Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 4:5 - ಕನ್ನಡ ಸತ್ಯವೇದವು J.V. (BSI)

5 ಈಗಲಾದರೋ ನಿನಗೇ [ಶ್ರಮೆ] ಬಂತು. ಅದರಿಂದ ನೀನು ಬೇಸರಗೊಂಡಿರುವಿ, ಅದು ನಿನ್ನನ್ನೇ ತಗಲಿರುವ ಕಾರಣ ನಿನಗೆ ಭ್ರಮೆಯುಂಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಈಗಲಾದರೋ ನಿನಗೆ ಶ್ರಮೆ ಬಂತು, ಆದುದರಿಂದ ನೀನು ಬೇಸರಗೊಂಡಿರುವಿ. ಅದು ನಿನ್ನನ್ನೇ ತಗಲಿರುವ ಕಾರಣ ನಿನಗೆ ಭ್ರಮೆಯುಂಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಈಗಲಾದರೂ ಆ ದುರಿತಗಳಿಂದ ನೀನೇ ಧೃತಿಗೆಟ್ಟಿರುವೆ ಅವು ನಿನಗೆ ತಗಲಿ ನೀನೇ ತಲ್ಲಣಗೊಂಡಿರುವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಈಗಲಾದರೋ ನಿನಗೆ ಕೇಡು ಬಂದಿದೆ; ಆದ್ದರಿಂದ ನೀನು ನಿರಾಶನಾಗಿರುವೆ. ಕೇಡು ನಿನಗೆ ಬಡಿದಿರುವುದರಿಂದ ಭ್ರಮೆಗೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಈಗ ಆಪತ್ತು ನಿನ್ನ ಮೇಲೆ ಬಂದದ್ದರಿಂದ ನೀನು ದಣಿಯುತ್ತಿರುವೆ; ನಿನಗೂ ಕಡುಕಷ್ಟ ತಟ್ಟಿದ್ದರಿಂದ ಕಳವಳಪಡುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 4:5
12 ತಿಳಿವುಗಳ ಹೋಲಿಕೆ  

ನನ್ನ ವಿುತ್ರರೇ, ಕರುಣಿಸಿರಿ, ನೀವಾದರೂ ಕರುಣಿಸಿರಿ! ದೇವರ ಕೈ ನನ್ನನ್ನು ಹೊಡೆಯಿತಲ್ಲಾ.


ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ - ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ;


ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಆತನನ್ನು ಆಲೋಚಿಸಿರಿ. ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು.


ಆದದರಿಂದ ನಾವು ಧೈರ್ಯಗೆಡುವದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಆಂತರ್ಯವು ದಿನೇದಿನೇ ಹೊಸದಾಗುತ್ತಾ ಬರುತ್ತದೆ.


ಆದದರಿಂದ ನಾವು ದೇವರ ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಟ್ಟು ಹಿಂದೆಗೆಯುವದಿಲ್ಲ.


ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ ನಿನ್ನ ಬಲವೂ ಇಕ್ಕಟ್ಟೇ.


ಒಬ್ಬನು ಮನಗುಂದಿ ಸರ್ವಶಕ್ತನ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ ಅವನ ವಿುತ್ರನು ಅವನಿಗೆ ದಯೆ ತೋರಿಸತಕ್ಕದ್ದು.


ಆದರೆ ನಿನ್ನ ಕೈಚಾಚಿ ಅವನ ಅಸ್ತಿಮಾಂಸಗಳನ್ನು ಹೊಡೆ; ಅವನು ನಿನ್ನ ಮುಖದೆದುರಿಗೆ ನಿನ್ನನ್ನು ದೂಷಿಸಲೇ ದೂಷಿಸುವನು ಅಂದನು.


ಆದರೆ ನಿನ್ನ ಕೈನೀಡಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡು. ಆಗ ಅವನು ನಿನ್ನ ಎದುರಿಗೆ ನಿನ್ನನ್ನು ದೂಷಿಸಲೇ ದೂಷಿಸುವನು ಅಂದನು.


ಎಡವಿಬೀಳುವವರನ್ನು ನಿನ್ನ ಮಾತುಗಳಿಂದ ಉದ್ಧರಿಸಿ ಕುಸಿಯುವ ಮೊಣಕಾಲುಗಳನ್ನು ದೃಢಪಡಿಸಿದ್ದೀ.


ಯೆಹೋವನೇ, ನಿನಗೆ ಮೊರೆಯಿಟ್ಟೆನು; ನನ್ನ ಒಡೆಯನಿಗೆ ಬಿನ್ನವಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು