Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:21 - ಕನ್ನಡ ಸತ್ಯವೇದವು J.V. (BSI)

21 ಎಚ್ಚರಿಕೆಯಾಗಿರು, ಅಧರ್ಮದ ಕಡೆಗೆ ಕಾಲಿಕ್ಕಬೇಡ. ಕಷ್ಟವನ್ನು ಅನುಭವಿಸಲೊಲ್ಲದೆ ಅಧರ್ಮವನ್ನೇ ಆರಿಸಿಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಎಚ್ಚರಿಕೆಯಾಗಿರು, ಅಧರ್ಮದ ಕಡೆಗೆ ಕಾಲಿಡಬೇಡ. ಕಷ್ಟವನ್ನು ಅನುಭವಿಸಲೊಲ್ಲದೆ ಅಧರ್ಮವನ್ನೇ ಆರಿಸಿಕೊಂಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅಕ್ರಮದ ಕರೆಗೆ ಕಾಲಿಡಬೇಡ, ಎಚ್ಚರಿಕೆ! ನಿನ್ನ ಕಷ್ಟಾನುಭವ ಅದನು ತಡೆಗಟ್ಟುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೋಬನೇ, ನೀನು ಬಹಳ ಸಂಕಟಪಟ್ಟಿರುವೆ. ಆದ್ದರಿಂದ ಕೆಡುಕನ್ನು ಆರಿಸಿಕೊಳ್ಳಬೇಡ; ತಪ್ಪು ಮಾಡದಂತೆ ಎಚ್ಚರಿಕೆಯಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅಕ್ರಮದ ಕರೆಗೆ ಕಾಲಿಡಬೇಡ, ಎಚ್ಚರಿಕೆ! ನೀನು ಕಷ್ಟಕ್ಕಿಂತಲೂ ಕೇಡನ್ನು ಆರಿಸಿಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:21
18 ತಿಳಿವುಗಳ ಹೋಲಿಕೆ  

ಸ್ವಲ್ಪಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವರ ಜನರೊಂದಿಗೆ ಕಷ್ಟವನ್ನನುಭವಿಸುವದೇ ಒಳ್ಳೇದೆಂದು ತೀರ್ಮಾನಿಸಿಕೊಂಡನು.


ನಾನು ಕೆಟ್ಟತನದ ಮೇಲೆ ಮನಸ್ಸಿಟ್ಟಿದ್ದರೆ ಸ್ವಾವಿುಯು ನನ್ನ ವಿಜ್ಞಾಪನೆಯನ್ನು ಕೇಳುತ್ತಿದ್ದಿಲ್ಲ.


ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇ ನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು.


ಮತ್ತು ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - ಯಾವನಿಗಾದರೂ ನನ್ನ ಹಿಂದೆ ಬರುವದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರಲಿ.


ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿವಿುತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿ ಬೀಳುತ್ತಾನೆ; ಇವನೇ ಬೀಜ ಬಿದ್ದ ಬಂಡೆಯ ನೆಲವಾಗಿರುವವನು.


ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇವಿುನ ಕಡೆಗೆ ಕದವಿಲ್ಲದ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ಯಥಾಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರಸಲ್ಲಿಸಿದನು.


ಆದಕಾರಣ ನೀನು ಅವರನ್ನು ಸಂಬೋಧಿಸಿ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರಲ್ಲಿ ಯಾವ ಯಾವನು ತನ್ನ ಬೊಂಬೆಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯನ್ನು ಪ್ರಶ್ನೆಕೇಳುವದಕ್ಕೆ ಬರುವನೋ ಅವನ ಪಾತಕಕ್ಕೆ ಅಂದರೆ ಅವನ ಲೆಕ್ಕವಿಲ್ಲದ ಬೊಂಬೆಗಳಿಗೆ ತಕ್ಕ ಹಾಗೆ ಯೆಹೋವನಾದ ನಾನು ಅವನಿಗೆ ಉತ್ತರವನ್ನು ಕೊಡುವೆನು;


ನ್ಯಾಯವೆಂದು ನೀನು ಊಹಿಸಿಕೊಂಡು ನನ್ನ ನೀತಿಯು ದೇವರ ನೀತಿಗಿಂತ ಹೆಚ್ಚೆಂದುಕೊಳ್ಳುತ್ತೀಯಾ?


ಅವರು ಒಂದು ವೇಳೆ ಬಂಧಕ್ಕೆ ಸಿಕ್ಕಿ ಬಾಧೆಗಳೆಂಬ ಹಗ್ಗಗಳಿಂದ ಕಟ್ಟಲ್ಪಟ್ಟಿದ್ದರೆ,


ಇದಲ್ಲದೆ ಶಿಕ್ಷಣವನ್ನು ಕೇಳುವಂತೆ ಅವರ ಕಿವಿಯನ್ನು ತೆರೆದು ಅಧರ್ಮವನ್ನು ಬಿಟ್ಟುಬಿಡಬೇಕೆಂದು ಅವರಿಗೆ ಆಜ್ಞಾಪಿಸುವನು.


ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು, ಅವರು ಅನುಭವಿಸುವ ಹಿಂಸೆಯಿಂದಲೇ ಅವರ ಕಿವಿಯನ್ನು ತೆರೆಯುವನು.


ಸುಳ್ಳುವಿಗ್ರಹಗಳನ್ನು ಅವಲಂಬಿಸಿದವರನ್ನು ನಾನು ದ್ವೇಷಿಸುತ್ತೇನೆ; ನಾನಾದರೋ ಯೆಹೋವನಲ್ಲಿ ಭರವಸವಿಟ್ಟಿದ್ದೇನೆ.


ನಾನಂತೂ ಬಾಯಿಮುಚ್ಚುವದಿಲ್ಲ; ಆತ್ಮವೇದನೆಯಿಂದ ಮಾತಾಡುವೆನು, ಮನೋವ್ಯಥೆಯಿಂದ ಪ್ರಲಾಪಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು