Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 37:12 - ಕನ್ನಡ ಸತ್ಯವೇದವು J.V. (BSI)

12 ಸಿಡಿಲುಗಳು ಭೂಮಂಡಲದಲ್ಲೆಲ್ಲಾ ತಾನು ವಿಧಿಸುವದನ್ನೇ ಮಾಡಲಿ ಎಂದು ಅವುಗಳನ್ನು ನಡೆಯಿಸಿ ಸುತ್ತಮುತ್ತಲು ತಿರುಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸಿಡಿಲುಗಳು ಭೂಮಂಡಲದಲ್ಲೆಲ್ಲಾ ತಾನು ವಿಧಿಸುವುದನ್ನೇ ಮಾಡಲಿ ಎಂದು, ಅವುಗಳನ್ನು ನಡಿಸಿ ಸುತ್ತಮುತ್ತಲು ತಿರುಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಜಗದೊಳೆಲ್ಲ ಆತ ವಿಧಿಸಿದಂತೆ ಜರುಗಬೇಕೆಂದು ಸುತ್ತಮುತ್ತಲು ಸಿಡಿಲುಗಳು ಸಂಚರಿಸುವಂತೆ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಭೂಮಂಡಲದಲ್ಲೆಲ್ಲಾ ಚಲಿಸಲು ದೇವರು ಮೋಡಗಳಿಗೆ ಆಜ್ಞಾಪಿಸುವನು. ಮೋಡಗಳು ಆತನ ಆಜ್ಞೆಗನುಸಾರವಾಗಿ ಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಭೂಲೋಕದಲ್ಲೆಲ್ಲಾ ಸಿಡಿಲುಗಳಿಗೆ ದೇವರು ಆಜ್ಞಾಪಿಸಲು, ಎಲ್ಲಾ ಕೆಲಸವನ್ನು ಮಾಡುವಂತೆ ಅವು ತಿರುಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 37:12
13 ತಿಳಿವುಗಳ ಹೋಲಿಕೆ  

ಬೆಂಕಿ, ಕಲ್ಮಳೆ, ಹಿಮ, ಹಬೆ ಇವುಗಳೂ ಆತನ ಅಪ್ಪಣೆಯನ್ನು ನೆರವೇರಿಸುವ ಬಿರುಗಾಳಿಯೂ


ಇವರಿಗೆ ಯಾವನಾದರೂ ಕೇಡನ್ನು ಉಂಟುಮಾಡಬೇಕೆಂದಿದ್ದರೆ ಅವನಿಗೆ ಈ ರೀತಿಯಾಗಿ ಕೊಲೆಯಾಗಬೇಕು. ತಾವು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂವಿುಯನ್ನು ಪೀಡಿಸುವದಕ್ಕೂ ಅಧಿಕಾರವುಂಟು.


ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ ನಿಮಗೆ ಮಳೆಯನ್ನು ತಡೆದೆನು; ಒಂದು ಊರಿನ ಮೇಲೆ ಮಳೆಯಾಗುವಂತೆಯೂ ಇನ್ನೊಂದು ಊರಿನ ಮೇಲೆ ಮಳೆಯಾಗದಂತೆಯೂ ಮಾಡಿದೆನು; ಒಬ್ಬನ ಹೊಲದಲ್ಲಿ ಮಳೆಯಾಯಿತು, ಮಳೆಯಾಗದ ಹೊಲವು ಬಾಡಿಹೋಯಿತು.


ಚೀಯೋನಿನ ಸಂತತಿಯವರೇ, ನಿಮ್ಮ ದೇವರಾದ ಯೆಹೋವನಲ್ಲಿ ಹರ್ಷಿಸಿರಿ, ಉಲ್ಲಾಸಿಸಿರಿ; ಆತನು ಮುಂಗಾರನ್ನು ತಕ್ಕ ಹಾಗೆ ನಿಮಗೆ ಕೊಡುವನು; ಮುಂಗಾರು ಹಿಂಗಾರು ಮಳೆಗಳನ್ನು ಮೊದಲಿನಂತೆ ನಿಮಗಾಗಿ ಸುರಿಸುವನು.


ಜನಾಂಗಗಳ ವ್ಯರ್ಥವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವಾ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು; ನೀನು ಇವುಗಳನ್ನೆಲ್ಲಾ ನಡಿಸುವವನಾಗಿದ್ದೀಯಷ್ಟೆ.


ಯೆಹೋವನೇ, ನಿನ್ನ ಕೈಕೆಲಸಗಳು ಎಷ್ಟೋ ವಿಧವಾಗಿವೆ. ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿದ್ದೀ; ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ.


ಕೈತುಂಬಾ ಸಿಡಿಲನ್ನು ಹಿಡಿದು ನೀನು ವೈರಿಯನ್ನು ಹೊಡೆ ಎಂದು ಅದನ್ನು ಬಿಡುವನು.


ಆತನು ಅದನ್ನು ಆಕಾಶಮಂಡಲದಲ್ಲೆಲ್ಲಾ ಹಬ್ಬಿಸಿ ತನ್ನ ಸಿಡಿಲನ್ನು ಭೂವಿುಯ ಅಂಚುಗಳವರೆಗೂ ಬಿಡುವನು.


ತನ್ನ ನುಡಿಯನ್ನು ಭೂಲೋಕಕ್ಕೆ ಕಳುಹಿಸುತ್ತಾನೆ; ಆತನ ವಾಕ್ಯವು ಬಹುವೇಗಶಾಲಿಯಾಗಿದೆ.


ಪಿತೃಗಳ ಅಧರ್ಮದ ನಿವಿುತ್ತ ಇವನ ಮಕ್ಕಳಿಗೂ ವಧ್ಯಸ್ಥಾನವನ್ನು ಸಿದ್ಧಮಾಡಿರಿ! ಅವರು ತಲೆಯೆತ್ತಿ ಲೋಕವನ್ನು ವಶಪಡಿಸಿಕೊಂಡು ಭೂಮಂಡಲದ ಮೇಲೆಲ್ಲಾ ಪಟ್ಟಣಗಳನ್ನು ಕಟ್ಟಿಕೊಳ್ಳದಿರಲಿ!


ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವದು, ಇಸ್ರಾಯೇಲು ಹೂಬಿಟ್ಟು ಚಿಗುರುವದು, ಆ ವೃಕ್ಷವು ಭೂಮಂಡಲವನ್ನೆಲ್ಲಾ ಫಲದಿಂದ ತುಂಬಿಸುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು