Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:17 - ಕನ್ನಡ ಸತ್ಯವೇದವು J.V. (BSI)

17 ಆತನು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾ ಸುಮ್ಮಸುಮ್ಮನೆ ಒಂದರ ಮೇಲೊಂದು ಗಾಯಮಾಡುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆತನು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾ, ಸುಮ್ಮಸುಮ್ಮನೆ ಒಂದರ ಮೇಲೊಂದು ಗಾಯಮಾಡುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನನ್ನನ್ನು ಬಿರುಗಾಳಿಯಿಂದ ಬಡಿಯುತ್ತಾನೆ ಕಾರಣವಿಲ್ಲದೆ ಗಾಯದ ಮೇಲೆ ಗಾಯ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನನ್ನನ್ನು ಜಜ್ಜುವುದಕ್ಕಾಗಿ ದೇವರು ಬಿರುಗಾಳಿಯನ್ನು ಕಳುಹಿಸುವನು; ನಿಷ್ಕಾರಣವಾಗಿ ನನಗೆ ಗಾಯಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಏಕೆಂದರೆ ದೇವರು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾರೆ; ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:17
24 ತಿಳಿವುಗಳ ಹೋಲಿಕೆ  

ನನ್ನನ್ನು ಒಡೆದೊಡೆದು ಶಿಥಿಲಪಡಿಸಿ ಶೂರನ ಹಾಗೆ ನನ್ನ ಮೇಲೆ ಓಡಿಬರುತ್ತಾನೆ.


ಆಗ ಯೆಹೋವನು ಸೈತಾನನಿಗೆ - ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟಿಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವದಿಲ್ಲ; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶನಮಾಡುವದಕ್ಕೆ ನೀನು ನನ್ನನ್ನು ಪ್ರೇರಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ ಅಂದನು.


ನನ್ನಲ್ಲಿ ನ್ಯಾಯವಿದ್ದರೂ ಸುಳ್ಳುಗಾರನೆನಿಸಿಕೊಂಡಿದ್ದೇನೆ, ನಾನು ನಿರ್ದೋಷಿಯಾಗಿದ್ದರೂ ಆತನ ಬಾಣದ ಪೆಟ್ಟು ವಿಪರೀತವಾಗಿದೆ ಎಂದು ಹೇಳಿಕೊಂಡಿದ್ದಾನೆ.


ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.


ಯೇಸು - ಇವನೂ ಪಾಪಮಾಡಲಿಲ್ಲ, ಇವನ ತಂದೆತಾಯಿಗಳೂ ಪಾಪಮಾಡಲಿಲ್ಲ; ದೇವರ ಕ್ರಿಯೆಗಳು ಇವನಲ್ಲಿ ತೋರಿಬರುವದಕ್ಕೆ ಇದಾಯಿತು.


ಜಜ್ಜಿದ ದಂಟನ್ನು ಮುರಿದುಹಾಕದೆಯೂ ಆರಿಹೋಗುತ್ತಿರುವ ದೀಪವನ್ನು ನಂದಿಸದೆಯೂ ನ್ಯಾಯವನ್ನು ದಿಗ್ವಿಜಯಕ್ಕಾಗಿ ಕಳುಹಿಸಿಕೊಡುವನು.


ಕಟ್ಟಿದ ಮೇಲೆ ಮಳೆ ಸುರಿಯಿತು; ಹಳ್ಳಗಳು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆಗ ಅದು ಧಡಮ್ಮನೆ ಕಡುಕೊಂಡು ಬಿತ್ತು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಒಡೆದುಹಾಕುವೆನು; ಅದನ್ನು ನಾಶಮಾಡಲಿಕ್ಕೆ ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವದು, [ನನ್ನ] ರೋಷದಿಂದ ಆನೆಕಲ್ಲುಗಳು ಸುರಿಯುವವು;


ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಸುಂಟರಗಾಳಿಯು, ಹೊರಟಿದೆ; ಅದು ದುಷ್ಟರ ತಲೆಯ ಮೇಲೆ ಹೊಡೆಯುವದು.


ನಾನು ನ್ಯಾಯವನ್ನು ನೂಲನ್ನಾಗಿಯೂ ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಅಸತ್ಯದ ಆಶ್ರಯವನ್ನು ಬಡಿದುಕೊಂಡು ಹೋಗುವದು, ಜಲಪ್ರವಾಹವು [ಮೋಸದ] ಮರೆಯನ್ನು ಮುಣುಗಿಸುವದು.


ನಿನ್ನ ಸುಂಟರಗಾಳಿಯಿಂದ ಅವರನ್ನು ಬೆನ್ನಟ್ಟು; ತುಫಾನಿನಿಂದ ಅವರನ್ನು ಕಳವಳಗೊಳಿಸು.


ನಿನ್ನ ಜಲಪಾತಗಳಿಂದುಂಟಾಗುವ ಮಹಾಘೋಷವು ಒಂದು ಪ್ರವಾಹವು ಮತ್ತೊಂದು ಪ್ರವಾಹವನ್ನು ಕೂಗುತ್ತದೋ ಎಂಬಂತಿರುವದು. ಹಾಗೆಯೇ ನೀನು ಅಲ್ಲಕಲ್ಲೋಲವಾದ [ದುಃಖ ಪ್ರವಾಹದ] ತೆರೆಗಳನ್ನು ನನ್ನ ತಲೆಯ ಮೇಲೆ ದಾಟಿಸಿದಿಯಲ್ಲಾ.


ಯೆಹೋವನ ಗರ್ಜನೆಗೆ ದೇವದಾರುವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ; ಯೆಹೋವನು ಲೆಬನೋನ್ ಪರ್ವತದಲ್ಲಿನ ಮಹಾ ದೇವದಾರುಗಳನ್ನೂ ಮುರಿದುಬಿಡುತ್ತಾನೆ.


ವೃಥಾದ್ರೋಹಿಗಳಿಗೆ ಆಶಾಭಂಗವಾಗಬೇಕೇ ಹೊರತು ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು.


ನನ್ನನ್ನು ಬಿರುಗಾಳಿಗೆ ಎತ್ತಿ ತೂರಬಿಟ್ಟು ಅದರ ಆರ್ಭಟದಲ್ಲಿ ಮಾಯಮಾಡುತ್ತೀ.


ಆದರೆ ನನ್ನ ಕೈ ಯಾವ ಬಲಾತ್ಕಾರವನ್ನೂ ಮಾಡಿರಲಿಲ್ಲವಲ್ಲಾ, ನನ್ನ ವಿಜ್ಞಾಪನೆಯು ನಿರ್ಮಲವಾದದ್ದು.


ನಾನು ನೆಮ್ಮದಿಯಿಂದಿದ್ದಾಗ ಆತನು ನನ್ನನ್ನು ಒಡೆದುಹಾಕಿದನು; ಕತ್ತು ಹಿಡಿದು ನನ್ನನ್ನು ಚೂರು ಚೂರು ಮಾಡಿದನು. ನನ್ನನ್ನು ಗುರಿಮಾಡಿಕೊಂಡಿದ್ದಾನೆ;


ಬಳಿಕ ಅವನಿಗೆ ವಿಪರೀತ ಬಾಧೆ ಎಂದು ತಿಳಿದು ಏಳು ದಿನಗಳವರೆಗೆ ಹಗಲಿರುಳೂ ನೆಲದ ಮೇಲೆ ಅವನೊಂದಿಗೆ ಕುಳಿತು ಅವನ ಸಂಗಡ ಒಬ್ಬರೂ ಮಾತಾಡದೆಯೇ ಇದ್ದರು.


ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟು ಯೋಬನ ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ಕೆಟ್ಟ ಕುರುಗಳನ್ನು ಹುಟ್ಟಿಸಿ ಅವನನ್ನು ಬಾಧಿಸಿದನು.


ನಾನು ಕರೆಸಿದಾಗ ಆತನು ನನಗೆ ಕಾಣಿಸಿಕೊಂಡಿದ್ದರೂ ನನ್ನ ವಿಜ್ಞಾಪನೆಯನ್ನು ಲಾಲಿಸುವನೆಂದು ನಂಬುತ್ತಿರಲಿಲ್ಲ.


ನೀನು ನನ್ನನ್ನು ನಿರ್ಮಿಸಿ ರೂಪಿಸಿದ್ದರೂ ಈಗ ಮನಸ್ಸು ಬೇರೆ ಮಾಡಿಕೊಂಡು ನನ್ನನ್ನು ನಾಶನ ಮಾಡಿಬಿಡುವಿಯಾ?


ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿದೆ, ದೇವರು ಊದಿದ ಶ್ವಾಸವು ನನ್ನ ಮೂಗಿನಲ್ಲಿ ಇನ್ನೂ ಆಡುತ್ತಿದೆ [ಕೇಳಿರಿ]!


ಆಹಾ, ಆತನು ನನ್ನಲ್ಲಿ ವಿರೋಧಕ್ಕೆ ಕಾರಣಗಳನ್ನು ಕಂಡುಹಿಡಿಯುತ್ತಾ ನನ್ನನ್ನು ಶತ್ರುವೆಂದೆಣಿಸಿಕೊಂಡಿದ್ದಾನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು