯು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವದು.


ಯಾವ ಜನಾಂಗ, ಯಾವ ರಾಜ್ಯ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲಿಕ್ಕೂ ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಡಲಿಕ್ಕೂ ಒಪ್ಪದೋ ಆ ಜನಾಂಗವನ್ನು ನಾನು ಖಡ್ಗ ಕ್ಷಾಮವ್ಯಾಧಿಗಳಿಂದ ದಂಡಿಸುತ್ತಾ ಬಂದು ಕಡೆಯಲ್ಲಿ ಅವನ ಕೈಯಿಂದಲೇ ನಿರ್ಮೂಲ ಮಾಡಿಸುವೆನು. ಇದು ಯೆಹೋವನ ನುಡಿ.


ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು; ನನ್ನ ಆತ್ಮವು ಕುಂದಿಹೋಗಿದೆ. ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು.


ಯೆಹೋವನೇ, ಕೃಪೆಮಾಡಿ ನಾನಿರುವ ಬೆಟ್ಟಕ್ಕೆ ಸ್ಥಿರವಾದ ಬಲವನ್ನು ಅನುಗ್ರಹಿಸಿದಿಯಲ್ಲಾ. ಆದರೂ ನೀನು ನಿನ್ನ ಮುಖವನ್ನು ಮರೆಮಾಡಿಕೊಂಡಾಗ ನಾನು ಕಳವಳಗೊಂಡು


ಯೆಹೋವನೇ, ನೀನು ಇನ್ನೆಷ್ಟರವರೆಗೆ ನನ್ನನ್ನು ಸಂಪೂರ್ಣವಾಗಿ ಮರೆತಿರುವಿ? ಇನ್ನೆಲ್ಲಿಯ ತನಕ ನನಗೆ ವಿಮುಖನಾಗಿರುವಿ?


ಇಗೋ, ಯಾರೂ ಕಟ್ಟದಹಾಗೆ ಕೆಡವಿಬಿಡುವನು, ಯಾರೂ ಬಿಡಿಸದಂತೆ ಸೆರೆಹಾಕುವನು.


ಯೆಹೋವನ ಅನುಗ್ರಹದಿಂದ ಸುತ್ತಣ ವೈರಿಗಳ ಭಯವೆಲ್ಲಾ ತಪ್ಪಿಹೋಗಿ ಅರಸನು ಅರಮನೆಯಲ್ಲಿ ಸಮಾಧಾನದಿಂದ ವಾಸಿಸುತ್ತಿದ್ದಾಗ


ಹೀಗೆ ಬಡವರ ಗೋಳಾಟವು ದೇವರಿಗೆ ಮುಟ್ಟುವಂತೆ ಮಾಡಿದ್ದರು, ಆತನು ದಿಕ್ಕಿಲ್ಲದವರ ಮೊರೆಯನ್ನು ಆಲೈಸಿದ್ದನು.


ಭ್ರಷ್ಟನು ಆಳಬಾರದು, ಯಾರೂ ಜನರಿಗೆ ಉರುಲಾಗಕೂಡದು ಎಂಬದೇ ಆತನ ಉದ್ದೇಶ.


ಅಂಥವನನ್ನು, ದುಷ್ಟನಿಗೋಸ್ಕರ ಗುಂಡಿಯು ಅಗೆಯಲ್ಪಡುವ ತನಕ, ಆಪತ್ತಿನಲ್ಲಿಯೂ ಸಮಾಧಾನಪಡಿಸುತ್ತೀ.


ಅದಕ್ಕೆ ಯೆಹೋವನು - ನಾನೇ ನಿಮ್ಮ ಜೊತೆಯಲ್ಲಿ ಬಂದು ನಿಮಗೆ ವಿಶ್ರಾಂತಿಯನ್ನು ಉಂಟುಮಾಡುವೆನು ಅಂದನು.


ಪೂರ್ವಕಾಲದಲ್ಲೂ ನಾನು ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ನೇವಿುಸಿದ ನ್ಯಾಯಸ್ಥಾಪಕರ ಕಾಲದಿಂದೀಚೆಗೂ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಕುಗ್ಗಿಸುವದಿಲ್ಲ. ನೀನು ಶತ್ರು ಭಯವಿಲ್ಲದೆ ಸುಖದಿಂದಿರುವಂತೆ ಮಾಡುವೆನು. ಇದಲ್ಲದೆ ಯೆಹೋವನಾದ ನಾನು ನಿನಗೋಸ್ಕರ ಒಂದು ಮನೆಯನ್ನು ಕಟ್ಟುವೆನೆಂದು ಮಾತುಕೊಡುತ್ತೇನೆ.


ಹೀಗೆ ದೇವಾನುಗ್ರಹದಿಂದ ಸುತ್ತಣ ವೈರಿಗಳ ಭಯತಪ್ಪಿ ಯೆಹೋಷಾಫಾಟನ ರಾಜ್ಯಕ್ಕೆ ಸಮಾಧಾನವುಂಟಾಯಿತು.


ಜನಾಂಗಗಳನ್ನು ಶಿಕ್ಷಿಸುವವನೂ ಮನುಷ್ಯರಿಗೆ ಬುದ್ಧಿಕಲಿಸುವವನೂ ಗದರಿಸನೋ?


ನಾನೇ ನನ್ನ ಕುರಿಗಳನ್ನು ಮೇಯಿಸಿ ಹಾಯಾಗಿ ಮಲಗುವಂತೆ ಮಾಡುವೆನು; ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು