Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 7:21 - ಕನ್ನಡ ಸತ್ಯವೇದವು J.V. (BSI)

21 ನೀನು ನನ್ನ ಅಪರಾಧವನ್ನು ಕ್ಷವಿುಸಿ ನನ್ನ ದೋಷವನ್ನು ಏಕೆ ಪರಿಹರಿಸುವದಿಲ್ಲ? ನಾನು ಈಗ ಮಣ್ಣಿನಲ್ಲಿ ಮಲಗಿಕೊಳ್ಳುವೆನು; ನೀನು ನನ್ನನ್ನು ಹುಡುಕುವಾಗ ನಾನು ಇಲ್ಲದೆ ಹೋಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನೀನು ನನ್ನ ಅಪರಾಧವನ್ನು ಕ್ಷಮಿಸಿ ನನ್ನ ದೋಷವನ್ನು ಏಕೆ ಪರಿಹರಿಸುವುದಿಲ್ಲ? ನಾನು ಈಗ ಮಣ್ಣಿನಲ್ಲಿ ಮಲಗಿಕೊಳ್ಳುವೆನು; ನೀನು ನನ್ನನ್ನು ಹುಡುಕುವಾಗ ನಾನು ಇಲ್ಲದೆ ಹೋಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನನ್ನ ಅಪರಾದವನ್ನು ನೀನು ಕ್ಷಮಿಸಬಾರದೆ? ನನ್ನ ದೋಷವನ್ನು ನೀನು ಪರಿಹರಿಸಬಾರದೆ? ಮಣ್ಣಿನೊಳಗೆ ಬಿದ್ದಿರುವೆ ನಾನು ಈಗ ನಾನು ಇಲ್ಲವಾಗಿರುವೆ ನೀ ಹುಡುಕುವಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀನು ನನ್ನ ತಪ್ಪುಗಳನ್ನು ಮನ್ನಿಸಬಾರದೇಕೆ? ನನ್ನ ಪಾಪಗಳನ್ನು ಕ್ಷಮಿಸಬಾರದೇಕೆ? ನಾನು ಬೇಗನೆ ಸತ್ತು ಸಮಾಧಿಯಲ್ಲಿರುವೆನು. ಆಮೇಲೆ ನೀನು ನನಗಾಗಿ ಹುಡುಕುವೆ, ಆದರೆ ನಾನು ಅಷ್ಟರಲ್ಲೇ ಹೊರಟುಹೋಗಿರುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀವು ನನ್ನ ಅಪರಾಧವನ್ನು ಪರಿಹರಿಸಬಾರದೇ? ನನ್ನ ಪಾಪವನ್ನು ಕ್ಷಮಿಸಬಾರದೇ? ನಾನು ಬೇಗ ಮಣ್ಣಿಗೆ ಸೇರಿಬಿಡುವೆನು; ನೀವು ನನ್ನನ್ನು ಹುಡುಕಿದರೆ ನಾನು ಇರುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 7:21
29 ತಿಳಿವುಗಳ ಹೋಲಿಕೆ  

ಧೂಳಿನ ನೆಲದೊಳಗೆ ದೀರ್ಘನಿದ್ರೆಮಾಡುವವರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನ ನಿತ್ಯತಿರಸ್ಕಾರಗಳನ್ನು ಅನುಭವಿಸುವರು.


ಅದೇನಂದರೆ - ನಾನು ತಪ್ಪುಮಾಡಿದರೆ ನೀನು ಗಮನಿಸುತ್ತೀ; ನನ್ನ ದೋಷವನ್ನು ಕ್ಷವಿುಸುವದಿಲ್ಲ.


ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷವಿುಸಿಬಿಟ್ಟು ಸಕಲ ಅನೀತಿಯನ್ನು ಪರಿಹರಿಸಿ ನಮ್ಮನ್ನು ಶುದ್ಧಿಮಾಡುವನು.


ಯೆಹೋವನೇ, ಅತಿರೋಷಗೊಳ್ಳದಿರು, ನಮ್ಮ ಅಧರ್ಮವನ್ನು ಕಡೆಯವರೆಗೂ ಜ್ಞಾಪಕದಲ್ಲಿಡಬೇಡ; ಎಲೈ, ಸ್ವಾಮೀ, ಕಟಾಕ್ಷಿಸು, ನಾವೆಲ್ಲರೂ ನಿನ್ನ ಜನರಾಗಿದ್ದೇವೆ.


ಮಣ್ಣು ಭೂವಿುಗೆ ಸೇರಿ ಇದ್ದ ಹಾಗಾಗುವದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವದು; ಇಷ್ಟರೊಳಗಾಗಿ [ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ.]


ಪಾಪಗಳನ್ನು ಹೋಗಲಾಡಿಸುವದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಮರುದಿನ ಯೋಹಾನನು ತನ್ನ ಕಡೆಗೆ ಬರುವ ಯೇಸುವನ್ನು ನೋಡಿ - ಅಗೋ [ಯಜ್ಞಕ್ಕೆ] ದೇವರು ನೇವಿುಸಿದ ಕುರಿ, ಲೋಕದ ಪಾಪವನ್ನು ನಿವಾರಣೆ ಮಾಡುವವನು.


[ಪಶ್ಚಾತ್ತಾಪದ] ಮಾತುಗಳನ್ನು ತೆಗೆದುಕೊಂಡು ಯೆಹೋವನ ಬಳಿಗೆ ಹಿಂದಿರುಗಿ ಆತನಿಗೆ - ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ [ನಮ್ಮಲ್ಲಿನ] ಒಳ್ಳೆಯದನ್ನು ಅಂಗೀಕರಿಸು; ನಮ್ಮ ಸ್ತೋತ್ರಗಳೆಂಬ ಹೋರಿಗಳನ್ನು ಅರ್ಪಿಸುವೆವು.


ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಜೀವದಿಂದೇಳುವವು, ಮಣ್ಣಿನಲ್ಲಿ ಪವಳಿಸಿರುವವರೇ, ಎಚ್ಚತ್ತು ಹರ್ಷಧ್ವನಿಗೈಯಿರಿ! [ಯೆಹೋವನೇ,] ನೀನು ಸುರಿಯುವ ಇಬ್ಬನಿಯು ಜ್ಯೋತಿರ್ಮಯವಾದದ್ದು, ಭೂವಿುಯು ಸತ್ತವರನ್ನು ಹೊರಪಡಿಸುವದು.


ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ; ಅವನು ಅಡವಿಯ ಹೂವಿನ ಹಾಗೆ ಶೋಭಿಸುತ್ತಾನೆ.


ತರುವಾಯ ನಾನು ಆ ದಾರಿಯಲ್ಲಿ ಹೋಗಿ ನೋಡಲಾಗಿ ಅವನು ಇಲ್ಲದೆ ಹೋಗಿದ್ದನು; ಅವನನ್ನು ಹುಡುಕಿದರೂ ಸಿಕ್ಕಲೇ ಇಲ್ಲ.


ಶ್ಮಶಾನವನ್ನು, ನೀನು ನನ್ನ ತಂದೆ ಎಂದೂ ಹುಳವನ್ನು, ನನ್ನ ತಾಯಿ, ನನ್ನ ತಂಗಿ ಎಂದೂ ಕರೆಯುವದಾದರೆ


ನೀನು ನನ್ನನ್ನು ಜೇಡಿಮಣ್ಣಿನಿಂದಲೋ ಎಂಬಂತೆ ರೂಪಿಸಿದ್ದೀಯೆಂದು ಕೃಪೆಮಾಡಿ ನೆನಸಿಕೋ. ನನ್ನನ್ನು ತಿರಿಗಿ ಮಣ್ಣಾಗುವಂತೆ ಮಾಡುವಿಯಾ?


ನನ್ನನ್ನು ನೋಡುವವನ ಕಣ್ಣಿಗೆ ನಾನು ಕಾಣಿಸುವದಿಲ್ಲ; ನಿನ್ನ ಕಣ್ಣುಗಳು ನನ್ನ ಕಡೆ ಇದ್ದರೂ ನಾನು ಇರುವದಿಲ್ಲ.


ಹಾಗಿಲ್ಲದಿದ್ದರೆ ನಾನು ಮಲಗಿ ಸುಮ್ಮನಿದ್ದು ನಿದ್ರೆಮಾಡುತ್ತಿದ್ದೆನು;


ಖಾನೇಷುಮಾರಿ ಮಾಡಿಸಿದನಂತರ ದಾವೀದನನ್ನು ಮನಸ್ಸಾಕ್ಷಿಯು ಹಂಗಿಸತೊಡಗಿತು. ಆದದರಿಂದ ಅವನು ಯೆಹೋವನನ್ನು - ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು; ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷವಿುಸು ಎಂದು ಪ್ರಾರ್ಥಿಸಿದನು.


ಆಗ ಶೂಹ್ಯನಾದ ಬಿಲ್ದದನು ಹೀಗೆಂದನು -


ನನ್ನ ಎಲ್ಲಾ ಸಂಕಟಗಳಿಂದ ನನಗೆ ಭಯವುಂಟಾಗುತ್ತದೆ; ನೀನು ನನ್ನನ್ನು ನಿರ್ದೋಷಿಯೆಂದೆಣಿಸುವದಿಲ್ಲವೆಂದು ತಿಳಿದುಕೊಳ್ಳುತ್ತೇನೆ.


ನನಗೆ ಪ್ರತಿವಾದಿ ಇದ್ದಾನೋ? ಇದ್ದರೆ ಸುಮ್ಮನಾಗಿ ಪ್ರಾಣಬಿಡುವೆನು.


ಅವನು ಧನಿಕನಾಗಿ ನಿದ್ರಿಸಿದರೂ ಮತ್ತೆ ನಿದ್ರೆಯನ್ನು ಕಾಣದೆ ಹೋಗುವನು, ತನ್ನ ಕಣ್ಣನ್ನು ತೆರೆಯುತ್ತಲೇ ಇಲ್ಲವಾಗುವನು.


ನಾನು ಪರಿಶುದ್ಧನು, ನನ್ನೊಳಗೆ ದೋಷವಿಲ್ಲ, ನಾನು ನಿರ್ಮಲನು, ನನ್ನಲ್ಲಿ ಏನೂ ಪಾಪವಿಲ್ಲ.


ಮನುಷ್ಯನಾದರೋ ಸತ್ತು ಬೋರಲ ಬೀಳುವನು, ಪ್ರಾಣಹೋಗಲು ಅವನು ಎಲ್ಲಿಯೋ!


ಅವನು ಸ್ವಪ್ನದಂತೆ ಹಾರಿಹೋಗಿ ಸಿಕ್ಕುವದಿಲ್ಲ, ರಾತ್ರಿಯ ಕನಸಿನ ಹಾಗೆ ಓಡಿಹೋಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು