Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 40:11 - ಕನ್ನಡ ಸತ್ಯವೇದವು J.V. (BSI)

11 ತುಂಬಿತುಳುಕುವ ನಿನ್ನ ಕೋಪವನ್ನು ಎರಚಿ ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಅವನನ್ನು ತಗ್ಗಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತುಂಬಿ ತುಳುಕುವ ನಿನ್ನ ಕೋಪವನ್ನು ಎರಚಿ, ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಅವನನ್ನು ತಗ್ಗಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಿನ್ನ ಕಡುಕೋಪವನು ಎಲ್ಲೆಡೆಯೂ ಹರಡಿಸು ಕಣ್ಣಿಟ್ಟು ಗರ್ವಿಷ್ಠರೆಲ್ಲರನು ತಗ್ಗಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀನು ದೇವರಂತಿದ್ದರೆ, ನಿನ್ನ ಕೋಪವನ್ನು ತೋರಿ ಗರ್ವಿಷ್ಠರನ್ನು ದಂಡಿಸು; ಅವರನ್ನು ದೀನರನ್ನಾಗಿ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಿನ್ನ ಕಡುಕೋಪವನ್ನು ಎಲ್ಲಾ ಗರ್ವಿಷ್ಠರ ಮೇಲೆ ಸುರಿಸಿ, ಅವರನ್ನು ತಗ್ಗಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 40:11
34 ತಿಳಿವುಗಳ ಹೋಲಿಕೆ  

ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕರಾಜನನ್ನು ಹೊಗಳಿ ಕೊಂಡಾಡಿ ಕೀರ್ತಿಸುತ್ತೇನೆ; ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ಸಾಮಾನ್ಯರ ಗರ್ವವು ಕುಗ್ಗುವದು, ಮುಖಂಡರ ಅಹಂಕಾರವೂ ತಗ್ಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಆತನ ಸಿಟ್ಟಿಗೆ ಯಾರು ತಡೆದಾರು? ಆತನ ರೋಷಾಗ್ನಿಗೆ ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ, ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.


ಆತನು ನಮ್ಮ ಮೇಲೆ ಅತಿಶಯವಾದ ಕೃಪೆಯನ್ನು ಇಡುತ್ತಾನೆ. ಆದುದರಿಂದ - ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ ಎಂದು ಶಾಸ್ತ್ರವು ಹೇಳುತ್ತದೆ.


ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು, ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.


ಇಗೋ, ಆ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ ದುಷ್ಕರ್ಮಿಗಳೂ ಹೊಟ್ಟಿನಂತಿರುವರು; ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಲಯವಾಗುವದು; ಬುಡ ರೆಂಬೆಗಳಾವದನ್ನೂ ಉಳಿಸದು.


ನರಪುತ್ರನೇ, ನೀನು ತೂರಿನ ಪ್ರಭುವಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನು ದೇವರು, ಸಮುದ್ರ ಮಧ್ಯದಲ್ಲಿ ದೇವರ ಆಸನವನ್ನೇ ಹತ್ತಿದ್ದೇನೆ ಅಂದುಕೊಂಡಿಯಷ್ಟೆ; ನೀನು ನಿನ್ನ ಮನಸ್ಸನ್ನು ದೇವರ ಮನಸ್ಸಿನಷ್ಟು ಹೆಚ್ಚಿಸಿಕೊಂಡದೇನು? ನೀನು ಎಂದಿಗೂ ದೇವರಲ್ಲ, ನೀನು ನರಪ್ರಾಣಿಯೇ.


ಆಗ ಆತನು ಅವರ ಮೇಲೆ ತನ್ನ ರೋಷಾಗ್ನಿಯನ್ನೂ ಯುದ್ಧದ ರೌದ್ರವನ್ನೂ ಸುರಿಸಿದನು. ಎಲ್ಲಾ ಕಡೆಯಿಂದಲೂ ಅವರಿಗೆ ಉರಿಹತ್ತಿತು, ಆದರೆ ಅವರು ತಿಳಿಯಲಿಲ್ಲ; ದಹಿಸಿತು, ಲಕ್ಷ್ಯಕ್ಕೆ ತರಲಿಲ್ಲ.


ಸಿಡಿಲಿನಿಂದ ಶತ್ರುಗಳನ್ನು ಚದರಿಸಿಬಿಡು; ನಿನ್ನ ಬಾಣಗಳಿಂದ ಅವರನ್ನು ಭ್ರಾಂತಿಗೊಳಿಸು.


ದೇವರು ಕರುಣವಿಲ್ಲದೆ ಅವನ ಮೇಲೆ [ತನ್ನ ಬಾಣಗಳನ್ನು] ಎಸೆಯುತ್ತಲಿರುವನು, ಅವನು ಆತನ ಕೈಯಿಂದ ತಪ್ಪಿಸಿಕೊಳ್ಳಲೇಬೇಕೆಂದಿರುವನು.


ಅವನ ಹೊಟ್ಟೆ ತುಂಬುವದು, ಹೌದು, ದೇವರು ತನ್ನ ಕೋಪಾಗ್ನಿಯನ್ನು ಕಳುಹಿಸಿ ಅದನ್ನೇ ಆಹಾರವನ್ನಾಗಿ ಅವನ ಮೇಲೆ ಸುರಿಸುವನು.


ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದವರೆಗೂ ವ್ಯಾಪಿಸಿ ಬೆಳೆ ಸಹಿತವಾಗಿ ಭೂವಿುಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವದು.


ಆತನು ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ ಆ ಐಗುಪ್ತ್ಯರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ ಆ ವಿಷಯದಲ್ಲಿ ಅವರನ್ನು ತಗ್ಗಿಸಿದ್ದರಿಂದ ಯೆಹೋವನೇ ಎಲ್ಲಾ ದೇವರುಗಳಿಗಿಂತಲೂ ದೊಡ್ಡವನೆಂದು ಈಗ ತಿಳಿದುಕೊಂಡಿದ್ದೇನೆ ಅಂದನು.


ಯೆಹೋವನೇ, ನಿನ್ನ ಭುಜಬಲವು ಎಷ್ಟೋ ಘನವಾದದ್ದು; ಯೆಹೋವನೇ, ನಿನ್ನ ಭುಜಬಲವು ನಿನ್ನ ಶತ್ರುಗಳನ್ನು ಪುಡಿಪುಡಿ ಮಾಡುತ್ತದೆ.


ದೇವರ ಶ್ವಾಸದಿಂದ ನಾಶವಾಗುತ್ತಾರೆ, ಆತನ ಸಿಟ್ಟೆಂಬ ಗಾಳಿಯಿಂದ ಹಾಳಾಗುತ್ತಾರೆ.


ಆಪತ್ತಿನ ದಿನದಲ್ಲಿ ದುಷ್ಟನು ಉಳಿದು ಕೋಪವು ತುಂಬಿ ತುಳುಕುವ ದಿವಸದಲ್ಲಿ ತಪ್ಪಿಸಲ್ಪಡುವನು ಎಂಬದು ನಿಮಗೆ ಗೊತ್ತಾಗಲಿಲ್ಲವೋ?


[ಯೆಹೋವನಾದ] ನಾನು ನಿನ್ನ ಉದ್ಯೋಗದಿಂದ ನಿನ್ನನ್ನು ತಳ್ಳಿಬಿಡುವೆನು, ನಿನ್ನ ಪದವಿಯಿಂದ ನಿನ್ನನ್ನು ಎಳೆದು ಹಾಕುವೆನು.


ಗರ್ವದ ಸಕಲ ವೈಭವವನ್ನು ಹೊಲಸುಮಾಡಬೇಕೆಂತಲೂ ಲೋಕಮಾನ್ಯರೆಲ್ಲರನ್ನು ಅವಮಾನ ಪಡಿಸಬೇಕೆಂತಲೂ ಸೇನಾಧೀಶ್ವರನಾದ ಯೆಹೋವನೇ ಹೀಗೆ ಸಂಕಲ್ಪಿಸಿದ್ದಾನೆ.


ಈಜುವವನು ಕೈಯಾಡಿಸುವಂತೆ ಅದರಲ್ಲಿಯೇ ಕೈಯಾಡಿಸುವದು; [ಯೆಹೋವನು] ಅದರ ಗರ್ವವನ್ನೂ ಕೈಯ ಚಮತ್ಕಾರವನ್ನೂ ತಗ್ಗಿಸಿಬಿಡುವನು.


ಆತನು ಎತ್ತರದಲ್ಲಿ ವಾಸಿಸುವವರನ್ನೂ [ಅವರ] ಉನ್ನತಪಟ್ಟಣವನ್ನೂ ತಗ್ಗಿಸಿದ್ದಾನೆ. ಅದನ್ನು ಕೆಡವಿ ನೆಲಸಮಮಾಡಿ ದೂಳಿಗೆ ತಂದಿದ್ದಾನೆ.


ಮೋವಾಬ್ಯರಿಗೆ ಬಹು ಸೊಕ್ಕೇರಿದೆ ಎಂಬ ಅವರ ಹೆಮ್ಮೆಯ ಸುದ್ದಿಯೂ ಅವರ ಡಂಭ, ಅಹಂಕಾರ, ಸ್ವಾಭಿಮಾನ ಸ್ವಪ್ರತಿಷ್ಠೆ ಇವುಗಳ ಸಮಾಚಾರವೂ ನಮ್ಮ ಕಿವಿಗೆ ಬಿದ್ದಿವೆ.


ರಾಜನೇ, ಇದರ ತಾತ್ಪರ್ಯವೇನಂದರೆ, ಎನ್ನೊಡೆಯನಾದ ಅರಸನಿಗೆ ಉಂಟಾಗಿರುವ ಪರಾತ್ಪರನ ತೀರ್ಪು ಹೀಗಿದೆ -


ಆದರೆ ತುಂಬಿತುಳುಕುವ ಜಲಪ್ರವಾಹದಿಂದಲೋ ಎಂಬಂತೆ ನಿನೆವೆಯ ಸ್ಥಾನವನ್ನು ತೀರಾ ಹಾಳುಮಾಡಿ ತನ್ನ ವಿರೋಧಿಗಳನ್ನು ಹಿಂದಟ್ಟಿ ಅಂಧಕಾರಕ್ಕೆ ತಳ್ಳುವನು.


ಆತನು ಪರ್ವತಗಳನ್ನು ಅರಿಯದಂತೆ ಸರಿಸಿ ಕೋಪದಿಂದ ಅವುಗಳನ್ನು ಉರುಳಿಸುತ್ತಾನೆ.


ಲೋಕದ ನ್ಯಾಯಾಧಿಪತಿಯೇ, ಏಳು; ಗರ್ವಿಷ್ಠರಿಗೆ ಪ್ರತಿಫಲವನ್ನು ಕೊಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು